AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಹಿಂಸಾಚಾರ, 6 ಮಂದಿ ನಾಪತ್ತೆ, ಇಬ್ಬರ ಶವ ಪತ್ತೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ, ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಮೃತದೇಹಗಳು ಪತ್ತೆಯಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ನಿನ್ನೆ ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Manipur: ಮಣಿಪುರದಲ್ಲಿ ಹಿಂಸಾಚಾರ, 6 ಮಂದಿ ನಾಪತ್ತೆ, ಇಬ್ಬರ ಶವ ಪತ್ತೆ
ಮಣಿಪುರImage Credit source: India Today
ನಯನಾ ರಾಜೀವ್
|

Updated on: Nov 13, 2024 | 8:49 AM

Share

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ, ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಮೃತದೇಹಗಳು ಪತ್ತೆಯಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ನಿನ್ನೆ ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು, ಇದರಲ್ಲಿ 11 ಉಗ್ರರು ಹತರಾಗಿದ್ದರು.ನಾಪತ್ತೆಯಾದವರಿಗಾಗಿ ಆರಂಭಿಸಲಾದ ಶೋಧ ಕಾರ್ಯಾಚರಣೆಯಲ್ಲಿ ಜಕುರಧೋರ್ ಕರೋಂಗ್ ಪ್ರದೇಶದಲ್ಲಿ ಅವಶೇಷಗಳಡಿಯಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ.

ಸೋಮವಾರ ಈ ಸ್ಥಳದಲ್ಲಿ ಶಂಕಿತ ಉಗ್ರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಜುಕುರಾದೋರ್ ಕರೋಂಗ್ ಪ್ರದೇಶದಲ್ಲಿ ಉಗ್ರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಿದ ನಂತರ ಇಬ್ಬರು ವೃದ್ಧರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಗುಂಡಿನ ಚಕಮಕಿ, 11 ಶಂಕಿತ ಕುಕಿ ಬಂಡುಕೋರರ ಹತ್ಯೆ

ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿರಿಬಾಮ್ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಯೊಂದಿಗಿನ ಎನ್‌ಕೌಂಟರ್‌ನಲ್ಲಿ ಶಂಕಿತ ಉಗ್ರರನ್ನು ಕೊಂದಿರುವುದನ್ನು ವಿರೋಧಿಸಿ ಕುಕಿ-ಜೋ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ 5 ಗಂಟೆಯಿಂದ ಬಂದ್​ಕೆ ಕರೆ ನೀಡಲಾಗಿದೆ.

ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ. ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಉಗ್ರರು ಪೊಲೀಸ್ ಠಾಣೆ ಮತ್ತು ಜಿರಿಬಾಮ್ ಜಿಲ್ಲೆಯ ಹತ್ತಿರದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಶಿಬಿರದ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ ನಂತರ ಎನ್‌ಕೌಂಟರ್ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ