AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2021 | 5:04 PM

Share

ಭೋಪಾಲ್​: ಮಧ್ಯಪ್ರದೇಶದ ಭೋಪಾಲ್​ ಮತ್ತು ಇಂಧೋರ್​​ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬೆದರಿಕೆ ಹಾಕಿದ್ದ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಧ್ಯಪ್ರದೇಶದ ಶುಜಾಲ್​​ಪುರದವನು ಎಂಬುದು ವಿಚಾರಣೆಯ ವೇಳೆ ಗೊತ್ತಾಗಿದೆ.

ಭೋಪಾಲ್​ನ ಗಾಂಧಿನಗರ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಅರುಣ್​ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜಾ ಭೋಜ್​ ಏರ್​​ಪೋರ್ಟ್​ಗೆ ಮಂಗಳವಾರ ಸಂಜೆ 5ಗಂಟೆಯ ಹೊತ್ತಿಗೆ ಅಪರಿಚಿತ ಕರೆಯೊಂದು ಬಂದಿತ್ತು. ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏರ್​ಪೋರ್ಟ್​ನವರು ಕೂಡಲೇ ನಮಗೆ ಕರೆ ಮಾಡಿ ವಿಷಯ ತಿಳಿಸಿದರು. ನಾವು ಕಾಲ್​ ಟ್ರೇಸ್​ ಮಾಡಿ ಈತನನ್ನು ಪತ್ತೆಹಚ್ಚಿದ್ದೇವೆ. ವಿಚಾರಣೆಗಾಗಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ. ಇವನನ್ನು ಸಮಗ್ರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಈತನಿಂದ ಕರೆ ಬಂದ ಬಳಿಕ ಮುಂಬೈಗೆ ಭೋಪಾಲ್​​ನಿಂದ ತೆರಳಿದ್ದ ವಿಮಾನವನ್ನು ಸರಿಯಾಗಿ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Pvt Schools Fees Torcher : ‘ಸಚಿವರು ಖಾಸಗಿ ಶಾಲೆಗಳ ಜತೆ ಶಾಮೀಲಾದಂತೆ ಕಾಣ್ತಿದೆ’

Man who threatens to hijack planes is arrested in Bhopal

Published On - 5:02 pm, Wed, 9 June 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ