AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ, ನಾಲ್ವರ ಬಂಧನ

ಮಣಿಪುರ(Manipur)ದಲ್ಲಿ ಮೈಥಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಈ ಕುರಿತು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಏಜೆನ್ಸಿಯ ವಿಶೇಷ ನಿರ್ದೇಶಕ ಅಜಯ್ ಭಟ್ನಾಗರ್ ನೇತೃತ್ವದಲ್ಲಿ ಐವರು ಅಧಿಕಾರಿಗಳನ್ನೊಳಗೊಂಡ ವಿಶೇಷ ಸಿಬಿಐ ತಂಡವು ಸೆಪ್ಟೆಂಬರ್ 27 ರಿಂದ ಮಣಿಪುರದಲ್ಲಿ ಮೊಕ್ಕಾಂ ಹೂಡಿದೆ ಎಂದು ಅವರು ಹೇಳಿದರು

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಹತ್ಯೆ ಪ್ರಕರಣ, ನಾಲ್ವರ ಬಂಧನ
ಸಿಬಿಐImage Credit source: NDTV
ನಯನಾ ರಾಜೀವ್
|

Updated on: Oct 02, 2023 | 7:55 AM

Share

ಮಣಿಪುರ(Manipur)ದಲ್ಲಿ ಮೈಥಿ ಸಮುದಾಯಕ್ಕೆ ಸೇರಿದ ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರನ್ನು ಸೇರಿ ಒಟ್ಟು ನಾಲ್ವರನ್ನು ಪೊಲೀಸ್ ಹಾಗೂ ಸಿಬಿಐ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಈ ಕುರಿತು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ಏಜೆನ್ಸಿಯ ವಿಶೇಷ ನಿರ್ದೇಶಕ ಅಜಯ್ ಭಟ್ನಾಗರ್ ನೇತೃತ್ವದಲ್ಲಿ ಐವರು ಅಧಿಕಾರಿಗಳನ್ನೊಳಗೊಂಡ ವಿಶೇಷ ಸಿಬಿಐ ತಂಡವು ಸೆಪ್ಟೆಂಬರ್ 27 ರಿಂದ ಮಣಿಪುರದಲ್ಲಿ ಮೊಕ್ಕಾಂ ಹೂಡಿದೆ ಎಂದು ಅವರು ಹೇಳಿದರು.

ಬಿರೇನ್ ಸಿಂಗ್ ಮಾತನಾಡಿ, ಸಿಬಿಐ, ಸೇನೆ, ಅಸ್ಸಾಂ ರೈಫಲ್ಸ್ ಮತ್ತು ರಾಜ್ಯ ಭದ್ರತಾ ಪಡೆಗಳ ಜಂಟಿ ತಂಡವು ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಚುರಚಂದ್‌ಪುರ ಜಿಲ್ಲೆಯ ನಾಲ್ವರು ಶಂಕಿತರನ್ನು ಬಂಧಿಸಿದೆ.

ಇಬ್ಬರು ವಿದ್ಯಾರ್ಥಿನಿಯರ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಲಾಗುವುದು ಎಂದು ಕೇಂದ್ರ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಸಿಎಂ ಹೇಳಿದರು.

ಮಣಿಪುರ ಸರ್ಕಾರ ಈಗಾಗಲೇ ವಿದ್ಯಾರ್ಥಿಗಳ ಹತ್ಯೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಿದೆ. ಈಶಾನ್ಯ ಪ್ರದೇಶದಲ್ಲಿ, ಕಳೆದ ವಾರ 17 ವರ್ಷದ ವಿದ್ಯಾರ್ಥಿ ಹಿಜಾಮ್ ಲಿಂತೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೇಮ್‌ಜೀತ್ ಹತ್ಯೆಯ ವಿರುದ್ಧ ವಿದ್ಯಾರ್ಥಿಗಳು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದರು.

ಮತ್ತಷ್ಟು ಓದಿ: ಮಣಿಪುರ: ಜುಲೈನಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಶವದ ಚಿತ್ರಗಳು ವೈರಲ್

ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು ಇಬ್ಬರೂ ವಿದ್ಯಾರ್ಥಿಗಳು ಬಿಷ್ಣುಪುರ ಜಿಲ್ಲೆಯವರಾಗಿದ್ದು, ಜುಲೈ 6 ರಂದು ಮಣಿಪುರದಲ್ಲಿ ಜಾತಿ ಹಿಂಸಾಚಾರದ ತೀವ್ರತೆಯ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಅವರ ಚಿತ್ರಗಳು ಸೆಪ್ಟೆಂಬರ್ 25 ರಂದು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದ್ದವು.

ಸಂತ್ರಸ್ತರ ಕುಟುಂಬಗಳು ತಮ್ಮ ಮಕ್ಕಳನ್ನು ಶಸ್ತ್ರಸಜ್ಜಿತ ದಾಳಿಕೋರರು ಕೊಂದಿದ್ದಾರೆ ಎಂದು ಶಂಕಿಸಿದ್ದಾರೆ. ಭದ್ರತಾ ಪಡೆಗಳೊಂದಿಗಿನ ಘರ್ಷಣೆಯ ನಂತರ ಮುಖ್ಯಮಂತ್ರಿ ನಿವಾಸದ ಬಳಿ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದ ಕನಿಷ್ಠ 100 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ, ಪೊಲೀಸರು ಮತ್ತು ಸೇನೆಯು ಶಂಕಿತರನ್ನು ಇಂಫಾಲ್‌ನಿಂದ 51 ಕಿಮೀ ದೂರದಲ್ಲಿರುವ ಗುಡ್ಡಗಾಡು ಜಿಲ್ಲೆಯ ಚುರಾಚಂದ್‌ಪುರದಿಂದ ಬಂಧಿಸಿದೆ. ಅಲ್ಲಿ ಮೇ 3 ರಂದು ಜಾತಿ ಹಿಂಸಾಚಾರ ಪ್ರಾರಂಭವಾಗಿತ್ತು.

ಶಂಕಿತ ಆರೋಪಿಗಳ ಹೆಸರುಗಳು ಪಾವೊಮಿನ್ಲುನ್ ಹಾಕಿಪ್ ಎಸ್ ಮಾಲ್ಸಾವ್ ಹಾಕಿಪ್ ಲಿಂಗ್ನೀಚೊಂಗ್ ಬೈಟ್ ತಿನ್ನಿಖೋಲ್ ಕಿಮ್ನೈಗೆಮ್ ಟಿನ್ನುಫಿಂಗ್

ಸಿಸಿಟಿವಿ ದೃಶ್ಯದಲ್ಲೇನಿತ್ತು? ವಿದ್ಯಾರ್ಥಿಗಳು ಕಾಣೆಯಾದ ಬಳಿಕ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು, ಪೊಲೀಸರು ಸಿಸಿಟಿವಿಯನ್ನು ಪರೀಕ್ಷಿಸಿದಾಗ ಇಬ್ಬರು ಕಿಡ್ನ್ಯಾಪ್ ಆಗಿರುವುದು ಗೊತ್ತಾಗಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಮೃತದೇಹದ ಚಿತ್ರಗಳು ವೈರಲ್ ಆಗಿದ್ದವು. ಆದರೂ ಅವರ ಮೃತದೇಹ ಪತ್ತೆಯಾಗಿರಲಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ