AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ.

ವಿಮಾನ ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗ್ತೇನೆ ಎಂದು ಬೆದರಿಕೆ ಹಾಕಿದ್ದವ ಅರೆಸ್ಟ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 09, 2021 | 5:04 PM

Share

ಭೋಪಾಲ್​: ಮಧ್ಯಪ್ರದೇಶದ ಭೋಪಾಲ್​ ಮತ್ತು ಇಂಧೋರ್​​ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ, ಪಾಕಿಸ್ತಾನಕ್ಕೆ ತೆಗೆದುಕೊಂಡು ಹೋಗುತ್ತೇನೆ ಎಂದು ಬೆದರಿಕೆ ಹಾಕಿದ್ದ 34 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಧ್ಯಪ್ರದೇಶದ ಶುಜಾಲ್​​ಪುರದವನು ಎಂಬುದು ವಿಚಾರಣೆಯ ವೇಳೆ ಗೊತ್ತಾಗಿದೆ.

ಭೋಪಾಲ್​ನ ಗಾಂಧಿನಗರ ಪೊಲೀಸ್​ ಠಾಣೆಯ ಮುಖ್ಯ ಅಧಿಕಾರಿ ಅರುಣ್​ ಶರ್ಮಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜಾ ಭೋಜ್​ ಏರ್​​ಪೋರ್ಟ್​ಗೆ ಮಂಗಳವಾರ ಸಂಜೆ 5ಗಂಟೆಯ ಹೊತ್ತಿಗೆ ಅಪರಿಚಿತ ಕರೆಯೊಂದು ಬಂದಿತ್ತು. ವಿಮಾನ ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದ. ಏರ್​ಪೋರ್ಟ್​ನವರು ಕೂಡಲೇ ನಮಗೆ ಕರೆ ಮಾಡಿ ವಿಷಯ ತಿಳಿಸಿದರು. ನಾವು ಕಾಲ್​ ಟ್ರೇಸ್​ ಮಾಡಿ ಈತನನ್ನು ಪತ್ತೆಹಚ್ಚಿದ್ದೇವೆ. ವಿಚಾರಣೆಗಾಗಿ ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ವಿಮಾನ ಅಪಹರಣ ಮಾಡುವ ಬೆದರಿಕೆ ಹಾಕಿದ್ದ ಈತನನ್ನು ಮಂಗಳವಾರ ರಾತ್ರಿ ಶುಜಾಲ್​ಪುರ್​ ಪಟ್ಟಣದಲ್ಲಿ (ಭೋಪಾಲ್​ಗಿಂತ 100 ಕಿಮೀ ದೂರದಲ್ಲಿದೆ) ಬಂಧಿಸಲಾಗಿದೆ. ಇವನನ್ನು ಸಮಗ್ರವಾಗಿ ವಿಚಾರಣೆಗೆ ಒಳಪಡಿಸಲಾಗಿದೆ. ಈತನಿಂದ ಕರೆ ಬಂದ ಬಳಿಕ ಮುಂಬೈಗೆ ಭೋಪಾಲ್​​ನಿಂದ ತೆರಳಿದ್ದ ವಿಮಾನವನ್ನು ಸರಿಯಾಗಿ ತಪಾಸಣೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನೂ ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ:Pvt Schools Fees Torcher : ‘ಸಚಿವರು ಖಾಸಗಿ ಶಾಲೆಗಳ ಜತೆ ಶಾಮೀಲಾದಂತೆ ಕಾಣ್ತಿದೆ’

Man who threatens to hijack planes is arrested in Bhopal

Published On - 5:02 pm, Wed, 9 June 21

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ