AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್ ಪ್ರಜೆಯ ಬಂಧನ ಮಣಿಪುರ ಬಿಕ್ಕಟ್ಟಿನಲ್ಲಿ ವಿದೇಶಿ ಕೈವಾಡವನ್ನು ತೋರಿಸುತ್ತದೆ: ಸಿಎಂ ಬಿರೇನ್ ಸಿಂಗ್

ಇಂಫಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿರೇನ್, ಸಂಘರ್ಷದಲ್ಲಿ ವಿದೇಶಿಯರ ಕೈವಾಡದ ಶಂಕೆಯನ್ನು ಆರಂಭದಲ್ಲಿ ಕೆಲವು ಸಾರ್ವಜನಿಕರು ನಂಬಿರಲಿಲ್ಲ. ಮಣಿಪುರದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರಗಾಮಿಗಳಿಗೆ ಶಸ್ತ್ರಾಸ್ತ್ರ ಪೂರೈಕೆಯ ಸಾಕ್ಷ್ಯದೊಂದಿಗೆ ವಿದೇಶಿ ಪ್ರಜೆಯನ್ನು ಬಂಧಿಸಿದ್ದಕ್ಕಾಗಿ ಅಸ್ಸಾಂ ರೈಫಲ್ಸ್ ನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ.

ಮ್ಯಾನ್ಮಾರ್ ಪ್ರಜೆಯ ಬಂಧನ ಮಣಿಪುರ ಬಿಕ್ಕಟ್ಟಿನಲ್ಲಿ ವಿದೇಶಿ ಕೈವಾಡವನ್ನು ತೋರಿಸುತ್ತದೆ: ಸಿಎಂ ಬಿರೇನ್ ಸಿಂಗ್
ಬಿರೇನ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Sep 16, 2024 | 8:45 PM

ಇಂಫಾಲ್ ಸೆಪ್ಟೆಂಬರ್ 16: ಅಸ್ಸಾಂ ರೈಫಲ್ಸ್‌ನಿಂದ ಮ್ಯಾನ್ಮಾರ್ ಪ್ರಜೆಯಾಗಿರುವ ಕುಕಿ ನ್ಯಾಷನಲ್ ಆರ್ಮಿ (ಬರ್ಮಾ) (ಕೆಎನ್‌ಎ-ಬಿ) ಕೇಡರ್‌ನನ್ನು ಬಂಧಿಸಿರುವುದು ಮಣಿಪುರ ಬಿಕ್ಕಟ್ಟಿನಲ್ಲಿ ವಿದೇಶಿ ಅಂಶಗಳ ಒಳಗೊಳ್ಳುವಿಕೆಯನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ (N. Biren Singh) ಸೋಮವಾರ ಹೇಳಿದ್ದಾರೆ. ಇಂಫಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿರೇನ್, ಸಂಘರ್ಷದಲ್ಲಿ ವಿದೇಶಿಯರ ಕೈವಾಡದ ಶಂಕೆಯನ್ನು ಆರಂಭದಲ್ಲಿ ಕೆಲವು ಸಾರ್ವಜನಿಕರು ನಂಬಿರಲಿಲ್ಲ. ಮಣಿಪುರದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರಗಾಮಿಗಳಿಗೆ ಶಸ್ತ್ರಾಸ್ತ್ರ ಪೂರೈಕೆಯ ಸಾಕ್ಷ್ಯದೊಂದಿಗೆ ವಿದೇಶಿ ಪ್ರಜೆಯನ್ನು ಬಂಧಿಸಿದ್ದಕ್ಕಾಗಿ ಅಸ್ಸಾಂ ರೈಫಲ್ಸ್ ನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿಯಾಗಿ, ಪ್ರಸ್ತುತ ಬಿಕ್ಕಟ್ಟನ್ನು ವಿದೇಶಿ ಅಂಶಗಳಿಂದ ಉತ್ತೇಜಿಸಲಾಗಿದೆ ಎಂದು ನಾನು ನಿರಂತರವಾಗಿ ಹೇಳಿಕೊಂಡಿದ್ದೇನೆ”ಎಂದಿದ್ದಾರೆ ಮಣಿಪುರ ಸಿಎಂ.

ಬಂಧಿತ ಕೆಎನ್‌ಎ (ಬಿ) ಕೇಡರ್, ಎನ್‌ಗಾಂಪಾವೊ ಅವರ ಪುತ್ರ ತಂಗ್ಲಿಂಕಾಪ್ ಎಂದು ಗುರುತಿಸಲಾಗಿದ್ದು, ಈತ ಮ್ಯಾನ್ಮಾರ್‌ನ ಖಂಪತ್‌ನ ಕೊಲಾಂಗ್‌ನಲ್ಲಿ ಜನಿಸಿದ ಮ್ಯಾನ್ಮಾರ್ ಪ್ರಜೆ. ಇತ್ತೀಚೆಗಷ್ಟೇ ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಇಂಡೋ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್‌ನಿಂದ ಕುಕಿ ಪ್ರಾಬಲ್ಯದ ಜಿಲ್ಲೆ ಚುರಾಚಂದ್‌ಪುರದವರೆಗೆ ಶಸ್ತ್ರಾಸ್ತ್ರಗಳನ್ನು ಪೂರೈಸಲು ಜಂಗಲ್ ಟ್ರ್ಯಾಕ್‌ಗಳ ಉದ್ದಕ್ಕೂ ವಿಚಕ್ಷಣ ಕಾರ್ಯಾಚರಣೆಗಳನ್ನು ನಡೆಸಿದ ಆರೋಪವಿದೆ.

ಏತನ್ಮಧ್ಯೆ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಾಲ್, ಬಿಷ್ಣುಪುರ್ ಮತ್ತು ಕಕ್ಚಿಂಗ್ ಜಿಲ್ಲೆಗಳ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಲೀಸ್ ಲೈನ್‌ಗಳು, ವಿಎಸ್‌ಎಟಿಗಳು, ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್ ಸೇವೆಗಳನ್ನು ಒಳಗೊಂಡಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳ ತಾತ್ಕಾಲಿಕ ಸ್ಥಗಿತವನ್ನು ಮಣಿಪುರ ಸರ್ಕಾರ ತೆಗೆದುಹಾಕಿದೆ.

ರಾಜ್ಯ ಸರ್ಕಾರವು ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಿದೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ತಡೆಗಟ್ಟುವ ಕ್ರಮವಾಗಿ ಉತ್ತಮ ನಂಬಿಕೆಯಿಂದ ವಿಧಿಸಲಾಗಿದ್ದ ಇಂಟರ್ನೆಟ್ ಸ್ಥಗಿತ ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಸರ್ಕಾರಿ ಆದೇಶ ಸೋಮವಾರ ತಿಳಿಸಿದೆ.

ಭವಿಷ್ಯದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲು ಕಾರಣವಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದನ್ನು ತಡೆಯಲು ಎಲ್ಲಾ ಇಂಟರ್ನೆಟ್ ಬಳಕೆದಾರರಿಗೆ ಸರ್ಕಾರ ಮನವಿ ಮಾಡಿದೆ.

ಇದನ್ನೂ ಓದಿ: ‘ಪಾಕಿಸ್ತಾನ ಮಾನವೀಯತೆಗೆ ಬಡಿದ ಕ್ಯಾನ್ಸರ್’ : ಯುಪಿ ಸಿಎಂ ಯೋಗಿ ಆದಿತ್ಯನಾಥ್

ಎರಡು ಪ್ರತ್ಯೇಕ ಆದೇಶಗಳಲ್ಲಿ, ಖಾಸಗಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಮತ್ತು ಕೇಂದ್ರೀಯ ಸಂಸ್ಥೆಗಳಲ್ಲಿ ಸಾಮಾನ್ಯ ತರಗತಿಗಳು ಪುನರಾರಂಭಗೊಳ್ಳುತ್ತವೆ ಎಂದು ಸರ್ಕಾರ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ