AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಿಚಿತ ವ್ಯಕ್ತಿಗಳಿಂದ ಮಣಿಪುರ ಸಚಿವೆ ಮನೆಗೆ ಬೆಂಕಿ: ಶೋಧ ಕಾರ್ಯಾಚರಣೆ ಆರಂಭ

ಮಣಿಪುರದ ಏಕೈಕ ಮಹಿಳಾ ಕೈಗಾರಿಕಾ ಸಚಿವೆ ನೆಮ್ಚಾ ಕಿಪ್ಗೆನ್ ಅವರ ಅಧಿಕೃತ ನಿವಾಸಕ್ಕೆ ಅಪರಿಚತ ವ್ಯಕ್ತಿಗಳಿಂದ ಬುಧವಾರ ಬೆಂಕಿ ಹಚ್ಚಲಾಗಿದೆ.

ಅಪರಿಚಿತ ವ್ಯಕ್ತಿಗಳಿಂದ ಮಣಿಪುರ ಸಚಿವೆ ಮನೆಗೆ ಬೆಂಕಿ: ಶೋಧ ಕಾರ್ಯಾಚರಣೆ ಆರಂಭ
ಮನೆಗೆ ಬೆಂಕಿ
ಗಂಗಾಧರ​ ಬ. ಸಾಬೋಜಿ
|

Updated on:Jun 14, 2023 | 11:10 PM

Share

ಗುವಾಹಟಿ: ಮಣಿಪುರದ ಏಕೈಕ ಮಹಿಳಾ ಸಚಿವರ ಅಧಿಕೃತ ನಿವಾಸಕ್ಕೆ ಅಪರಿಚತ ವ್ಯಕ್ತಿಗಳಿಂದ ಬುಧವಾರ  ಬೆಂಕಿ ಹಚ್ಚಲಾಗಿದೆ. ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಹಿನ್ನೆಲೆ ಇಂಫಾಲ್ ಪಶ್ಚಿಮ ಜಿಲ್ಲೆಯ ಲಂಫೇಲ್ ಪ್ರದೇಶದಲ್ಲಿರುವ ಕೈಗಾರಿಕಾ ಸಚಿವ ನೆಮ್ಚಾ ಕಿಪ್ಗೆನ್ (Nemcha Kipgen) ಅವರ ಬಂಗಲೆಯನ್ನು ಕಿಡಿಗೇಡಿಗಳು ಇಂದು ಸಂಜೆ ಗುರಿಯಾಗಿಸಿಕೊಂಡಿದ್ದಾರೆ. ಘಟನೆ ನಡೆದ ವೇಳೆ ನಿವಾಸದಲ್ಲಿ ಯಾರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ತಲುಪಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಿಪ್ಗೆನ್ ಕುಕಿ ಸಮುದಾಯದ ನಾಯಕಿ ಆಗಿದ್ದಾರೆ. ಘಟನೆಯ ಕುರಿತಾಗಿ ಇದುವರೆಗೂ ಯಾವುದೇ ಗುಂಪು ಕೂಡ ಜವಾಬ್ದಾರಿಯನ್ನು ವಹಿಸಿಕೊಂಡಿಲ್ಲ. ಸದ್ಯ ಹಿರಿಯ ಅಧಿಕಾರಿಗಳ ನೇತೃತ್ವದ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.

ಇದನ್ನೂ ಓದಿ: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಸಾರ್ವಜನಿಕರ ಅಭಿಪ್ರಾಯ ಕೇಳಲು ಮುಂದಾದ ಕಾನೂನು ಆಯೋಗ

ಬುಡಕಟ್ಟು ಪ್ರಾಬಲ್ಯ ಹೊಂದಿರುವ ಕಾಂಗ್ಪೊಕ್ಪಿ ಸ್ಥಾನದಿಂದ ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಕಿಪ್ಗೆನ್, ಮುಖ್ಯಮಂತ್ರಿ ಎನ್​​ ಬಿರೇನ್ ಸಿಂಗ್ ನೇತೃತ್ವದ 12 ಸದಸ್ಯರ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದಾರೆ.

ಪ್ರತ್ಯೇಕ ಆಡಳಿತಕ್ಕಾಗಿ ಒತ್ತಾಯಿಸಿದ 10 ಕುಕಿ ಶಾಸಕರಲ್ಲಿ ಮತ್ತು ಬಿಜೆಪಿಯ ಏಳು ಕುಕಿ ಶಾಸಕರಲ್ಲಿ ಅವರು ಒಬ್ಬರು. ಕಳೆದ 24 ಗಂಟೆಗಳಲ್ಲಿ, ಒಬ್ಬರು ಮಹಿಳೆ ಸೇರಿದಂತೆ ಒಟ್ಟು ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಖಮೆನ್ಲೋಕ್ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಹೆಚ್ಚಿನವರು ಸಾವನ್ನಪ್ಪಿದ್ದಾರೆ ಎಂದು ಸೇನೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೋಟಿ ಒಡೆಯ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ: ಆಸ್ತಿ ಮೌಲ್ಯ ಎಷ್ಟು?

ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ ಈಗ ಒಂದು ತಿಂಗಳಿನಿಂದ ಉದ್ವಿಗ್ನವಾಗಿರುವ ರಾಜ್ಯದಲ್ಲಿ ಈ ದಾಳಿಗಳು ದೊಡ್ಡ ಹಿನ್ನಡೆಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:02 pm, Wed, 14 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ