AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಣಿಪುರದ ಉಖ್ರುಲ್​ನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಗುಂಡಿನ ಸದ್ದು ಕೇಳಿದೆ. ಕಾಂಗ್ರೆಸ್​ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಮೇಲೆ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Image Credit source: India Today
ನಯನಾ ರಾಜೀವ್
|

Updated on: Mar 20, 2024 | 7:47 AM

Share

ಕಾಂಗ್ರೆಸ್​(Congress)ನ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಣಿಪುರದ ಉಖ್ರುಲ್​ನಲ್ಲಿ ನಡೆದಿದೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ (ಮಣಿಪುರದ ಹೊರ ಕ್ಷೇತ್ರ) ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಉಖ್ರುಲ್‌ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದರು.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಈ ಪರಿಸ್ಥಿತಿಯಲ್ಲಿ ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟೀನೆಮ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಲ್ಫ್ರೆಡ್ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮಣಿಪುರದಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ