AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ಮನೆಯಿಂದಲೇ ಯೋಧನ ಅಪಹರಣ, ಹತ್ಯೆ

ಮಣಿಪುರದ ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಭಾರತೀಯ ಯೋಧರೊಬ್ಬರ ಶವ ಪತ್ತೆಯಾಗಿದೆ. ಕೆಲವು ಶಸ್ತ್ರಸಜ್ಜಿತರು ಯೋಧರನ್ನು ಮನೆಯಿಂದಲೇ ಅಪಹರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ಗುಂಡೇಟು ತಗುಲಿದ ಸ್ಥಿತಿಯಲ್ಲಿ ಯೋಧನ ಶವ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.ಯೋಧ ಸೆರ್ಟೊ ತಂಗ್‌ತಾಂಗ್ ಕೋಮ್ ರಜೆಯ ಮೇಲೆ ಮನೆಗೆ ಬಂದಿದ್ದರು, ಮೂವರು ಆರೋಪಿಗಳು ಶಸ್ತ್ರಾಸ್ತ್ರಗಳನ್ನು ಹಿಡಿದು ಬೆದರಿಸಿ ಅಪಹರಿಸಿದ್ದರು.

ಮಣಿಪುರ: ಮನೆಯಿಂದಲೇ ಯೋಧನ ಅಪಹರಣ, ಹತ್ಯೆ
ಯೋಧ
ನಯನಾ ರಾಜೀವ್
|

Updated on:Sep 18, 2023 | 9:06 AM

Share

ಮಣಿಪುರ(Manipur)ದ ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ಭಾರತೀಯ ಯೋಧರೊಬ್ಬರ ಶವ ಪತ್ತೆಯಾಗಿದೆ. ಕೆಲವು ಶಸ್ತ್ರಸಜ್ಜಿತರು ಯೋಧರನ್ನು ಮನೆಯಿಂದಲೇ ಅಪಹರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ಗುಂಡೇಟು ತಗುಲಿದ ಸ್ಥಿತಿಯಲ್ಲಿ ಯೋಧನ ಶವ ಪತ್ತೆಯಾಗಿರುವುದು ಆತಂಕ ಮೂಡಿಸಿದೆ.ಯೋಧ ಸೆರ್ಟೊ ತಂಗ್‌ತಾಂಗ್ ಕೋಮ್ ರಜೆಯ ಮೇಲೆ ಮನೆಗೆ ಬಂದಿದ್ದರು, ಮೂವರು ಆರೋಪಿಗಳು ಶಸ್ತ್ರಾಸ್ತ್ರಗಳನ್ನು ಹಿಡಿದು ಬೆದರಿಸಿ ಅಪಹರಿಸಿದ್ದರು.

ಭಾನುವಾರ ಇಂಫಾಲ್ ಪೂರ್ವ ಜಿಲ್ಲೆಯ ಖುನಿಂಗ್‌ಥೆಕ್ ಗ್ರಾಮದಲ್ಲಿ ಅವರ ಶವ ಪತ್ತೆಯಾಗಿತ್ತು, ದೇಹದ ತುಂಬೆಲ್ಲಾ ಗುಂಡೇಟುಗಳಿದ್ದವು. ಯೋಧ ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬದವರ ಅಪೇಕ್ಷೆಯಂತೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ. ಮೃತ ಯೋಧನ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸೇನಾ ತಂಡ ಅವರ ಮನೆಗೆ ತಲುಪಿದೆ.

ಈ ಕಷ್ಟದ ಸಮಯದಲ್ಲಿ ಸೇನೆಯು ಅವರ ಕುಟುಂಬದೊಂದಿಗೆ ನಿಲ್ಲುತ್ತದೆ ಎಂದು ಹೇಳಿದೆ. 8ನೇ ಅಸ್ಸಾಂ ರೆಜಿಮೆಂಟ್‌ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಮೃತ ಜವಾನ್ ತಂಗ್‌ಥಾಂಗ್ ಅವರನ್ನು ಕೆಲವು ವರ್ಷಗಳ ಹಿಂದೆ ಡಿಎಸ್‌ಸಿಗೆ ಮರು ನೇಮಕ ಮಾಡಲಾಗಿತ್ತು. ರಜೆಯ ಮೇಲೆ ಊರಿಗೆ ಹೋಗಿದ್ದ ಅವರು ಸೋಮವಾರ ಕರ್ತವ್ಯಕ್ಕೆ ಮರಳಬೇಕಿತ್ತು.

ಮತ್ತಷ್ಟು ಓದಿ: ಛತ್ತೀಸ್​​ಗಢದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಮಂಡ್ಯ ಮೂಲದ ಯೋಧ ಜನಾರ್ದನ್‌ ಗೌಡ ಸಾವು

ವೈಯಕ್ತಿಕ ದ್ವೇಷದಿಂದ ಕೊಲೆ ಮಾಡಲಾಗಿದೆಯೋ ಅಥವಾ ಇನ್ಯಾವುದೇ ಕಾರಣಗಳಿವೆಯಾ, ಹತ್ಯೆ ಮಾಡಿದ್ದು ಯಾರು ಅಪಹರಣ ಮಾಡಿದ್ದೇಕೆ?ಇವೆಲ್ಲಾ ವಿಚಾರಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Mon, 18 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ