AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಗಳ ಹೆಸರೇಳಿ ಉಗ್ರ ಕೃತ್ಯ ಈ ಹಿಂದೆಯೂ ನಡೆದಿದೆ, ಮಂಗಳೂರಿನ ಸ್ಫೋಟ ಲಘುವಾಗಿ ಪರಿಗಣಿಸುವಂತಿಲ್ಲ: ಸಿ.ಟಿ.ರವಿ

ಹಿಂದುಗಳ ಹೆಸರೇಳಿ ಉಗ್ರ ಕೃತ್ಯ ಈ ಹಿಂದೆಯೂ ನಡೆದಿದೆ. ಮಂಗಳೂರಿನ ಸ್ಫೋಟ ಪ್ರಕರಣ ಲಘುವಾಗಿ ಪರಿಗಣಿಸುವಂತಿಲ್ಲ. ಸ್ಫೋಟ ಪ್ರಕರಣ ಎನ್​ಐಎಗೆ ಕೊಡುವ ಬಗ್ಗೆ ಸಿಎಂ ಹೇಳಿದ್ದಾರೆ ಎಂದು ಸಿ.ಟಿ.ರವಿ ಹೇಳಿದರು.

ಹಿಂದೂಗಳ ಹೆಸರೇಳಿ ಉಗ್ರ ಕೃತ್ಯ ಈ ಹಿಂದೆಯೂ ನಡೆದಿದೆ, ಮಂಗಳೂರಿನ ಸ್ಫೋಟ ಲಘುವಾಗಿ ಪರಿಗಣಿಸುವಂತಿಲ್ಲ: ಸಿ.ಟಿ.ರವಿ
ಬಿಜೆಪಿ ನಾಯಕ ಸಿ.ಟಿ.ರವಿ
TV9 Web
| Edited By: |

Updated on:Nov 24, 2022 | 2:59 PM

Share

ದೆಹಲಿ: ಹಿಂದುಗಳ ಹೆಸರೇಳಿ ಉಗ್ರ ಕೃತ್ಯ ಈ ಹಿಂದೆಯೂ ನಡೆದಿದೆ. ಮಂಗಳೂರಿನ ಸ್ಫೋಟ ಪ್ರಕರಣ ಲಘುವಾಗಿ ಪರಿಗಣಿಸುವಂತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಮಾತನಾಡಿದ್ದೇನೆ. ಸ್ಫೋಟ ಪ್ರಕರಣ ಎನ್​ಐಎಗೆ ಕೊಡುವ ಬಗ್ಗೆ ಸಿಎಂ ಹೇಳಿದ್ದಾರೆ. ಇದೊಂದು ಜಿಹಾದಿ ಕೃತ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ಮಾಡಿದರು. ಕೊಯಮತ್ತೂರು ಮತ್ತು ಮಂಗಳೂರು ಸ್ಫೋಟಕ್ಕೆ ಲಿಂಕ್ ಇದೆ. ಕಾನೂನು ನೆರವು ನೀಡುವವರನ್ನು ಸಹ ವಿಚಾರಣೆ ನಡೆಸಬೇಕು. ಇಡೀ ಸಮಾಜ ಸಂಘಟನಾತ್ಮಕವಾಗಿ ಎದುರಿಸಬೇಕಾಗಿದೆ ಎಂದು ಹೇಳಿದರು.

ಈ ಬಗ್ಗೆ ಏನು ಉತ್ತರ ಕೊಡಬೇಕೋ ಅದನ್ನು ಸಿಎಂ ಕೊಟ್ಟಿದ್ದಾರೆ

ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಪದೇಪದೆ ಕ್ಯಾತೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಏನು ಉತ್ತರ ಕೊಡಬೇಕೋ ಅದನ್ನು ಸಿಎಂ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ ಮರಾಠಿಗರು ಸುರಕ್ಷಿತವಾಗಿದ್ದಾರೆ. ವಿವಾದದ ನಡುವೆಯೂ ಮಹಾರಾಷ್ಟ್ರದಲ್ಲಿ ನಮ್ಮ ಕನ್ನಡಿಗರು ಕೂಡ ಸೇಫ್ ಆಗಿದ್ದಾರೆ. ನಾವು ಪಿಒಕೆಗೆ ಮೊದಲ ಪ್ರಾಮುಖ್ಯತೆ ಕೊಡುತ್ತೇವೆ. ಅದನ್ನ ಹೇಗೆ ವಾಪಸ್ ತಗೋಬೇಕು ಅನ್ನೋದು ನಮ್ಮ ಆದ್ಯತೆ. ಪಿಒಕೆ ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತವಾಗಿಲ್ಲ. ಹಾಗಾಗಿ ನಾವು ಹೆಚ್ಚು ಪಿಒಕೆಗೆ ಆದ್ಯತೆ ನೀಡುತ್ತೇವೆ ಎಂದರು.

ವೋಟರ್ ಐಡಿ ಪರಿಷ್ಕರಣೆ ಅಕ್ರಮದ ಬಗ್ಗೆ ತನಿಖೆ ಆಗಲಿ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಕೇಸ್ ವಿಚಾರವಾಗಿ ಅವರು ಮಾತನಾಡಿದ್ದು, ಚಿಲುಮೆ ಸಂಸ್ಥೆಗೆ ವೋಟರ್​ ID ಪರಿಷ್ಕರಣೆಗೆ ಸಿದ್ದರಾಮಯ್ಯ ಅವಧಿಯಲ್ಲೇ ಸಂಸ್ಥೆಗೆ ಅವಕಾಶ ನೀಡಿದ ಆರೋಪವಿದೆ. ವೋಟರ್ ಐಡಿ ಪರಿಷ್ಕರಣೆ ಅಕ್ರಮದ ಬಗ್ಗೆ ತನಿಖೆ ಆಗಲಿ. ಚುನಾವಣಾ ಆಯೋಗ ಮತಪಟ್ಟಿ ಪರಿಷ್ಕರಣೆಗೆ ಅನುಮತಿ ನೀಡಿದೆ. ಕರಡು ಪಟ್ಟಿಯಲ್ಲಿ ಹೆಸರು ತಪ್ಪಿದ್ರೆ ದೂರು ನೀಡಬಹುದು. ಬಿಎಲ್​ಒಗೆ ಅಂತಿಮ ಪಟ್ಟಿ ಪರಿಷ್ಕರಿಸುವ ಅಧಿಕಾರ ಇದೆ. ಇದಕ್ಕೆ ಬಿಎಲ್​​ಒ ಉತ್ತರದಾಯಿ ಎಂದು ತಿಳಿಸಿದರು.

ಬಿ.ಎಲ್​.ಸಂತೋಷ್ ದೇಶಕ್ಕೆ ಬದುಕು ಅರ್ಪಿಸಿದ ನಾಯಕ

ಬಿ.ಎಲ್​.ಸಂತೋಷ್​ಗೆ ಎಸ್​ಐಟಿಯಿಂದ ಸಮನ್ಸ್​ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಬಿ.ಎಲ್​.ಸಂತೋಷ್ ದೇಶಕ್ಕೆ ಬದುಕು ಅರ್ಪಿಸಿದ ನಾಯಕ. ಕಾನೂನಾತ್ಮಾಕವಾಗಿ ಉತ್ತರ ನೀಡುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಂತೆ ನಾವು ಬೀದಿ ರಂಪ ಮಾಡಿಲ್ಲ. ಕಾನೂನು ಪರಿಮಿತಿಯಲ್ಲಿ ಅವರು ಪ್ರತಿಕ್ರಿಯೆ ನೀಡುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:55 pm, Thu, 24 November 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!