AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ

ಆಪರೇಷನ್ ಸಿಂಧೂರ್ ಅನ್ನು ಅಪಹಾಸ್ಯ ಮಾಡುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವಿವಾದಾತ್ಮಕ ಹೇಳಿಕೆ ಭಾರತದಲ್ಲಿ ರಾಜಕೀಯ ವಿವಾದವನ್ನು ಹುಟ್ಟುಹಾಕಿದೆ. ಇದು ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ತೀವ್ರ ಟೀಕೆಗೆ ಕಾರಣವಾಯಿತು. ಭಗವಂತ್ ಮಾನ್ ಭಾರತೀಯ ಸಶಸ್ತ್ರ ಪಡೆಗಳನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿತು.

ನಾಚಿಕೆಗೇಡಿನ ಸಂಗತಿ; ಆಪರೇಷನ್ ಸಿಂಧೂರ್ ಕುರಿತ ಹೇಳಿಕೆಗೆ ಭಗವಂತ್ ಮಾನ್​ ವಿರುದ್ಧ ಬಿಜೆಪಿ ಟೀಕೆ
Pritpal Singh Baliawal
ಸುಷ್ಮಾ ಚಕ್ರೆ
|

Updated on: Jun 03, 2025 | 9:57 PM

Share

ನವದೆಹಲಿ, ಜೂನ್ 3: ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರ ವಿಲಕ್ಷಣ ಹಾಸ್ಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ಆಪರೇಷನ್ ಸಿಂಧೂರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮನೆಮನೆಗೆ ಸಿಂಧೂರ ಹಂಚುತ್ತಿದೆ ಎನ್ನಲಾಗಿದೆ. “ಮೋದಿ ಹೆಸರಿನಲ್ಲಿ ನೀವು ಸಿಂಧೂರ ಧರಿಸುತ್ತೀರಾ? ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ?” ಎಂದು ಪ್ರಶ್ನಿಸಿದ್ದರು. ಇದು ರಾಜಕೀಯ ವಲಯಗಳಲ್ಲಿ ತಕ್ಷಣವೇ ಆಕ್ರೋಶವನ್ನು ಹುಟ್ಟುಹಾಕಿತು.

ಬಿಜೆಪಿ ಪಂಜಾಬ್ ವಕ್ತಾರ ಪ್ರೀತ್ಪಾಲ್ ಸಿಂಗ್ ಬಲಿಯಾವಾಲ್ ಅವರು ಸಿಎಂ ಭಗವಂತ್ ಮಾನ್ ಅವರ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. “ಸಿಎಂ ಭಗವಂತ್ ಮಾನ್ ಎಲ್ಲಾ ಮಿತಿಗಳನ್ನು ಮೀರಿದ್ದಾರೆ! ಆಪರೇಷನ್ ಸಿಂಧೂರ್ ಅನ್ನು ಅಣಕಿಸುವ ಭರದಲ್ಲಿ ಅವರು ನಾಚಿಕೆಯಿಲ್ಲದೆ “ನೀವು ಮೋದಿ ಹೆಸರಿನಲ್ಲಿ ಸಿಂಧೂರ ಧರಿಸುತ್ತೀರಾ? ಇದು ಒಂದು ರಾಷ್ಟ್ರ, ಒಂದು ಪತಿಯೇ? ಎಂದು ಕೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ.

ಇದನ್ನೂ ಓದಿ: ಇದೇನು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಆಪರೇಷನ್ ಸಿಂಧೂರ್ ಬಗ್ಗೆ ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ

ಆಪರೇಷನ್ ಸಿಂಧೂರ್ ಭಯೋತ್ಪಾದಕರು ಹಿಂದೂಗಳ ಧರ್ಮವನ್ನು ಪರಿಶೀಲಿಸಿದ ನಂತರ ಅವರ ಹತ್ಯೆಗೆ ಪ್ರತಿಕ್ರಿಯೆಯಾಗಿದೆ ಎಂದು ಬಲಿಯಾವಾಲ್ ಸ್ಪಷ್ಟಪಡಿಸಿದರು. ಸಿಂಧೂರ ಮಹಿಳೆಯರನ್ನು ಗುರುತಿಸಲು ಬಳಸುವ ಮಾರ್ಕರ್ ಆಗಿದೆ. ಭಗವಂತ್ ಮಾನ್ “ಶೂನ್ಯ ಸಂವೇದನೆ” ಹೊಂದಿದ್ದಾರೆ ಎಂದು ಅವರು ಆರೋಪಿಸಿದರು. ಅವರು ಭಾರತೀಯ ಸೇನೆಯನ್ನು ಅಪಹಾಸ್ಯ ಮಾಡಿದ್ದಾರೆ, ವೀರ ನಾರಿಯರನ್ನು ಅವಮಾನಿಸಿದ್ದಾರೆ ಎಂದು ಟೀಕಿಸಿದರು.

ಹಾಗೇ, ಬಿಜೆಪಿ ಪಂಜಾಬ್ ವಕ್ತಾರರು ಭಗವಂತ್ ಮಾನ್ ಅವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಭಾರತದಲ್ಲಿ ನೆಲೆಸಿರುವ ಭಗವಂತ್ ಮಾನ್ ಆತ್ಮದಲ್ಲಿ ಭಾರತ ವಿರೋಧಿ ಮನಸ್ಥಿತಿಯನ್ನು ಹೊಂದಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಇದನ್ನೂ ಓದಿ: ನಷ್ಟ ಎಷ್ಟಾಯ್ತು ಎಂಬುದಕ್ಕಿಂತ ಫಲಿತಾಂಶ ಮುಖ್ಯ; ಆಪರೇಷನ್ ಸಿಂಧೂರ್ ಕುರಿತು ಸಿಡಿಎಸ್ ಅನಿಲ್ ಚೌಹಾಣ್

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ನಡೆಸಿದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಲಾಯಿತು, ಇದರಲ್ಲಿ 26 ಅಮಾಯಕ ನಾಗರಿಕರು ಸಾವನ್ನಪ್ಪಿದರು. ಭಾರತೀಯ ಪಡೆಗಳು ಆಪರೇಷನ್ ಸಿಂಧೂರ್ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡಿದವು. ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನಂತಹ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ 100 ಕ್ಕೂ ಹೆಚ್ಚು ಉಗ್ರಗಾಮಿಗಳು ಮಿಲಿಟರಿ ದಾಳಿಯಲ್ಲಿ ಕೊಲ್ಲಲ್ಪಟ್ಟರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ