AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ

ಮಣಿಪುರ(Manipur)ದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಂತಿಲ್ಲ, ಹಿಂಸಾಚಾರ ನಿಯಂತ್ರಿಸಲು ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ.

Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ
ಮಣಿಪುರImage Credit source: Indian Express
ನಯನಾ ರಾಜೀವ್
|

Updated on: Jun 25, 2023 | 10:00 AM

Share

ಮಣಿಪುರ(Manipur)ದಲ್ಲಿ ಕಳೆದೊಂದು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರ ಇನ್ನೂ ನಿಂತಿಲ್ಲ, ಹಿಂಸಾಚಾರ ನಿಯಂತ್ರಿಸಲು ಹಲವು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ. ಶಾಂತಿಯನ್ನು ಪುನಃಸ್ಥಾಪಿಸಲು ಸರ್ಕಾರವು ಸೇನೆಯನ್ನು ಮುಂದಿರಿಸಿದೆ. ಮಹಿಳಾ ಗುಂಪಿನ ಒತ್ತಾಯದ ಮೇರೆಗೆ 12 ಉಗ್ರರನ್ನು ಅನಿವಾರ್ಯವಾಗಿ ಬಿಟ್ಟುಕಳುಹಿಸಬೇಕಾಯಿತು. ಭದ್ರತಾ ಪಡೆಗಳು ಉಗ್ರರಿಂದ ವಶಪಡಿಸಿಕೊಂಡ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಉಗ್ರರನ್ನು ರಕ್ಷಿಸಲು ಮಹಿಳೆಯರು ಮುಂದಾಗಿರುವುದು ಇದೇ ಮೊದಲೇನಲ್ಲ.ಈ ಹಿಂದೆಯೂ ಇಂತಹ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ. ಮಹಿಳೆಯರ ನೇತೃತ್ವದ ಸುಮಾರು 1,500 ಜನರ ಗುಂಪೊಂದು ಅವರನ್ನು ಸುತ್ತುವರೆದು ಶೋಧ ಕಾರ್ಯಾಚರಣೆಯನ್ನು ವಿಫಲಗೊಳಿಸಿದ ನಂತರ 12 ಉಗ್ರರನ್ನು ಬಿಡಬೇಕಾಯಿತು.

ಮಣಿಪುರದಲ್ಲಿ ಮೀಸಲು ವಿಚಾರದಲ್ಲಿ ಆದಿವಾಸಿ ಪಂಗಡಗಳ ಆಕ್ರೋಶ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಾಕಷ್ಟು ಗಲಭೆಗಳು ಸಂಭವಿಸಿವೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು

ಏಕಾಏಕಿ ಉಗ್ರರನ್ನು ವಶಕ್ಕೆ ಪಡೆದಿದ್ದನ್ನು ವಿರೋಧಿಸಿದ ಸೇನೆಯನ್ನು ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಸುತ್ತುವರೆದಿದ್ದರು. ಮಹಿಳೆಯರ ಒತ್ತಾಯಕ್ಕೆ ಮಣಿದ ಸೇನೆ ಎಲ್ಲಾ 12 ಉಗ್ರರನ್ನು ಬಿಡುಗಡೆ ಮಾಡಿದೆ.

ಹಲವು ದಾಳಿಗಳಲ್ಲಿ ಕೆಂಗ್ಲೆ ಯಾವೋಲ್ ಕನ್ನಾ ಲುಪ್ ಗುಂಪು ಭಾಗಿಯಾಗಿತ್ತು. 7 ವರ್ಷಗಳ ಹಿಂದೆ ನಡೆದ ಡೋಗ್ರಾ ಘಟಕದ ಮೇಲೂ ದಾಳಿ ಮಾಡಿತ್ತು, ಈ ಕುರಿತು ವಿಚಾರಣೆ ನಡೆಸಿ ಉಗ್ರರನ್ನು ವಶಕ್ಕೆ ಪಡೆಯಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​