AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ, ಮ್ಯಾನೇಜರ್​ ಪಾವನಿ ನಾಪತ್ತೆ!

Vijayawada: ಗ್ರಾಹಕರಿಗೆ ಸೇರಿದ 10 ಕೆಜಿ ಚಿನ್ನ ಕಾಣದಿದ್ದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಕರು ಮತ್ತು ಆಪ್ತರು ನಾಪತ್ತೆಯಾಗಿರುವ ಮಹಿಳಾ ಸಿಬ್ಬಂದಿ ಪಾವನಿಗಾಗಿ ಹುಡುಕುತ್ತಿದ್ದಾರೆ. 10 ಕೆಜಿ ಚಿನ್ನಾಭರಣದ ಮಾರುಕಟ್ಟೆ ಮೌಲ್ಯ 6 ಕೋಟಿ ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ.

ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ, ಮ್ಯಾನೇಜರ್​ ಪಾವನಿ ನಾಪತ್ತೆ!
ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 19, 2023 | 10:08 AM

Share

ಕಂಕಿಪಾಡು ಗ್ರಾಮ, ಅಕ್ಟೋಬರ್ 19: ಚಿನ್ನದ ಸಾಲ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ ಕೆಲ ದಿನಗಳಿಂದ ಕರ್ತವ್ಯಕ್ಕೆ ಬಂದಿಲ್ಲ. ಅವರಿಗೆ ಏನಾಯಿತೋ ಎಂದು ಸಂಸ್ಥೆಯ ಇತರೆ ಸಿಬ್ಬಂದಿ ಫೋನ್ ಮಾಡಿದ್ದಾರೆ. ಆದರೆ ಫೋನ್​ ಲಿಫ್ಟ್ ಮಾಡದಿರುವುದನ್ನು ಕಂಡು ಸಿಬ್ಬಂದಿಗೆ ಶಾಕ್​ ಆಗಿದೆ. ಜೊತೆಗೆ ಸಿಬ್ಬಂದಿಗೆ ಆ ನೌಕರನ ಮೇಲೆ ಅನುಮಾನವೂ ಮೂಡಿದೆ. ಸಂಸ್ಥೆಯ ಲಾಕರ್‌ಗಳಲ್ಲಿದ್ದ ನಗದು ಮತ್ತಿತರ ವಸ್ತುಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಗ್ರಾಹಕರ ಲಾಕರ್‌ಗಳಲ್ಲಿ ಇಟ್ಟಿದ್ದ ಸುಮಾರು 10 ಕಿ ಲೋ ಚಿನ್ನಾಭರಣ ಕಣ್ಣಿಗೆ ಕಾಣದಂತೆ (Gold missing) ಮಾಯವಾಗಿದೆ. ಇದರಿಂದ ಸಂಸ್ಥೆಯ ನೌಕರರು ಪೊಲೀಸರ ಮೊರೆ ಹೋದರು. ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ (Kankipadu, Krishna District) ಈ ಘಟನೆ ನಡೆದಿದೆ. ಆ ವಿವರಗಳ ಬಗ್ಗೆ ನೋಡುವುದಾದರೆ…

ವಿಜಯವಾಡ ಸಮೀಪದ ಕಂಕಿಪಾಡು ಗ್ರಾಮದಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್‌ನಲ್ಲಿ (Manappuram Gold loan finance) ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರು ತಮ್ಮ ಕೈ ಚಳಕ ತೋರಿಸಿದ್ದಾರೆ. ಈ ಚಿನ್ನದ ಸಾಲ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮ್ಯಾನೇಜರ್ ಪಾವನಿ ಗ್ರಾಹಕರ ಶಾಖೆಯಲ್ಲಿ ಇಟ್ಟಿದ್ದ ಸುಮಾರು 10 ಕೆಜಿ ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾರೆ. ಆರೋಗ್ಯ ಸರಿಯಿಲ್ಲವೆಂದು ಆಕೆ ರಜೆ ಹಾಕಿಹೋಗಿದ್ದಾರೆ. ಹಲವು ದಿನಗಳಿಂದ ಕಚೇರಿಗೆ ಬಾರದೆ, ಸಿಬ್ಬಂದಿ ಕರೆ ಮಾಡಿದರೂ ಅಟೆಂಡ್ ಮಾಡದ ಕಾರಣ ಹಿರಿಯ ಅಧಿಕಾರಿಗಳಿಗೆ ಅನುಮಾನ ಬಂದು ಲಾಕರ್ ಗಳನ್ನು ಪರಿಶೀಲಿಸಿದರು.

Also Read: ಪತ್ನಿಯ ಆತ್ಮಹತ್ಯೆ ಸುದ್ದಿ ಕೇಳಿ, ತಲೆಗೆ ಗುಂಡು ಹಾರಿಸಿಕೊಂಡು ಬಿಎಸ್​ಎಫ್​ ಯೋಧ ಆತ್ಮಹತ್ಯೆ

ಗ್ರಾಹಕರಿಗೆ ಸೇರಿದ 10 ಕೆಜಿ ಚಿನ್ನ ಕಾಣದಿದ್ದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಕರು ಮತ್ತು ಆಪ್ತರು ನಾಪತ್ತೆಯಾಗಿರುವ ಮಹಿಳಾ ಸಿಬ್ಬಂದಿ ಪಾವನಿಗಾಗಿ ಹುಡುಕುತ್ತಿದ್ದಾರೆ. ಆಕೆ ಕದ್ದಿರುವ 10 ಕೆಜಿ ಚಿನ್ನಾಭರಣದ ಮಾರುಕಟ್ಟೆ ಮೌಲ್ಯ ಅಂದಾಜು 6 ಕೋಟಿ ರೂಪಾಯಿ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇತ್ತ ಸಂಸ್ಥೆಯಲ್ಲಿ ತಾವಿಟ್ಟಿದ್ದ ಚಿನ್ನ ಮಾಯವಾಗಿರುವ ಸುದ್ದಿಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!