AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ.

Manipur Violence: ಮಣಿಪುರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು
ಶಸ್ತ್ರಾಸ್ತ್ರಗಳು
ನಯನಾ ರಾಜೀವ್
|

Updated on: Jun 28, 2023 | 8:23 AM

Share

ಮಣಿಪುರ(Manipur)ದಲ್ಲಿ ಕಳೆದ ಒಂದು ತಿಂಗಳಿಂದ ಹಿಂಸಾಚಾರ ಭುಗಿಲೆದ್ದಿದೆ ನೂರಾರು ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಮಣಿಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್​ನ ಕೊಹಿಮಾ ಬಳಿ ಶಸ್ತ್ರಾಸ್ತ್ರ, ಮದ್ದುಗುಂಡುಗಳು, ಎರಡು ಪಿಸ್ತೂಲು, ನಾಲ್ಕು ಮ್ಯಾಗಜಿನ್​ಗಳು, ಸ್ಫೋಟಕಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಅಸ್ಸಾಂ ರೈಫಲ್ಸ್​ ಹಾಗೂ ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.

ಗುಪ್ತಚರ ಮಾಹಿತಿ ಮೇರೆಗೆ ಜೂನ್ 26ರಂದು ಬೆಳಗಿನ ಜಾವ 2 ಗಮಟೆ ವೇಳೆಗೆ ಅಸ್ಸಾಂ ರೈಫಲ್ಸ್ ಮತ್ತು ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.ಕಾರ್ಯಾಚರಣೆಯಲ್ಲಿ ವಾಹನವನ್ನು ಮೊದಲು ಪತ್ತೆ ಹಚ್ಚಿದರು ಬಳಿಕ ಸತತ 4 ಗಂಟೆಗಳ ಕಾಲ ಕಣ್ಣಿಡಲಾಗಿತ್ತು.

ಮತ್ತಷ್ಟು ಓದಿ: Manipur violence: ಮಣಿಪುರ ಹಿಂಸಾಚಾರ: ಸಚಿವರ ಒಡೆತನದ ಖಾಸಗಿ ಗೋಡೌನ್‌ಗೆ ಬೆಂಕಿ ಹಚ್ಚಿದ ಜನರ ಗುಂಪು

ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಂಟಿ ತಂಡವು ವಾಹನವನ್ನು ಶೋಧಿಸಿ ಎರಡು ಪಿಸ್ತೂಲ್‌ಗಳು, ನಾಲ್ಕು ಮ್ಯಾಗಜೀನ್‌ಗಳು, ಮದ್ದುಗುಂಡುಗಳು, ಸ್ಫೋಟಕಗಳು ಮತ್ತು ಇತರೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಯಿತು. ಮಣಿಪುರದಲ್ಲಿ ಹಿಂಸಾಚಾರವನ್ನು ಮುಂದುವರೆಸಲು ನಡೆಸಿದ್ದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?