AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೆಜಿಗೆ 99,999ರೂಗೆ ಮಾರಾಟವಾದ ಅಸ್ಸಾಂನ ಮನೋಹರಿ ಗೋಲ್ಡ್​ ಟೀ ಪೌಡರ್

ಒಂದು ಕೆಜಿ ಮನೋಹರಿ ಗೋಲ್ಡ್​ ಟೀ ಪೌಡರ್ ಬರೋಬ್ಬರಿ 99,999ರೂ ಗೆ ಮಾರಾಟವಾಗುವ ಮೂಲಕ ತನ್ನದೇ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ.

ಒಂದು ಕೆಜಿಗೆ 99,999ರೂಗೆ ಮಾರಾಟವಾದ ಅಸ್ಸಾಂನ ಮನೋಹರಿ ಗೋಲ್ಡ್​ ಟೀ ಪೌಡರ್
ಮನೋಹರಿ ಗೋಲ್ಡ್​ ಟೀ
TV9 Web
| Edited By: |

Updated on: Dec 14, 2021 | 4:32 PM

Share

ಗುಹಾವಟಿ: ಅಸ್ಸಾಂನ ಅಪರೂಪದ ಹಾಗೂ ಪ್ರಸಿದ್ಧ ಮನೋಹರಿ ಗೋಲ್ಡ್​ ಟೀ ಪೌಡರ್​ ಈ ಬಾರಿಯೂ ಮಾರಾಟದಲ್ಲಿ ಇತಿಹಾಸ ಸೃಷ್ಟಿಸಿದೆ. ಅಸ್ಸಾಂನಲ್ಲಿ ಮನೋಹರಿ ಗೋಲ್ಡ್​ ಚಹಾ ಪುಡಿ ಸ್ವಾದಿಷ್ಟ ಭರಿತ ಚಹಾಪುಡಿಯೆಂದೇ ಪ್ರಸಿದ್ಧಿ ಪಡೆದಿದೆ. ಈ ಬಾರಿ ಒಂದು ಕೆಜಿ ಮನೋಹರಿ ಗೋಲ್ಡ್​ ಟೀ ಪೌಡರ್ ಬರೋಬ್ಬರಿ 99,999ರೂ ಗೆ ಮಾರಾಟವಾಗುವ ಮೂಲಕ ತನ್ನದೇ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಸೃಷ್ಟಿಸಿದೆ. ಹರಾಜಿನಲ್ಲಿ ಸೌರವ್​ ಟೀ ಟ್ರೇಡರ್ಸ್​ ಕಂಪನಿ 99,999ರೂ ಗೆ ಬಿಡ್​ ಮಾಡಿದೆ. ಚಹಾಪುಡಿಯನ್ನು ಗುಹಾವಟಿ ಮೂಲದ ವಿಷ್ಣು ಟೀ ಕಂಪನಿ ಖರೀದಿಸಿದೆ. ಈ ಕಂಪನಿ ಆನ್ಲೈನಲ್ಲಿ ತಮ್ಮ ವೆಬ್ಸೈಟ್​ ಮೂಲಕ ವಿದೇಶಗಳಿಗೂ ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಮಾರಾಟ ಮಾಡುತ್ತದೆ.

ಕಳೆದ ವರ್ಷ ಇದೇ ಮನೋಹರಿ ಗೋಲ್ಡ್​ ಟೀ ಪುಡಿ ಕಂಟೆಂಪರರಿ ಬ್ರೋಕರ್ಸ್ ಪ್ರೈವೇಟ್​ ಲಿಮಿಟೆಡ್​ನಿಂದ ಹರಾಜಿಗಿಟ್ಟಿದ್ದ ಒಂದು ಕಿಲೋ ಗ್ರಾಮ್​ಗೆ ಚಹಾಪುಡಿ75,000ರೂಗೆ ಮಾರಾಟವಾಗುವ ಮೂಲಕ ದಾಖಲೆ ಮಾಡಿತ್ತು. ಈ ಬಾರಿ 99,999ರೂ. ಮಾರಾಟವಾಗಿ ತನ್ನದೇ ದಾಖಲೆಯನ್ನು ಮುರಿದು, ತನ್ನ ಉತ್ಕೃಷ್ಟತೆಯನ್ನು ಸಾಬೀತುಪಡಿಸಿಕೊಂಡಿದೆ. ಗುಹಾವಟಿ ಟೀ ಮಾರಾಟ ಕೇಂದ್ರದಲ್ಲಿ ನಡೆದ ಹರಾಜಿನಲ್ಲಿ ಮನೋಹರಿ ಗೋಲ್ಡ್​ ಚಹಾಪುಡಿ ಭಾರೀ ಮೊತ್ತಕ್ಕೆ ಮಾರಟವಾಗಿದೆ.

ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಎಳೆಯ ಎಲೆಗಳಿಂದ ಉತ್ಕೃಷ್ಟ ರೀತಿಯಲ್ಲಿ ತಯಾರಿಸಲಾಗುತ್ತದೆ. ಈ ಮಾದರಿಯ ಟೀ ಎಲೆಗಳು ಬೆಳಗಿನ ಜಾವ 4 ಗಂಟೆಯಿಂದ 6 ಗಂಟೆಯವರೆಗೆ ಮಾತ್ರ ದೊರೆಯುತ್ತದೆ. ಹೀಗಾಗಿ ಅಸ್ಸಾಂನ ಮನೋಹರಿ ಗೋಲ್ಡ್​ ಚಹಾಪುಡಿಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಭಾರೀ ಬೇಡಿಕೆಯಿದೆ. ಅಲ್ಲದೆ ಮನೋಹರಿ ಗೋಲ್ಡ್​ ಚಹಾಪುಡಿಯನ್ನು ಭಾರತದ ಅತ್ಯಂತ ದುಬಾರಿ ಟೀ ಪೌಡರ್​ ಎಂದು ಹೇಳಲಾಗಿದೆ.

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್