AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಐವರು ನಾಗರಿಕರು ಸಾವು

ಮಣಿಪುರ(Manipur)ದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಐವರು ನಾಗರಿಕರು ಸಾವು
ಮಣಿಪುರImage Credit source: India Today
ನಯನಾ ರಾಜೀವ್
|

Updated on: Jan 19, 2024 | 9:06 AM

Share

ಮಣಿಪುರ(Manipur)ದಲ್ಲಿ ಹಿಂಸಾಚಾರ ಮುಂದುವರೆದಿದೆ, ಎರಡು ಪ್ರತ್ಯೇಕ ಘಟನೆಗಳಲ್ಲಿ ಅಪರಿಚಿತ ದುಷ್ಕರ್ಮಿಗಳು ಐವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಹೇಳಿಕೆಯ ಪ್ರಕಾರ, ಬಿಷ್ಣುಪುರ್ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ನಾಲ್ವರು ನಾಗರಿಕರು ಮತ್ತು ಕಾಂಗ್‌ಪೋಕ್ಪಿ ಜಿಲ್ಲೆಯ ಕಾಂಗ್‌ಚುಪ್ ಚಿಂಗ್‌ಖಾಂಗ್‌ನಲ್ಲಿ ಒಬ್ಬರನ್ನು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ಬಿಷ್ಣುಪುರ ಜಿಲ್ಲೆಯಲ್ಲಿ ಐವರನ್ನು ಹತ್ಯೆ ಮಾಡಿದ್ದ ಹಂತಕರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಓಯಿನಮ್ ಬಮೊನ್‌ಜಾವೊ ಸಿಂಗ್ (61), ಅವರ ಮಗ ಒಯಿನಮ್ ಮಣಿತೊಂಬ ಸಿಂಗ್ (32), ಥಿಯಂ ಸೋಮೇಂದ್ರೊ ಸಿಂಗ್ (55) ಮತ್ತು ನಿಂಗ್‌ತೌಜಮ್ ನಬದ್ವೀಪ್ ಸಿಂಗ್ (40) ಎಂದು ಗುರುತಿಸಲಾಗಿದೆ.

ಕಾಂಗ್‌ಪೋಕ್ಪಿಯಲ್ಲಿ ಮೃತಪಟ್ಟ ನಾಗರಿಕನನ್ನು ಥಿಯಮ್ ಕೊಂಜಿನ್ ನಿವಾಸಿ ತಖೆಲ್ಲಂಬಮ್ ಮನೋರಂಜನ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಕಾಂಗ್‌ಚುಪ್ ಚಿಂಗ್‌ಖಾಂಗ್ ಬಳಿಯ ಬಂಕರ್ ಹಿಲ್ಸ್‌ನಲ್ಲಿ ಮನೋರಂಜನ್ ಮೃತದೇಹ ಪತ್ತೆಯಾಗಿದೆ.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ

ಬುಧವಾರ ಮತ್ತು ಗುರುವಾರ ಮಧ್ಯರಾತ್ರಿ ಶಸ್ತ್ರಸಜ್ಜಿತ ದುಷ್ಕರ್ಮಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ, ತೌಬಲ್ ಜಿಲ್ಲೆಯ ಖಂಗಾಬೋಕ್‌ನಲ್ಲಿ ಗುಂಪೊಂದು ಗಡಿ ಭದ್ರತಾ ಪಡೆ ಮೇಲೆ ಗುಂಡು ಹಾರಿಸಿತ್ತು, ಘಟನೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್