AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು
ಮಣಿಪುರ ಗಲಭೆImage Credit source: Hindustan Times
ನಯನಾ ರಾಜೀವ್
|

Updated on: Jun 27, 2023 | 10:03 AM

Share

ಹಿಂಸಾಚಾರ ಪೀಡಿತ ಮಣಿಪುರ(Manipur)ದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ನಿರತ ಮಹಿಳೆಯರು ರಸ್ತೆ ತಡೆ ನಡೆಸುತ್ತಿದ್ದು, ಸೇನಾ ಸಿಬ್ಬಂದಿಗೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ಸೇನೆ ಹೇಳಿದೆ. ಜತೆಗೆ ಫೋಟೊವನ್ನು ಕೂಡ ಹಂಚಿಕೊಂಡಿದೆ.

ಮಣಿಪುರದಲ್ಲಿ ಮಹಿಳೆಯರು ಉದ್ದೇಶಪೂರ್ವಕವಾಗಿ ತಮ್ಮ ಕಾರ್ಯಾಚರಣೆಗೆ ಅಡ್ಡಿಪಡಿವುದು ಕಾನೂನು ಬಾಹಿರ ಎಂದು ಸೇನೆ ಹೇಳಿದೆ. ಭದ್ರತಾ ಸಿಬ್ಬಂದಿಯ ಚಲನವಲನವನ್ನು ನಿರ್ಬಂಧಿಸುವುದು ಕಾನೂನು ಬಾಹಿರ ಮಾತ್ರವಲ್ಲ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತಿದೆ.

ಸೋಮವಾರ ತಡರಾತ್ರಿ, ಭಾರತೀಯ ಸೇನೆಯು ಟ್ವೀಟ್​ ಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಯಕರ್ತರು ಯೋಧರನ್ನು ಮುಂದೆ ಸಾಗದಂತೆ ತಡೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ ಮೈಥಿ ಸಮುದಾಯದ ಸದಸ್ಯರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗಲಭೆಯಲ್ಲಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, 60 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ನಿತ್ಯವೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಜನರು ಯುದ್ಧದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಒಂದೆರಡು ದಿನಗಳ ಹಿಂದೆ 12 ಉಗ್ರರನ್ನು ಸೇನೆಯು ಬಂಧಿಸಿತ್ತು ಆದರೆ ಮಹಿಳೆಯರ ಒತ್ತಾಯದ ಮೇರೆಗೆ ಅವರನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ