AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 3 ರಾಜ್ಯಗಳಲ್ಲಿ NIA ದಾಳಿ: 40 ಸ್ಥಳಗಳಲ್ಲಿ ಶೋಧ

ರಾಷ್ಟ್ರೀಯ ತನಿಖಾ ದಳ (ಎನ್​ಐಎ) ದಕ್ಷಿಣ ಭಾರತ ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕಳೆದ ವರ್ಷದ ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್​ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳನಾಡು, ಕೇರಳ ಮತ್ತು ಕರ್ನಾಟಕದ 40 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Mangaluru Blast: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 3 ರಾಜ್ಯಗಳಲ್ಲಿ NIA ದಾಳಿ: 40 ಸ್ಥಳಗಳಲ್ಲಿ ಶೋಧ
ಎನ್​ಐಎ
TV9 Web
| Edited By: |

Updated on: Feb 15, 2023 | 10:17 AM

Share

ನವದೆಹಲಿ: ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಭಾರತ ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕಳೆದ ವರ್ಷದ ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್​ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್​ ಡಿವೈಸ್​​ಗಳು​ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕೊಯಮುತ್ತೂರನ ಕೊಟ್ಟಯ್​ ಈಶ್ವರನ್​ ದೇವಸ್ಥಾನ ಎದುರುಗಡೆ ಸ್ಪೋಟಗೊಂಡ ಕಾರ್​ ಬ್ಲಾಸ್ಟ್​​ನಲ್ಲಿ ಜಮೀಶ್​ ಮುಬೀನ್ ಎಂಬುವನು ಸಾವನ್ನಪ್ಪಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಎನ್​ಐಎ ಕಳೆದ ವರ್ಷ ಅಕ್ಟೋಬರ್​ 23 ರಂದು ತಮಿಳನಾಡಿನ 43 ಸ್ಥಳಗಳಲ್ಲಿ ದಾಳಿ ಮಾಡಿತ್ತು.

ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ ಜೊತೆ ಜಮೀಶ್​ ಮುಬೀನ್ ನಂಟು ಹೊಂದಿದ್ದು. ಈತ ಆತ್ಮಾಹುತಿ ಬಾಂಬ್​ಗೆ ಧಾರ್ಮಿಕ ಕೇಂದ್ರಗಳು ಮತ್ತು ಸ್ಮಾರಕಗಳನ್ನು ಟಾರ್ಗೆಟ್​ ಮಾಡಿದ್ದನು ಎಂದು ಎನ್‌ಐಎ ಹೇಳಿದೆ. ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಅಧಿಕಾರಿಗಳು ಸ್ಫೋಟವನ್ನು “ಲೋನ್ ವುಲ್ಫ್” ದಾಳಿ ಎಂದು ಕರೆದಿದ್ದಾರೆ.

ಇನ್ನೂ ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್​ ಬ್ಲಾಸ್ಟ್​ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್​ ಶಾರಿಕ್​ ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ ಸ್ಥಾಪಿಸಲು ಬಯಸಿದ್ದರು ಎಂದು ಎನ್ಐಎಗೆ ತಿಳಿದುಬಂದಿದೆ. ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್​ ಶಾರಿಕ್​ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್‌ ಕ್ಯಾಂಪ್​ನ್ನು ಹೂಡಿದ್ದು, ಅಲ್ಲಿ ಮೊಹ್ಮದ್​ ಶಾರಿಕ್ ತರಬೇತಿ ಪಡೆದಿದ್ದನು ಎಂದು ಎನ್​ಐಎ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ