ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​
ಸಾಂದರ್ಭಿಕ ಚಿತ್ರ
Follow us
| Updated By: Lakshmi Hegde

Updated on:Jun 09, 2021 | 5:04 PM

ಭೋಪಾಲ್​: ಮಧ್ಯಪ್ರದೇಶದ ಭೋಪಾಲ್​ ಮತ್ತು ಇಂಧೋರ್​​ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬೆದರಿಕೆ ಹಾಕಿದ್ದ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಧ್ಯಪ್ರದೇಶದ ಶುಜಾಲ್​​ಪುರದವನು ಎಂಬುದು ವಿಚಾರಣೆಯ ವೇಳೆ ಗೊತ್ತಾಗಿದೆ.

ಭೋಪಾಲ್​ನ ಗಾಂಧಿನಗರ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಅರುಣ್​ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜಾ ಭೋಜ್​ ಏರ್​​ಪೋರ್ಟ್​ಗೆ ಮಂಗಳವಾರ ಸಂಜೆ 5ಗಂಟೆಯ ಹೊತ್ತಿಗೆ ಅಪರಿಚಿತ ಕರೆಯೊಂದು ಬಂದಿತ್ತು. ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏರ್​ಪೋರ್ಟ್​ನವರು ಕೂಡಲೇ ನಮಗೆ ಕರೆ ಮಾಡಿ ವಿಷಯ ತಿಳಿಸಿದರು. ನಾವು ಕಾಲ್​ ಟ್ರೇಸ್​ ಮಾಡಿ ಈತನನ್ನು ಪತ್ತೆಹಚ್ಚಿದ್ದೇವೆ. ವಿಚಾರಣೆಗಾಗಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ. ಇವನನ್ನು ಸಮಗ್ರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಈತನಿಂದ ಕರೆ ಬಂದ ಬಳಿಕ ಮುಂಬೈಗೆ ಭೋಪಾಲ್​​ನಿಂದ ತೆರಳಿದ್ದ ವಿಮಾನವನ್ನು ಸರಿಯಾಗಿ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Pvt Schools Fees Torcher : ‘ಸಚಿವರು ಖಾಸಗಿ ಶಾಲೆಗಳ ಜತೆ ಶಾಮೀಲಾದಂತೆ ಕಾಣ್ತಿದೆ’

Man who threatens to hijack planes is arrested in Bhopal

Published On - 5:02 pm, Wed, 9 June 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು