AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

ಆಪರೇಷನ್ ಸಿಂಧೂರ್ ಅನ್ನು ಅಪಹಾಸ್ಯ ಮಾಡುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿವಾದಾತ್ಮಕ ಹೇಳಿಕೆ ಭಾರತದಲ್ಲಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಇದು ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ತೀವ್ರ ಟೀಕೆಗೆ ಕಾರಣವಾಯಿತು. ಭಗವಂತ್ ಮಾನ್ ಭಾರತೀಯ ಸಶಸ್ತ್ರ ಪಡೆಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತು.

ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ
Pritpal Singh Baliawal
ಸುಷ್ಮಾ ಚಕ್ರೆ
|

Updated on: Jun 03, 2025 | 9:57 PM

Share

ನವದೆಹಲಿ, ಜೂನ್ 3: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರ ವಿಲಕ್ಷಣ ಹಾಸ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ಆಪರೇಷನ್ ಸಿಂಧೂರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮನೆಮನೆಗೆ ಸಿಂಧೂರ ಹಂಚುತ್ತಿದೆ ಎನ್ನಲಾಗಿದೆ. “ಮೋದಿ ಹೆಸರಿನಲ್ಲಿ ನೀವು ಸಿಂಧೂರ ಧರಿಸುತ್ತೀರಾ? ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ?” ಎಂದು ಪ್ರಶ್ನಿಸಿದ್ದರು. ಇದು ರಾಜಕೀಯ ವಲಯಗಳಲ್ಲಿ ತಕ್ಷಣವೇ ಆಕ್ರೋಶವನ್ನು ಹುಟ್ಟುಹಾಕಿತು.

ಬಿಜೆಪಿ ಪಂಜಾಬ್ ವಕ್ತಾರ ಪ್ರೀತ್ಪಾಲ್ ಸಿಂಗ್ ಬಲಿಯಾವಾಲ್ ಅವರು ಸಿಎಂ ಭಗವಂತ್ ಮಾನ್ ಅವರ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. “ಸಿಎಂ ಭಗವಂತ್ ಮಾನ್ ಎಲ್ಲಾ ಮಿತಿಗಳನ್ನು ಮೀರಿದ್ದಾರೆ! ಆಪರೇಷನ್ ಸಿಂಧೂರ್ ಅನ್ನು ಅಣಕಿಸುವ ಭರದಲ್ಲಿ ಅವರು ನಾಚಿಕೆಯಿಲ್ಲದೆ “ನೀವು ಮೋದಿ ಹೆಸರಿನಲ್ಲಿ ಸಿಂಧೂರ ಧರಿಸುತ್ತೀರಾ? ಇದು ಒಂದು ರಾಷ್ಟ್ರ, ಒಂದು ಪತಿಯೇ? ಎಂದು ಕೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ.

ಇದನ್ನೂ ಓದಿ: ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಆಪರೇಷನ್ ಸಿಂಧೂರ್ ಭಯೋತ್ಪಾದಕರು ಹಿಂದೂಗಳ ಧರ್ಮವನ್ನು ಪರಿಶೀಲಿಸಿದ ನಂತರ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿದೆ ಎಂದು ಬಲಿಯಾವಾಲ್ ಸ್ಪಷ್ಟಪಡಿಸಿದರು. ಸಿಂಧೂರ ಮಹಿಳೆಯರನ್ನು ಗುರುತಿಸಲು ಬಳಸುವ ಮಾರ್ಕರ್ ಆಗಿದೆ. ಭಗವಂತ್ ಮಾನ್ “ಶೂನ್ಯ ಸಂವೇದನೆ” ಹೊಂದಿದ್ದಾರೆ ಎಂದು ಅವರು ಆರೋಪಿಸಿದರು. ಅವರು ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ್ದಾರೆ, ವೀರ ನಾರಿಯರನ್ನು ಅವಮಾನಿಸಿದ್ದಾರೆ ಎಂದು ಟೀಕಿಸಿದರು.

ಹಾಗೇ, ಬಿಜೆಪಿ ಪಂಜಾಬ್ ವಕ್ತಾರರು ಭಗವಂತ್ ಮಾನ್ ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಭಾರತದಲ್ಲಿ ನೆಲೆಸಿರುವ ಭಗವಂತ್ ಮಾನ್ ಆತ್ಮದಲ್ಲಿ ಭಾರತ ವಿರೋಧಿ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ನಷ್ಟ ಎಷ್ಟಾಯ್ತು ಎಂಬುದಕ್ಕಿಂತ ಫಲಿತಾಂಶ ಮುಖ್ಯ; ಆಪರೇಷನ್ ಸಿಂಧೂರ್ ಕುರಿತು ಸಿಡಿಎಸ್ ಅನಿಲ್ ಚೌಹಾಣ್

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು, ಇದರಲ್ಲಿ 26 ಅಮಾಯಕ ನಾಗರಿಕರು ಸಾವನ್ನಪ್ಪಿದರು. ಭಾರತೀಯ ಪಡೆಗಳು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿದವು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ 100 ಕ್ಕೂ ಹೆಚ್ಚು ಉಗ್ರಗಾಮಿಗಳು ಮಿಲಿಟರಿ ದಾಳಿಯಲ್ಲಿ ಕೊಲ್ಲಲ್ಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ