AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur violence: ಮಣಿಪುರ ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಆದೇಶ: ಅಮಿತ್ ಶಾ

ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ.

Manipur violence: ಮಣಿಪುರ ಹಿಂಸಾಚಾರ ಪ್ರಕರಣ ನ್ಯಾಯಾಂಗ ತನಿಖೆಗೆ ಆದೇಶ: ಅಮಿತ್ ಶಾ
ಅಮಿತ್​​​ ಶಾ
ಅಕ್ಷಯ್​ ಪಲ್ಲಮಜಲು​​
|

Updated on:Jun 01, 2023 | 11:33 AM

Share

ಇಂಫಾಲ್: ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಪ್ರಕರಣಕ್ಕೆ (Manipur violence) ಸಂಬಂಧಿಸಿದಂತೆ ಮಣಿಪುರ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆದೇಶ ನೀಡಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾಜಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ ಮತ್ತು ಶಾಂತಿ ಸಮಿತಿಯನ್ನು ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿ ನೀಡಿದ ಅಮಿತ್​ ಶಾ ಈ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಣಿಪುರದಲ್ಲಿ ಆದಷ್ಟು ಬೇಗ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ನಿರಾಶ್ರಿತರನ್ನು ಅವರ ಮನೆಗಳಿಗೆ ಹಿಂದಿರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಮಣಿಪುರ ಶಾಂತವಾಗಿದೆ . ನಾವು ಜನರಿಗೆ ಅಭಿವೃದ್ಧಿ ಮತ್ತು ಕಲ್ಯಾಣವನ್ನು ತಲುಪಿಸುತ್ತಿದ್ದೇವೆ ಎಂದು ಹೇಳಿದರು.

ಮಣಿಪುರದಲ್ಲಿ ಕುಕಿ ಮತ್ತು ಮೇಟಿ ಸಮುದಾಯದ ನಡುವಿನ ಸಂಘರ್ಷಕ್ಕೆ ಕಾರಣವಾದ ಆತುರದ ನಿರ್ಧಾರದಿಂದ ಮೀಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನವನ್ನು ನೀಡಲು ರಾಜ್ಯ ಸರ್ಕಾರವನ್ನು ಶಿಫಾರಸು ಮಾಡುವಂತೆ ಕೇಳಿದೆ. ಕುಕಿಗಳು ಮತ್ತು ಮೇಟಿಗಳೆರಡೂ ನೆಲೆಸಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಕುಕಿಗಳು ಮತ್ತು ಮೇಟಿ ಸುರಕ್ಷಿತವಾಗಿ ಮನೆಗೆ ಮರುಳುವಂತೆ ಮಾಡುವುದು ನಮ್ಮ ಕರ್ತವ್ಯ , ಆ ಕೆಲಸವನ್ನು ಮಾಡುತ್ತೇವೆ ಎಂದು ಭರವಸೆ ನೀಡಿದರು. ಅವರು ಕಾಂಗ್‌ಪೊಕ್ಪಿ ಮತ್ತು ಮೊರೆಯಲ್ಲಿ ಕುಕಿ ಸಮುದಾಯದ ಮುಖಂಡರು ಮತ್ತು ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: Manipur Violence Explainer: ದ್ವೇಷದ ಜ್ವಾಲೆಯಲ್ಲಿ ಹೊತ್ತಿ ಉರಿಯುತ್ತಿದೆ ಮಣಿಪುರ, ಹಿಂಸಾಚಾರಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ

ತುರ್ತು ಪರಿಸ್ಥಿತಿಗಳಿಗೆ ಹೆಲಿಕಾಪ್ಟರ್ ಸೇವೆಗಳು ಸೇರಿದಂತೆ ಅಗತ್ಯ ವಸ್ತುಗಳ ಸುರಕ್ಷತೆ ಮತ್ತು ಪೂರೈಕೆಯ ಭರವಸೆ ಕೂಡ ನೀಡಿದರು. ಮೇ 3ರಿಂದ ಪ್ರಕ್ಷುಬ್ಧ ಸ್ಥಿತಿಯಲ್ಲಿರುವ ಮಣಿಪುರಕ್ಕೆ ಷಾ ಭೇಟಿ ನೀಡಿದ್ದು, ಪ್ರಬಲ ಮೈತೆ ಸಮುದಾಯ ಮತ್ತು ಬುಡಕಟ್ಟು ಕುಕಿ ಸಮುದಾಯದ ನಡುವೆ ಘರ್ಷಣೆಗಳು ಭುಗಿಲೆದ್ದಿವೆ. ಹಿಂಸಾಚಾರದಲ್ಲಿ 80 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:22 am, Thu, 1 June 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ