AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಕೇರಳದಲ್ಲಿ ಮಂಕಿಪಾಕ್ಸ್ ಲಕ್ಷಣಗಳಿದ್ದ ವ್ಯಕ್ತಿ ಸಾವು; ಉನ್ನತ ಮಟ್ಟದ ತನಿಖೆಗೆ ಆದೇಶ

ಚಿಕಿತ್ಸೆ ಪಡೆಯಲು ಈ ಯುವಕ ತಡವಾಗಿ ಬಂದಿದ್ದೇಕೆ ಎನ್ನುವ ಬಗ್ಗೆಯೂ ತನಿಖೆ ಆಗಬೇಕಿದೆ. ಪುನ್ನಯೂರ್​ನಲ್ಲಿ ಈ ಸಂಬಂಧ ವಿಶೇಷ ಆರೋಗ್ಯ ಇಲಾಖೆಯು ಅಧಿಕಾರಿಗಳ ಸಭೆ ಕರೆದಿದೆ.

Monkeypox: ಕೇರಳದಲ್ಲಿ ಮಂಕಿಪಾಕ್ಸ್ ಲಕ್ಷಣಗಳಿದ್ದ ವ್ಯಕ್ತಿ ಸಾವು; ಉನ್ನತ ಮಟ್ಟದ ತನಿಖೆಗೆ ಆದೇಶ
ಕೇರಳದಲ್ಲಿ ವಿದೇಶಗಳಿಂದ ಬರುವವರನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸಲಾಗುತ್ತಿದೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 01, 2022 | 10:57 AM

Share

ಪತ್ತನಂತಿಟ್ಟ: ಮಂಕಿಪಾಕ್ಸ್​ ಲಕ್ಷಣಗಳಿಂದ (Monkeypox) ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George)keral ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ತ್ರಿಶೂರ್​ ಜಿಲ್ಲೆ ಚಾವಕ್ಕಾಡ್ ಕುರಂಜಿಯೂರ್​ ಮೂಲದ ಈ ಯುವಕನು ವಿದೇಶದಲ್ಲಿ ಮಾಡಿಸಿಕೊಂಡಿದ್ದ ಮಂಕಿಪಾಕ್ಸ್​ ತಪಾಸಣೆಯ ವರದಿ ಪಾಸಿಟಿವ್ ಬಂದಿತ್ತು. ‘ಹೊರದೇಶದಲ್ಲಿ ಮಾಡಿದ್ದ ಪರೀಕ್ಷೆಯು ಪಾಸಿಟಿವ್ ಬಂದಿತ್ತು. ತ್ರಿಶೂರ್​ನಲ್ಲಿ ಅವನು ಚಿಕಿತ್ಸೆಗೆ ಬಂದಿದ್ದ. ವಿಪರೀತ ಸುಸ್ತು ಮತ್ತು ಮಿದುಳಿನ ಉರಿಯೂತದಿಂದ ಬಳಲುತ್ತಿದ್ದ. ಮಂಕಿಪಾಕ್ಸ್​ ಸಾವು ತರುವ ರೋಗವಲ್ಲ ಎಂಬುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು’ ಎಂದು ಸಚಿವೆ ಜಾರ್ಜ್ ಹೇಳಿದರು.

ಚಿಕಿತ್ಸೆ ಪಡೆಯಲು ಈ ಯುವಕ ತಡವಾಗಿ ಬಂದಿದ್ದೇಕೆ ಎನ್ನುವ ಬಗ್ಗೆಯೂ ತನಿಖೆ ಆಗಬೇಕಿದೆ. ಪುನ್ನಯೂರ್​ನಲ್ಲಿ ಈ ಸಂಬಂಧ ವಿಶೇಷ ಆರೋಗ್ಯ ಇಲಾಖೆಯು ಅಧಿಕಾರಿಗಳ ಸಭೆ ಕರೆದಿದೆ. ಈ ಯುವಕ ಯಾರೆಲ್ಲರ ಸಂಪರ್ಕ ಬಂದಿರಬಹುದು ಎನ್ನುವ ಪಟ್ಟಿಯೊಂದನ್ನು ಸಿದ್ಧಪಡಿಸಲಾಗಿದೆ. ಎಲ್ಲ ಸಂಪರ್ಕಿತರೂ ಕಡ್ಡಾಯವಾಗಿ ಐಸೊಲೇಶನ್​ಗೆ ಹೋಗಬೇಕು ಎಂದು ಸೂಚಿಸಲಾಗಿದೆ.

ಭಾರತದಲ್ಲಿ ಈವರೆಗೆ ಐದು ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮೂರು ಕೇರಳದಿಂದಲೇ ವರದಿಯಾಗಿವೆ. ಒಂದು ದೆಹಲಿಯಲ್ಲಿ ಮತ್ತೊಂದು ಆಂಧ್ರ ಪ್ರದೇಶದಲ್ಲಿ ಗುಂಟೂರಿನಲ್ಲಿ ವರದಿಯಾಗಿದೆ. ವಿಶ್ವದ ವಿವಿಧೆಡೆ ಮಂಕಿಪಾಕ್ಸ್​ ಸೋಂಕಿತರ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

‘ಅನಗತ್ಯ ಭೀತಿ ಭೇಡ. ದೇಶ ಮತ್ತುಉ ಸಮಾಜವು ಎಚ್ಚರದಿಂದ ಇದ್ದರೆ ಸಾಕು. ಮಂಕಿಪಾಕ್ಸ್​ ಲಕ್ಷಣಗಳು ಕಂಡುಬಂದ ತಕ್ಷಣ ಸೋಂಕಿತರು ಆರೋಗ್ಯ ಇಲಾಖೆಗೆ ಮಾಹಿತಿ ಕೊಡಬೇಕು’ ಎಂದು ಎಎನ್​ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿ.ಕೆ.ಪೌಲ್ ತಿಳಿಸಿದ್ದರು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ (World Health Organization – WHO) 78 ದೇಶಗಳ 18,000 ಮಂದಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ.

‘ದೇಶಗಳು, ಸಮುದಾಯಗಳು ಮತ್ತು ವ್ಯಕ್ತಿಗಳು ಎಚ್ಚರಿಕೆ ವಹಿಸಿದರೆ ಮಂಕಿಪಾಕ್ಸ್​ ಸೋಂಕು ನಿಯಂತ್ರಿಸಬಹುದು. ಸೋಂಕಿನ ಆತಂಕ ಎದುರಿಸುತ್ತಿರುವ ಗುಂಪುಗಳನ್ನು ಗುರುತಿಸಿ, ರೋಗ ಹರಡುವುದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಡೈರೆಕ್ಟರ್ ಜನರಲ್ ಡಾ ಟೆಡ್ರೊಸ್ ಹೇಳಿದ್ದರು.

ಪ್ರಾಣಿಗಳಿಂದ ಹರಡುವ ಮಂಕಿಪಾಕ್ಸ್​ ರೋಗಕ್ಕೆ ವೈರಾಣು ಮುಖ್ಯ ಕಾರಣ. ಸ್ಮಾಲ್​ಪಾಕ್ಸ್​ ಕಾಯಿಲೆ ಉಂಟುಮಾಡುವ ವೈರಸ್ ಕುಟುಂಬಕ್ಕೆ ಸೇರಿದ್ದ ವೈರಸ್​ನಿಂದಲೇ ಮಂಕಿಪಾಕ್ಸ್ ಸಹ ಹರಡುತ್ತದೆ. ಮಂಕಿಪಾಕ್ಸ್ ಕಾಯಿಲೆಯು ಪಶ್ಚಿಮ ಮತ್ತು ಕೇಂದ್ರ ಆಫ್ರಿಕಾ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಹಲವು ಹೊಸ ದೇಶಗಳಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿದೆ.

Published On - 10:57 am, Mon, 1 August 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ