AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಮಣಿಪುರದ ಉಖ್ರುಲ್​ನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಗುಂಡಿನ ಸದ್ದು ಕೇಳಿದೆ. ಕಾಂಗ್ರೆಸ್​ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಮೇಲೆ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಣಿಪುರದಲ್ಲಿ ಕಾಂಗ್ರೆಸ್​ ಸಮಾವೇಶದ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Image Credit source: India Today
ನಯನಾ ರಾಜೀವ್
|

Updated on: Mar 20, 2024 | 7:47 AM

Share

ಕಾಂಗ್ರೆಸ್​(Congress)ನ ಸಮಾವೇಶವೊಂದರಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಮಣಿಪುರದ ಉಖ್ರುಲ್​ನಲ್ಲಿ ನಡೆದಿದೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಂಪಿಸಿಸಿ ಅಧ್ಯಕ್ಷ ಕೆ.ಮೇಘಚಂದ್ರ, ಚಿಂಗೈ ವಿಧಾನಸಭಾ ಕ್ಷೇತ್ರದ ಟೀನೆಮ್ ಗ್ರಾಮದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಉಖ್ರುಲ್ ಜಿಲ್ಲೆಯ (ಮಣಿಪುರದ ಹೊರ ಕ್ಷೇತ್ರ) ಕಾಂಗ್ರೆಸ್ ಅಭ್ಯರ್ಥಿ ಆಲ್ಫ್ರೆಡ್ ಕಂಗಮ್ ಆರ್ಥರ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಉಖ್ರುಲ್‌ನ ಪಯೋರಿ ಶಿರುಯಿ ಗ್ರಾಮದ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಮಾಜಿ ಶಾಸಕ ಆಲ್ಫ್ರೆಡ್ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಅಭ್ಯರ್ಥಿಯಾಗಿ ಆಲ್ಫ್ರೆಡ್ ಕಂಗಮ್ ಆರ್ಥರ್ ಕಳೆದ ಮೂರು ದಿನಗಳಿಂದ ಚುನಾವಣಾ ಪ್ರಚಾರದ ಭಾಗವಾಗಿ ಜನರನ್ನು ಭೇಟಿಯಾಗುತ್ತಿದ್ದಾರೆ ಎಂದು ಮೇಘಚಂದ್ರ ಹೇಳಿದರು.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಈ ಪರಿಸ್ಥಿತಿಯಲ್ಲಿ ಮಾರ್ಚ್ 18 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಟಿಕೆ ವುಡ್‌ಲ್ಯಾಂಡ್ ರೆಸಾರ್ಟ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟೀನೆಮ್ ಗ್ರಾಮದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಲ್ಫ್ರೆಡ್ ಮೇಲೆ ಮತ್ತೆ ದಾಳಿ ನಡೆಸಿದ್ದಾರೆ ಎಂದು ಎಂಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ. ಇದೇ ಪರಿಸ್ಥಿತಿ ಮುಂದುವರಿದರೆ ಮಣಿಪುರದಲ್ಲಿ ಚುನಾವಣೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ