AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಹಿಂಸಾಚಾರ; ಹೊಸ ವರ್ಷಕ್ಕೂ ಮುನ್ನ ರಾಜ್ಯದ ಜನರ ಕ್ಷಮೆ ಕೋರಿದ ಸಿಎಂ ಬಿರೇನ್ ಸಿಂಗ್

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜ್ಯದ ಜನರಿಗೆ ಕ್ಷಮೆ ಯಾಚನೆಯೊಂದಿಗೆ 2024ನೇ ವರ್ಷಕ್ಕೆ ವಿದಾಯ ಹೇಳಿದ್ದಾರೆ. ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ನನಗೆ ವಿಷಾದವಿದೆ. ಈ ವಿಷಯದಲ್ಲಿ ನಾನು ರಾಜ್ಯದ ಜನರಿಗೆ ಕ್ಷಮೆ ಕೋರಲು ಬಯಸುತ್ತೇನೆ ಎಂದು ಸಿಎಂ ಬಿರೇನ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಕಳೆದ 20 ತಿಂಗಳ ಜನಾಂಗೀಯ ಹಿಂಸಾಚಾರದಲ್ಲಿ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಕ್ಕಾಗಿ ಮಣಿಪುರ ಮುಖ್ಯಮಂತ್ರಿ ನೊಂಗ್ತೋಂಬಮ್ ಬಿರೇನ್ ಸಿಂಗ್ ರಾಜ್ಯದ ಜನರಲ್ಲಿ ಕ್ಷಮೆ ಯಾಚಿಸಿದ್ದಾರೆ. 2025ರಲ್ಲಿ ಮಣಿಪುರದಲ್ಲಿ ಶಾಂತಿ ಮತ್ತು ಸಹಜತೆಯ ನಿರ್ಮಾಣವಾಗುವ ಭರವಸೆಯಿದೆ ಎಂದು ಅವರು ಹೇಳಿದ್ದಾರೆ.

ಮಣಿಪುರ ಹಿಂಸಾಚಾರ; ಹೊಸ ವರ್ಷಕ್ಕೂ ಮುನ್ನ ರಾಜ್ಯದ ಜನರ ಕ್ಷಮೆ ಕೋರಿದ ಸಿಎಂ ಬಿರೇನ್ ಸಿಂಗ್
Manipur Cm
ಸುಷ್ಮಾ ಚಕ್ರೆ
|

Updated on: Dec 31, 2024 | 10:41 PM

Share

ನವದೆಹಲಿ: 2023ರ ಮೇ 3ರಿಂದ ನಮ್ಮ ರಾಜ್ಯದಲ್ಲಿ ಏನಾಯಿತೋ ಅದಕ್ಕೆ ನಾನು ಮಣಿಪುರ ರಾಜ್ಯದ ಜನರಿಗೆ ಕ್ಷಮೆ ಯಾಚಿಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡರು, ಅನೇಕರು ತಮ್ಮ ಮನೆಗಳನ್ನು ಕಳೆದುಕೊಂಡರು. ನಾನು ನಿಜವಾಗಿಯೂ ಈ ಬಗ್ಗೆ ವಿಷಾದಿಸುತ್ತೇನೆ. ಈ ಕುರಿತು ಎಲ್ಲಾ ಸ್ಥಳೀಯರಲ್ಲಿ ಕ್ಷಮೆ ಯಾಚಿಸಲು ಬಯಸುತ್ತೇನೆ ಎಂದು ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜ್ಯದ ರಾಜಧಾನಿ ಇಂಫಾಲ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಮಣಿಪುರದಲ್ಲಿ ಕಳೆದ 20 ತಿಂಗಳಿಂದ ನಡೆದ ಹಿಂಸಾಚಾರದ ಬಗ್ಗೆ ನನಗೆ ವಿಷಾದವಿದೆ. ಈ ಇಡೀ ವರ್ಷ ತುಂಬಾ ದುರದೃಷ್ಟಕರವಾಗಿತ್ತು. ಕಳೆದ ವರ್ಷ ಮೇ 3ರಿಂದ ಇಂದಿನವರೆಗೆ ಏನಾಗುತ್ತಿದೆಯೋ ಅದರ ಬಗ್ಗೆ ನಾನು ರಾಜ್ಯದ ಜನತೆಗೆ ವಿಷಾದ ವ್ಯಕ್ತಪಡಿಸಲು ಬಯಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಅನೇಕ ಜನರು ತಮ್ಮ ಮನೆಗಳನ್ನು ತೊರೆದರು. ನಾನು ನಿಜವಾಗಿಯೂ ಕ್ಷಮೆಯಾಚಿಸಲು ಬಯಸುತ್ತೇನೆ” ಎಂದು ಬಿರೇನ್ ಸಿಂಗ್ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಳ್ಳಲು ಕಾರಣ ಇಲ್ಲಿದೆ

“ಈಗ, ಕಳೆದ 3-4 ತಿಂಗಳ ಶಾಂತಿಯ ಪ್ರಗತಿಯನ್ನು ನೋಡಿದ ನಂತರ, 2025ರ ಹೊಸ ವರ್ಷದೊಂದಿಗೆ ರಾಜ್ಯದಲ್ಲಿ ಸಹಜತೆ ಮತ್ತು ಶಾಂತಿಯನ್ನು ಪುನಃಸ್ಥಾಪಿಸಲಾಗುವುದು ಎಂದು ನಾನು ಭಾವಿಸುತ್ತೇನೆ. ನಾವು ಈಗ ಹಿಂದಿನ ತಪ್ಪುಗಳನ್ನು ಮರೆತು ಶಾಂತಿಯುತ ಮಣಿಪುರ, ಸಮೃದ್ಧ ಮಣಿಪುರವನ್ನು ನಿರ್ಮಿಸಬೇಕು ಎಂದು ನಾನು ರಾಜ್ಯದ ಎಲ್ಲಾ ಸಮುದಾಯಗಳಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಬಿರೇನ್ ಸಿಂಗ್ ಹೇಳಿದರು.

ಏನಿದು ಮಣಿಪುರ ಸಂಘರ್ಷ?:

ಮೈಟೆಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರವು ಈ ಹಿಂದೆ ಇಂಫಾಲ್ ಕಣಿವೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಸೀಮಿತವಾಗಿತ್ತು, ಈ ವರ್ಷದ ಆರಂಭದಲ್ಲಿ ಜೂನ್‌ನಲ್ಲಿ ಅದು ಶಾಂತಿಯುತ ಜಿರಿಬಾಮ್ ಜಿಲ್ಲೆಗೂ ಹರಡಿತು. ಜಿರಿಬಾಮ್‌ನಲ್ಲಿ ಒಬ್ಬ ವ್ಯಕ್ತಿ ಶವವಾಗಿ ಪತ್ತೆಯಾದಾಗ ಹೊಸ ಜನಾಂಗೀಯ ಹಿಂಸಾಚಾರವನ್ನು ಪ್ರಚೋದಿಸಲಾಯಿತು. ಈ ಘಟನೆಯು ಎರಡು ಸಮುದಾಯಗಳ ನಡುವೆ ವ್ಯಾಪಕವಾದ ಅಗ್ನಿಸ್ಪರ್ಶ, ಗುಂಡಿನ ಚಕಮಕಿ ಮತ್ತು ಮನೆಗಳಿಗೆ ಬೆಂಕಿ ಹಚ್ಚಲು ಕಾರಣವಾಯಿತು, ಇದರಿಂದಾಗಿ 1,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮತ್ತೆ ಉದ್ವಿಗ್ನತೆ, ಬಿಹಾರದ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಈ ಸಂಘರ್ಷವು ಮ್ಯಾನ್ಮಾರ್‌ನಿಂದ ಗಡಿಯುದ್ದಕ್ಕೂ ಕಳ್ಳಸಾಗಣೆಯಾಗುವ ಶಸ್ತ್ರಾಸ್ತ್ರಗಳ ಬಳಕೆಯನ್ನು ಹೆಚ್ಚಿಸಿತು. ಮಣಿಪುರದಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳಿಂದ ಮ್ಯಾನ್ಮಾರ್ ತಯಾರಿಸಿದ ವಿವಿಧ ರೀತಿಯ ಶಸ್ತ್ರಾಸ್ತ್ರಗಳು ಮತ್ತು ಇತರ ಉಪಕರಣಗಳನ್ನು ವಶಪಡಿಸಿಕೊಳ್ಳಲಾಯಿತು. ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ್ ಕಣಿವೆ ಮೂಲದ ಮೈಟೈಸ್ ಮತ್ತು ಪಕ್ಕದ ಬೆಟ್ಟಗಳ ಮೂಲದ ಕುಕಿ-ಜೋ ಗುಂಪುಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ