AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೆಜಿಗೆ 99,999ರೂಗೆ ಮಾರಾಟವಾದ ಅಸ್ಸಾಂನ ಮನೋಹರಿ ಗೋಲ್ಡ್​ ಟೀ ಪೌಡರ್

ಒಂದು ಕೆಜಿ ಮನೋಹರಿ ಗೋಲ್ಡ್​ ಟೀ ಪೌಡರ್ ಬರೋಬ್ಬರಿ 99,999ರೂ ಗೆ ಮಾರಾಟವಾಗುವ ಮೂಲಕ ತನ್ನದೇ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ.

ಒಂದು ಕೆಜಿಗೆ 99,999ರೂಗೆ ಮಾರಾಟವಾದ ಅಸ್ಸಾಂನ ಮನೋಹರಿ ಗೋಲ್ಡ್​ ಟೀ ಪೌಡರ್
ಮನೋಹರಿ ಗೋಲ್ಡ್​ ಟೀ
TV9 Web
| Edited By: |

Updated on: Dec 14, 2021 | 4:32 PM

Share

ಗುಹಾವಟಿ: ಅಸ್ಸಾಂನ ಅಪರೂಪದ ಹಾಗೂ ಪ್ರಸಿದ್ಧ ಮನೋಹರಿ ಗೋಲ್ಡ್​ ಟೀ ಪೌಡರ್​ ಈ ಬಾರಿಯೂ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದೆ. ಅಸ್ಸಾಂನಲ್ಲಿ ಮನೋಹರಿ ಗೋಲ್ಡ್​ ಚಹಾ ಪುಡಿ ಸ್ವಾದಿಷ್ಟ ಭರಿತ ಚಹಾಪುಡಿಯೆಂದೇ ಪ್ರಸಿದ್ಧಿ ಪಡೆದಿದೆ. ಈ ಬಾರಿ ಒಂದು ಕೆಜಿ ಮನೋಹರಿ ಗೋಲ್ಡ್​ ಟೀ ಪೌಡರ್ ಬರೋಬ್ಬರಿ 99,999ರೂ ಗೆ ಮಾರಾಟವಾಗುವ ಮೂಲಕ ತನ್ನದೇ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ. ಹರಾಜಿನಲ್ಲಿ ಸೌರವ್​ ಟೀ ಟ್ರೇಡರ್ಸ್​ ಕಂಪನಿ 99,999ರೂ ಗೆ ಬಿಡ್​ ಮಾಡಿದೆ. ಚಹಾಪುಡಿಯನ್ನು ಗುಹಾವಟಿ ಮೂಲದ ವಿಷ್ಣು ಟೀ ಕಂಪನಿ ಖರೀದಿಸಿದೆ. ಈ ಕಂಪನಿ ಆನ್ಲೈನಲ್ಲಿ ತಮ್ಮ ವೆಬ್ಸೈಟ್​ ಮೂಲಕ ವಿದೇಶಗಳಿಗೂ ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಮಾರಾಟ ಮಾಡುತ್ತದೆ.

ಕಳೆದ ವರ್ಷ ಇದೇ ಮನೋಹರಿ ಗೋಲ್ಡ್​ ಟೀ ಪುಡಿ ಕಂಟೆಂಪರರಿ ಬ್ರೋಕರ್ಸ್ ಪ್ರೈವೇಟ್​ ಲಿಮಿಟೆಡ್​ನಿಂದ ಹರಾಜಿಗಿಟ್ಟಿದ್ದ ಒಂದು ಕಿಲೋ ಗ್ರಾಮ್​ಗೆ ಚಹಾಪುಡಿ75,000ರೂಗೆ ಮಾರಾಟವಾಗುವ ಮೂಲಕ ದಾಖಲೆ ಮಾಡಿತ್ತು. ಈ ಬಾರಿ 99,999ರೂ. ಮಾರಾಟವಾಗಿ ತನ್ನದೇ ದಾಖಲೆಯನ್ನು ಮುರಿದು, ತನ್ನ ಉತ್ಕೃಷ್ಟತೆಯನ್ನು ಸಾಬೀತುಪಡಿಸಿಕೊಂಡಿದೆ. ಗುಹಾವಟಿ ಟೀ ಮಾರಾಟ ಕೇಂದ್ರದಲ್ಲಿ ನಡೆದ ಹರಾಜಿನಲ್ಲಿ ಮನೋಹರಿ ಗೋಲ್ಡ್​ ಚಹಾಪುಡಿ ಭಾರೀ ಮೊತ್ತಕ್ಕೆ ಮಾರಟವಾಗಿದೆ.

ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಎಳೆಯ ಎಲೆಗಳಿಂದ ಉತ್ಕೃಷ್ಟ ರೀತಿಯಲ್ಲಿ ತಯಾರಿಸಲಾಗುತ್ತದೆ. ಈ ಮಾದರಿಯ ಟೀ ಎಲೆಗಳು ಬೆಳಗಿನ ಜಾವ 4 ಗಂಟೆಯಿಂದ 6 ಗಂಟೆಯವರೆಗೆ ಮಾತ್ರ ದೊರೆಯುತ್ತದೆ. ಹೀಗಾಗಿ ಅಸ್ಸಾಂನ ಮನೋಹರಿ ಗೋಲ್ಡ್​ ಚಹಾಪುಡಿಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಭಾರೀ ಬೇಡಿಕೆಯಿದೆ. ಅಲ್ಲದೆ ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಭಾರತದ ಅತ್ಯಂತ ದುಬಾರಿ ಟೀ ಪೌಡರ್​ ಎಂದು ಹೇಳಲಾಗಿದೆ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ