AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biren Singh: ರಾಜ್ಯಪಾಲರ ಭೇಟಿ ನಂತರ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ?

ಸಿಂಗ್ ಇಂದು(ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ

Biren Singh: ರಾಜ್ಯಪಾಲರ ಭೇಟಿ ನಂತರ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ಸಾಧ್ಯತೆ?
ಬಿರೇನ್ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on:Jun 30, 2023 | 1:27 PM

Share

ಮಣಿಪುರದಲ್ಲಿ (Manipur) ಜನಾಂಗೀಯ ಘರ್ಷಣೆಗಳ ನಡುವೆ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ (N Biren Singh) ಶುಕ್ರವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ. ಸಿಂಗ್ ಇಂದು(ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ (Anusuiya Uikey) ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ರಾಜೀನಾಮೆ ನೀಡುವ ಅಥವಾ ಕೇಂದ್ರವು ಮಧ್ಯಪ್ರವೇಶಿಸಲು ಅವಕಾಶ ನೀಡುವ ಆಯ್ಕೆಗಳನ್ನು ನೀಡಲಾಗಿದೆ. ಪಿಟಿಐ ಸುದ್ದಿಸಂಸ್ಥೆ ಪ್ರಕಾರ “ತೊಂದರೆ ಉಂಟುಮಾಡುವವರ ವಿರುದ್ಧ ದೃಢವಾದ ನಿಲುವು” ತೆಗೆದುಕೊಳ್ಳುವಂತೆಯೂ ಮುಖ್ಯಮಂತ್ರಿಗೆ ಹೇಳಲಾಗಿದೆ.

ಮಣಿಪುರದಲ್ಲಿ ಹೊಸ ಹಿಂಸಾಚಾರ

ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆಯಲ್ಲಿ, ಗುರುವಾರ ಭದ್ರತಾ ಪಡೆಗಳು ಮತ್ತು ಶಂಕಿತ ಗಲಭೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮಣಿಪುರದಲ್ಲಿ ಕೇಂದ್ರದ ಮಧ್ಯಪ್ರವೇಶಿಸಬೇಕು ಎಂದು ಪ್ರತಿಭಟನಾಕಾರರು ಮತ್ತು ರಾಜಕೀಯ ಪಕ್ಷಗಳು ಬೇಡಿಕೆಯೊಡ್ಡಿದ್ದಾರ. ಒಂದು ತಿಂಗಳ ಹಿಂದೆ, ಮಣಿಪುರದ ಕುಕಿ ಸಮುದಾಯದ ಸದಸ್ಯರು ತಾವು ಮುಖ್ಯಮಂತ್ರಿಯ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದು, ಮಣಿಪುರ ಸಹಜ ಸ್ಥಿತಿಗೆ ತರಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದರು.

ಜೂನ್‌ನಲ್ಲಿ ಮಣಿಪುರದ ಒಂಬತ್ತು ಬಿಜೆಪಿ ಶಾಸಕರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಎನ್ ಬಿರೇನ್ ಸಿಂಗ್ ನೇತೃತ್ವದ ಸರ್ಕಾರದ ಮೇಲೆ ರಾಜ್ಯದ ಜನರು ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಂತಿ ಸಂದೇಶವಾಹಕರೋ ಅಥವಾ ರಾಜಕೀಯ ಅವಕಾಶವಾದಿಯೋ?: ರಾಹುಲ್ ಗಾಂಧಿ ಮಣಿಪುರ ಭೇಟಿ ಬಗ್ಗೆ ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರ

ಜನಾಂಗೀಯ ಘರ್ಷಣೆಗಳು

ಮಣಿಪುರದಲ್ಲಿ ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳು ಇಲ್ಲಿಯವರೆಗೆ 100 ಕ್ಕೂ ಹೆಚ್ಚು ಸಾವುಗಳಿಗೆ ಕಾರಣವಾಗಿವೆ. ಮೇ 3 ರಂದು ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ್ದು, ಈ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತ್ತು. ಅಂದಿನಿಂದ ಎರಡು ಗುಂಪುಗಳ ನಡುವಿನ ಘರ್ಷಣೆ ತೀವ್ರಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 30 June 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ