AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್​ ಅನ್ನು ಧ್ವಂಸಗೊಳಿಸಿ ಬೆಂಕಿ ಇಟ್ಟ ಕಿಡಿಗೇಡಿಗಳು

ಮಣಿಪುರ(Manipur)ದ ಚುರಾಚಂದ್​ಪುರ ಜಿಲ್ಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಎನ್​ ಬಿರೇನ್​ ಸಿಂಗ್ ಅವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆಂದು ಸಿದ್ಧಗೊಂಡಿದ್ದ ಸ್ಥಳವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಉದ್ಘಾಟಿಸಬೇಕಿದ್ದ ಜಿಮ್​ ಅನ್ನು ಧ್ವಂಸಗೊಳಿಸಿ ಬೆಂಕಿ ಇಟ್ಟ ಕಿಡಿಗೇಡಿಗಳು
ಮಣಿಪುರ ಜಿಮ್Image Credit source: Economic Times
ನಯನಾ ರಾಜೀವ್
|

Updated on:Apr 28, 2023 | 9:15 AM

Share

ಮಣಿಪುರ(Manipur)ದ ಚುರಾಚಂದ್​ಪುರ ಜಿಲ್ಲೆಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಎನ್​ ಬಿರೇನ್​ ಸಿಂಗ್ ಅವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಕ್ಕೆಂದು ಸಿದ್ಧಗೊಂಡಿದ್ದ ಸ್ಥಳವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಅವರು ಜಿಮ್​-ಕಮ್ ಸ್ಪೋರ್ಟ್ಸ್​ ಸೌಲಭ್ಯ ಉದ್ಘಾಟಿಸುವವರಿದ್ದರು. ಕಿಡಿಗೇಡಿಗಳು ಜಿಮ್​ನಲ್ಲಿರುವ ಸೌಲಭ್ಯವನ್ನು ಧ್ವಂಸಗೊಳಿಸಿದ್ದಷ್ಟೇ ಅಲ್ಲದೆ ಕಾರ್ಯಕ್ರಮ ನಿಯೋಜನೆಗೊಂಡಿರುವ ಸ್ಥಳಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಗುಂಪನ್ನು ಚದುರಿಸಿದರು ಅಷ್ಟರಲ್ಲಾಗಲೇ ಕುರ್ಚಿಗಳು ಕೂಡ ಸಂಪೂರ್ಣ ಸುಟ್ಟು ಹೋಗಿದ್ದವು, ಜತೆಗೆ ಜಿಮ್​ ಉಪಕರಣಗಳಿಗೂ ಹಾನಿಯಾಗಿತ್ತು.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಇದೀಗ ಆ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಬಿರೇನ್ ಸಿಂಗ್ ನ್ಯೂ ಲಮ್ಕಾದಲ್ಲಿರುವ ಪಿಟಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ಹೊಸದಾಗಿ ಸ್ಥಾಪಿಸಲಾದ ತೆರೆದ ಜಿಮ್ ಅನ್ನು ಉದ್ಘಾಟಿಸಬೇಕಿತ್ತು.

ಈ ಕಾರಣದಿಂದ ಮುಖ್ಯಮಂತ್ರಿಗಳ ಕಾರ್ಯಕ್ರಮ ರದ್ದಾಗಿದೆಯೇ ಎಂಬುದನ್ನು ಜಿಲ್ಲಾಡಳಿತ ಇನ್ನೂ ಖಚಿತಪಡಿಸಿಲ್ಲ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಜಿಲ್ಲೆಯಲ್ಲಿ ಶಾಂತಿ ಭಂಗ, ಸಾರ್ವಜನಿಕ ನೆಮ್ಮದಿಗೆ ಭಂಗ ಮತ್ತು ಮಾನವ ಜೀವ ಮತ್ತು ಆಸ್ತಿಪಾಸ್ತಿಗಳಿಗೆ ಗಂಭೀರ ಅಪಾಯ ಉಂಟಾಗಬಹುದು ಎಂಬ ವರದಿಯನ್ನು ಉಲ್ಲೇಖಿಸಿ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:15 am, Fri, 28 April 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್