AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ, ಮ್ಯಾನೇಜರ್​ ಪಾವನಿ ನಾಪತ್ತೆ!

Vijayawada: ಗ್ರಾಹಕರಿಗೆ ಸೇರಿದ 10 ಕೆಜಿ ಚಿನ್ನ ಕಾಣದಿದ್ದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಕರು ಮತ್ತು ಆಪ್ತರು ನಾಪತ್ತೆಯಾಗಿರುವ ಮಹಿಳಾ ಸಿಬ್ಬಂದಿ ಪಾವನಿಗಾಗಿ ಹುಡುಕುತ್ತಿದ್ದಾರೆ. 10 ಕೆಜಿ ಚಿನ್ನಾಭರಣದ ಮಾರುಕಟ್ಟೆ ಮೌಲ್ಯ 6 ಕೋಟಿ ರೂಪಾಯಿ ಇರಬಹುದು ಎಂದು ಅಂದಾಜಿಸಲಾಗಿದೆ.

ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ, ಮ್ಯಾನೇಜರ್​ ಪಾವನಿ ನಾಪತ್ತೆ!
ಮಣಪ್ಪುರಂ ಗೋಲ್ಡ್ ಲೋನ್ ಸಂಸ್ಥೆಯಲ್ಲಿ 10 ಕೆ ಜಿ ಚಿನ್ನಾಭರಣ ಮಾಯ
ಸಾಧು ಶ್ರೀನಾಥ್​
|

Updated on: Oct 19, 2023 | 10:08 AM

Share

ಕಂಕಿಪಾಡು ಗ್ರಾಮ, ಅಕ್ಟೋಬರ್ 19: ಚಿನ್ನದ ಸಾಲ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿ ಕೆಲ ದಿನಗಳಿಂದ ಕರ್ತವ್ಯಕ್ಕೆ ಬಂದಿಲ್ಲ. ಅವರಿಗೆ ಏನಾಯಿತೋ ಎಂದು ಸಂಸ್ಥೆಯ ಇತರೆ ಸಿಬ್ಬಂದಿ ಫೋನ್ ಮಾಡಿದ್ದಾರೆ. ಆದರೆ ಫೋನ್​ ಲಿಫ್ಟ್ ಮಾಡದಿರುವುದನ್ನು ಕಂಡು ಸಿಬ್ಬಂದಿಗೆ ಶಾಕ್​ ಆಗಿದೆ. ಜೊತೆಗೆ ಸಿಬ್ಬಂದಿಗೆ ಆ ನೌಕರನ ಮೇಲೆ ಅನುಮಾನವೂ ಮೂಡಿದೆ. ಸಂಸ್ಥೆಯ ಲಾಕರ್‌ಗಳಲ್ಲಿದ್ದ ನಗದು ಮತ್ತಿತರ ವಸ್ತುಗಳನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಗ್ರಾಹಕರ ಲಾಕರ್‌ಗಳಲ್ಲಿ ಇಟ್ಟಿದ್ದ ಸುಮಾರು 10 ಕಿ ಲೋ ಚಿನ್ನಾಭರಣ ಕಣ್ಣಿಗೆ ಕಾಣದಂತೆ (Gold missing) ಮಾಯವಾಗಿದೆ. ಇದರಿಂದ ಸಂಸ್ಥೆಯ ನೌಕರರು ಪೊಲೀಸರ ಮೊರೆ ಹೋದರು. ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ (Kankipadu, Krishna District) ಈ ಘಟನೆ ನಡೆದಿದೆ. ಆ ವಿವರಗಳ ಬಗ್ಗೆ ನೋಡುವುದಾದರೆ…

ವಿಜಯವಾಡ ಸಮೀಪದ ಕಂಕಿಪಾಡು ಗ್ರಾಮದಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಫೈನಾನ್ಸ್‌ನಲ್ಲಿ (Manappuram Gold loan finance) ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರು ತಮ್ಮ ಕೈ ಚಳಕ ತೋರಿಸಿದ್ದಾರೆ. ಈ ಚಿನ್ನದ ಸಾಲ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಮ್ಯಾನೇಜರ್ ಪಾವನಿ ಗ್ರಾಹಕರ ಶಾಖೆಯಲ್ಲಿ ಇಟ್ಟಿದ್ದ ಸುಮಾರು 10 ಕೆಜಿ ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾರೆ. ಆರೋಗ್ಯ ಸರಿಯಿಲ್ಲವೆಂದು ಆಕೆ ರಜೆ ಹಾಕಿಹೋಗಿದ್ದಾರೆ. ಹಲವು ದಿನಗಳಿಂದ ಕಚೇರಿಗೆ ಬಾರದೆ, ಸಿಬ್ಬಂದಿ ಕರೆ ಮಾಡಿದರೂ ಅಟೆಂಡ್ ಮಾಡದ ಕಾರಣ ಹಿರಿಯ ಅಧಿಕಾರಿಗಳಿಗೆ ಅನುಮಾನ ಬಂದು ಲಾಕರ್ ಗಳನ್ನು ಪರಿಶೀಲಿಸಿದರು.

Also Read: ಪತ್ನಿಯ ಆತ್ಮಹತ್ಯೆ ಸುದ್ದಿ ಕೇಳಿ, ತಲೆಗೆ ಗುಂಡು ಹಾರಿಸಿಕೊಂಡು ಬಿಎಸ್​ಎಫ್​ ಯೋಧ ಆತ್ಮಹತ್ಯೆ

ಗ್ರಾಹಕರಿಗೆ ಸೇರಿದ 10 ಕೆಜಿ ಚಿನ್ನ ಕಾಣದಿದ್ದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಕ್ಯಾಮೆರಾ ಆಧರಿಸಿ ಆರೋಪಿಯ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಸಂಬಂಧಿಕರು ಮತ್ತು ಆಪ್ತರು ನಾಪತ್ತೆಯಾಗಿರುವ ಮಹಿಳಾ ಸಿಬ್ಬಂದಿ ಪಾವನಿಗಾಗಿ ಹುಡುಕುತ್ತಿದ್ದಾರೆ. ಆಕೆ ಕದ್ದಿರುವ 10 ಕೆಜಿ ಚಿನ್ನಾಭರಣದ ಮಾರುಕಟ್ಟೆ ಮೌಲ್ಯ ಅಂದಾಜು 6 ಕೋಟಿ ರೂಪಾಯಿ ಇರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇತ್ತ ಸಂಸ್ಥೆಯಲ್ಲಿ ತಾವಿಟ್ಟಿದ್ದ ಚಿನ್ನ ಮಾಯವಾಗಿರುವ ಸುದ್ದಿಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ಬಿಜೆಪಿ ಸೇರ್ಪಡೆ ಬಗ್ಗೆ ಮಾಜಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಿಷ್ಟು
ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ
ವಿಷ್ಣು ಸ್ಮಾರಕ: ಸಿಎಂ ಭೇಟಿ ಬಳಿಕ ಹಿರಿಯ ನಟಿ ಭಾರತಿ ಹೇಳಿದ್ದು ಹೀಗೆ