AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ.

Manipur Violence: ಮಣಿಪುರದಲ್ಲಿ ಸೇನೆಗೆ ಮಹಿಳೆಯರೇ ದೊಡ್ಡ ಸವಾಲು, ಫೋಟೊ ಹಂಚಿಕೊಂಡ ಸೈನಿಕರು
ಮಣಿಪುರ ಗಲಭೆImage Credit source: Hindustan Times
ನಯನಾ ರಾಜೀವ್
|

Updated on: Jun 27, 2023 | 10:03 AM

Share

ಹಿಂಸಾಚಾರ ಪೀಡಿತ ಮಣಿಪುರ(Manipur)ದಲ್ಲಿ ಸೇನೆಗೆ ಪ್ರತಿಭಟನಾ ನಿರತ ಮಹಿಳೆಯರೇ ದೊಡ್ಡ ಸವಾಲಾಗಿದ್ದಾರೆ. ಉದ್ದೇಶಪೂರ್ವಕವಾಗಿಯೇ ಸೇನೆಯ ಕಾರ್ಯಾಚರಣೆಗೆ ಅಡ್ಡಿಪಡಿಸುವ ಪ್ರಯತ್ನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ನಿರತ ಮಹಿಳೆಯರು ರಸ್ತೆ ತಡೆ ನಡೆಸುತ್ತಿದ್ದು, ಸೇನಾ ಸಿಬ್ಬಂದಿಗೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಲು ಸಾಧ್ಯವಾಗುತ್ತಿಲ್ಲ ಎಂದು ಸೇನೆ ಹೇಳಿದೆ. ಜತೆಗೆ ಫೋಟೊವನ್ನು ಕೂಡ ಹಂಚಿಕೊಂಡಿದೆ.

ಮಣಿಪುರದಲ್ಲಿ ಮಹಿಳೆಯರು ಉದ್ದೇಶಪೂರ್ವಕವಾಗಿ ತಮ್ಮ ಕಾರ್ಯಾಚರಣೆಗೆ ಅಡ್ಡಿಪಡಿವುದು ಕಾನೂನು ಬಾಹಿರ ಎಂದು ಸೇನೆ ಹೇಳಿದೆ. ಭದ್ರತಾ ಸಿಬ್ಬಂದಿಯ ಚಲನವಲನವನ್ನು ನಿರ್ಬಂಧಿಸುವುದು ಕಾನೂನು ಬಾಹಿರ ಮಾತ್ರವಲ್ಲ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾಗುತ್ತಿದೆ.

ಸೋಮವಾರ ತಡರಾತ್ರಿ, ಭಾರತೀಯ ಸೇನೆಯು ಟ್ವೀಟ್​ ಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಯಕರ್ತರು ಯೋಧರನ್ನು ಮುಂದೆ ಸಾಗದಂತೆ ತಡೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Manipur Violence: ಅನಿವಾರ್ಯವಾಗಿ ಮಹಿಳೆಯರ ಒತ್ತಾಯಕ್ಕೆ ಮಣಿದು 12 ಉಗ್ರರ ಬಿಡುಗಡೆ ಮಾಡಿದ ಸೇನೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಬೇಕೆಂದು ಒತ್ತಾಯಿಸಿ ಮೈಥಿ ಸಮುದಾಯದ ಸದಸ್ಯರು ಮಹಾರಾಷ್ಟ್ರದ ಪುಣೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗಲಭೆಯಲ್ಲಿ 100ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, 60 ಸಾವಿರ ಮಂದಿ ಸ್ಥಳಾಂತರಗೊಂಡಿದ್ದಾರೆ. ನಿತ್ಯವೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಜನರು ಯುದ್ಧದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ಒಂದೆರಡು ದಿನಗಳ ಹಿಂದೆ 12 ಉಗ್ರರನ್ನು ಸೇನೆಯು ಬಂಧಿಸಿತ್ತು ಆದರೆ ಮಹಿಳೆಯರ ಒತ್ತಾಯದ ಮೇರೆಗೆ ಅವರನ್ನು ಬಿಡುಗಡೆ ಮಾಡಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ