AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Blast: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 3 ರಾಜ್ಯಗಳಲ್ಲಿ NIA ದಾಳಿ: 40 ಸ್ಥಳಗಳಲ್ಲಿ ಶೋಧ

ರಾಷ್ಟ್ರೀಯ ತನಿಖಾ ದಳ (ಎನ್​ಐಎ) ದಕ್ಷಿಣ ಭಾರತ ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕಳೆದ ವರ್ಷದ ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್​ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳನಾಡು, ಕೇರಳ ಮತ್ತು ಕರ್ನಾಟಕದ 40 ಸ್ಥಳಗಳಲ್ಲಿ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ.

Mangaluru Blast: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 3 ರಾಜ್ಯಗಳಲ್ಲಿ NIA ದಾಳಿ: 40 ಸ್ಥಳಗಳಲ್ಲಿ ಶೋಧ
ಎನ್​ಐಎ
TV9 Web
| Edited By: |

Updated on: Feb 15, 2023 | 10:17 AM

Share

ನವದೆಹಲಿ: ರಾಷ್ಟ್ರೀಯ ತನಿಖಾ ದಳ (NIA) ದಕ್ಷಿಣ ಭಾರತ ಮೂರು ರಾಜ್ಯಗಳಲ್ಲಿ ದಾಳಿ ನಡೆಸಿದೆ. ಕಳೆದ ವರ್ಷದ ಕೊಯಮುತ್ತೂರು ಮತ್ತು ಮಂಗಳೂರು ಬ್ಲಾಸ್ಟ್​ ಪ್ರಕರಣಕ್ಕೆ ಸಂಬಧಿಸಿದಂತೆ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 40 ಪ್ರದೇಶಗಳ ಮೇಲೆ ಏಕಕಾಲಕ್ಕೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೇರಳದ ಪಲ್ಲಕಡನಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಎಲೆಕ್ಟ್ರಾನಿಕ್​ ಡಿವೈಸ್​​ಗಳು​ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಕೊಯಮುತ್ತೂರನ ಕೊಟ್ಟಯ್​ ಈಶ್ವರನ್​ ದೇವಸ್ಥಾನ ಎದುರುಗಡೆ ಸ್ಪೋಟಗೊಂಡ ಕಾರ್​ ಬ್ಲಾಸ್ಟ್​​ನಲ್ಲಿ ಜಮೀಶ್​ ಮುಬೀನ್ ಎಂಬುವನು ಸಾವನ್ನಪ್ಪಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಎನ್​ಐಎ ಕಳೆದ ವರ್ಷ ಅಕ್ಟೋಬರ್​ 23 ರಂದು ತಮಿಳನಾಡಿನ 43 ಸ್ಥಳಗಳಲ್ಲಿ ದಾಳಿ ಮಾಡಿತ್ತು.

ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್‌ ಜೊತೆ ಜಮೀಶ್​ ಮುಬೀನ್ ನಂಟು ಹೊಂದಿದ್ದು. ಈತ ಆತ್ಮಾಹುತಿ ಬಾಂಬ್​ಗೆ ಧಾರ್ಮಿಕ ಕೇಂದ್ರಗಳು ಮತ್ತು ಸ್ಮಾರಕಗಳನ್ನು ಟಾರ್ಗೆಟ್​ ಮಾಡಿದ್ದನು ಎಂದು ಎನ್‌ಐಎ ಹೇಳಿದೆ. ಈ ಪ್ರಕರಣದಲ್ಲಿ 6 ಮಂದಿಯನ್ನು ಬಂಧಿಸಲಾಗಿದೆ. ಅಧಿಕಾರಿಗಳು ಸ್ಫೋಟವನ್ನು “ಲೋನ್ ವುಲ್ಫ್” ದಾಳಿ ಎಂದು ಕರೆದಿದ್ದಾರೆ.

ಇನ್ನೂ ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್​ ಬ್ಲಾಸ್ಟ್​ ಪ್ರಕರಣದಲ್ಲಿ ಆಟೋ ಚಾಲಕ ಮತ್ತು ಆರೋಪಿ ಮೊಹ್ಮದ್​ ಶಾರಿಕ್​ ಇಬ್ಬರು ಗಾಯಗೊಂಡಿದ್ದರು. ಸ್ಫೋಟ ಪ್ರಕರಣದ ತನಿಖೆಯ ಸಂದರ್ಭದಲ್ಲಿ, ಶಾರಿಕ್ ಮತ್ತು ಆತನ ಸಹಚರರು ಕರ್ನಾಟಕದ ಅರಣ್ಯಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಕ್ಯಾಂಪ್ ಸ್ಥಾಪಿಸಲು ಬಯಸಿದ್ದರು ಎಂದು ಎನ್ಐಎಗೆ ತಿಳಿದುಬಂದಿದೆ. ಅಲ್ಲದೇ ಮಂಗಳೂರು ಸುತ್ತಮುತ್ತಲಿನ ಕಾಡಿನಲ್ಲಿ ಮೊಹ್ಮದ್​ ಶಾರಿಕ್​ ಮತ್ತು ಆತನ ಸಹಚರರು ಇಸ್ಲಾಮಿಕ್ ಸ್ಟೇಟ್‌ ಕ್ಯಾಂಪ್​ನ್ನು ಹೂಡಿದ್ದು, ಅಲ್ಲಿ ಮೊಹ್ಮದ್​ ಶಾರಿಕ್ ತರಬೇತಿ ಪಡೆದಿದ್ದನು ಎಂದು ಎನ್​ಐಎ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!