AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಊರಿನಲ್ಲಿ ದೇವಸ್ಥಾನ, ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಲು ನಿರ್ಧಾರ

ದೇವಸ್ಥಾನ ಮತ್ತು ಮಸೀದಿಯಲ್ಲಿ ದಶಕಗಳಿಂದ ಬಳಸುತ್ತಿದ್ದ ಧ್ವನಿವರ್ಧಕಗಳನ್ನು ಕೆಳಗಿಳಿಸಲು ಜಂಟಿಯಾಗಿ ನಿರ್ಧರಿಸಿದ್ದೇವೆ ಎಂದು ದೇವಾಲಯದ ಅರ್ಚಕ ಶಾಂತಿ ಮೋಹನ್ ದಾಸ್ ಮತ್ತು ಇಮಾಮ್ ಹಫೀಜ್ ಮೊಹಮ್ಮದ್ ತಾಜ್ ಆಲಂ ಹೇಳಿದ್ದಾರೆ.

ಈ ಊರಿನಲ್ಲಿ ದೇವಸ್ಥಾನ, ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ತೆರವುಗೊಳಿಸಲು ನಿರ್ಧಾರ
ಲೌಡ್ ಸ್ಪೀಕರ್
TV9 Web
| Edited By: |

Updated on: Apr 25, 2022 | 7:47 PM

Share

ವಾರಾಣಸಿ: ತಮ್ಮ ಊರಿನಲ್ಲಿ ಕೋಮು ಸೌಹಾರ್ದತೆಯ ಸಂದೇಶವನ್ನು ರವಾನಿಸಲು ನಿರ್ಧರಿಸಿದ ಉತ್ತರ ಪ್ರದೇಶದ (Uttar Pradesh) ಬಡಗಾಂವ್ ಪಟ್ಟಣದಲ್ಲಿರುವ ಅತಿದೊಡ್ಡ ದೇವಾಲಯ (Temple) ಮತ್ತು ಮಸೀದಿಯ (Masjid) ಧ್ವನಿವರ್ಧಕಗಳನ್ನು ತೆಗೆದುಹಾಕಲು ನಿರ್ಧರಿಸಿದ್ದಾರೆ. ಈ ಬಗ್ಗೆ ದೇವಾಲಯದ ಅರ್ಚಕ ಮತ್ತು ಮಸೀದಿಯ ಇಮಾಮ್ ಸಭೆಯನ್ನು ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಹೀಗಾಗಿ, ಇನ್ನುಮುಂದೆ ಬಡಗಾಂವ್​ ಎಂಬ ಈ ಊರಿನಲ್ಲಿ ಮಸೀದಿಯಲ್ಲಾಗಲಿ, ದೇವಸ್ಥಾನದಲ್ಲಾಗಲಿ ಲೌಡ್​ ಸ್ಪೀಕರ್​ಗಳನ್ನು ಬಳಸುವಂತಿಲ್ಲ.

ದೇವಸ್ಥಾನ ಮತ್ತು ಮಸೀದಿಯಲ್ಲಿ ದಶಕಗಳಿಂದ ಬಳಸುತ್ತಿದ್ದ ಧ್ವನಿವರ್ಧಕಗಳನ್ನು ಕೆಳಗಿಳಿಸಲು ಜಂಟಿಯಾಗಿ ನಿರ್ಧರಿಸಿದ್ದೇವೆ ಎಂದು ದೇವಾಲಯದ ಅರ್ಚಕ ಶಾಂತಿ ಮೋಹನ್ ದಾಸ್ ಮತ್ತು ಇಮಾಮ್ ಹಫೀಜ್ ಮೊಹಮ್ಮದ್ ತಾಜ್ ಆಲಂ ಹೇಳಿದ್ದಾರೆ.

ಝಾನ್ಸಿಯ ಅತ್ಯಂತ ಪ್ರಸಿದ್ಧ ಹಾಗೂ ಹಳೆಯ ದೇವಾಲಯಗಳಲ್ಲಿ ರಾಮ್ ಜಾಂಕಿ ದೇವಸ್ಥಾನವು ಒಂದಾಗಿದೆ. ಹಾಗೇ, ಸುನ್ನಿ ಜಮಾ ಮಸೀದಿಯು ಬಡಗಾಂವ್ ಪಟ್ಟಣದ ಗಾಂಧಿ ಚೌಕ್ ಪ್ರದೇಶದಲ್ಲಿದೆ. ಈ ಮಸೀದಿ ಮತ್ತು ದೇವಸ್ಥಾನಗಳೆರಡೂ ಪರಸ್ಪರ ಹತ್ತಿರದಲ್ಲಿದೆ. ಇಲ್ಲಿನ ದೇವಾಲಯವು ತನ್ನ ಧ್ವನಿವರ್ಧಕದಲ್ಲಿ ಬೆಳಗಿನ ಆರತಿಯ ವೇಳೆ ಶ್ಲೋಕಗಳನ್ನು ಪ್ರಸಾರ ಮಾಡುತ್ತಿದ್ದರೆ, ಮಸೀದಿಯು ದಿನಕ್ಕೆ ಐದು ಬಾರಿ ಆಜಾನ್ (ನಮಾಜ್)ಗಾಗಿ ತನ್ನ ಧ್ವನಿವರ್ಧಕಗಳನ್ನು ಬಳಸುತ್ತಿತ್ತು.

ಜನರಲ್ಲಿ ಪ್ರೀತಿ ಮತ್ತು ಸಹೋದರತ್ವದ ಬಲವಾದ ಸಂದೇಶವನ್ನು ರವಾನಿಸಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಶಾಂತಿ ಮೋಹನ್ ದಾಸ್ ಹೇಳಿದ್ದಾರೆ. ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ದೇವಸ್ಥಾನದಲ್ಲಿ ಆರತಿಯನ್ನು ನಡೆಸಲಾಗುತ್ತದೆ ಹಾಗೂ ಭಜನೆಗಳನ್ನು ನಿಯಮಿತವಾಗಿ ಪಠಿಸಲಾಗುತ್ತದೆ. ಆದರೆ, ಈ ದೇವಸ್ಥಾನದಲ್ಲಿ ಇನ್ನು ಧ್ವನಿವರ್ಧಕಗಳನ್ನು ಬಳಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಹಫೀಜ್ ತಾಜ್ ಆಲಂ ಅವರು ಎರಡು ಧ್ವನಿವರ್ಧಕಗಳನ್ನು ಕೆಳಗಿಳಿಸುವುದು ಈ ಹಂತದ ಅಗತ್ಯವಾಗಿದೆ. ನಾವು ಸಾಮರಸ್ಯದಿಂದ ಬದುಕುತ್ತಿದ್ದೇವೆ. ನಮ್ಮ ಸಾಮರಸ್ಯದ ನಡುವೆ ಈ ಧ್ವನಿವರ್ಧಕಗಳನ್ನು ಬರಲು ಬಿಡುವುದಿಲ್ಲ. ದೇಶದಲ್ಲಿ ಸೌಹಾರ್ದತೆ ನೆಲೆಸಲಿ ಮತ್ತು ಜನರು ಶಾಂತಿಯಿಂದ ಬದುಕಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ದೇವಾಲಯಗಳು ಮತ್ತು ಮಸೀದಿಗಳಲ್ಲಿ ಧ್ವನಿವರ್ಧಕಗಳ ಬಳಕೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಇಬ್ಬರು ಧಾರ್ಮಿಕ ಮುಖಂಡರು ಈ ಸಭೆ ನಡೆಸಿದ್ದಾರೆ.

ಇದನ್ನೂ ಓದಿ: ಮಂದಿರ, ಮಸೀದಿಗಳಿಂದ ಧ್ವನಿವರ್ಧಕ ತೆರವು, ಹೈಕೋರ್ಟ್ ಆದೇಶ ಪಾಲನೆಗೆ ಸಿಎಂ ಬೊಮ್ಮಾಯಿ ಸೂಚನೆ

ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ