ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು, ಕಮಾಂಡೋ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಕಮಾಂಡೋ ಹತ್ಯೆ
ಮಣಿಪುರ
Image Credit source: India Today

Updated on: Jan 17, 2024 | 10:43 AM

ಮಣಿಪುರ(Manipur)ದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು, ಕಮಾಂಡೋ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಂಗಳವಾರ ಇಂಫಾಲ್ ಪಶ್ಚಿಮ ಜಿಲ್ಲೆಯ ಕೌತ್ರುಕ್ ಗ್ರಾಮದಲ್ಲಿ ಭಾರೀ ಗುಂಡಿನ ಚಕಮಕಿ ವರದಿಯಾದ ನಂತರ ಕಲಹ ಪೀಡಿತ ಮಣಿಪುರದಲ್ಲಿ ಹೊಸ ಹಿಂಸಾಚಾರ ಸಂಭವಿಸಿದೆ.

ಗ್ರಾಮಸ್ಥರ ಪ್ರಕಾರ, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಗುಡ್ಡಗಾಡು ಪ್ರದೇಶದಿಂದ ಗುಂಡಿನ ಸದ್ದು ಮತ್ತು ಮೋರ್ಟಾರ್ ಬಾಂಬ್‌ಗಳು ಬರುತ್ತಿದ್ದವು.

ಕಳೆದ ವರ್ಷ ಮೇ 3 ರಂದು ಕಣಿವೆಯ ಬಹುಸಂಖ್ಯಾತ ಮೈಥಿ ಮತ್ತು ಗುಡ್ಡಗಾಡು ಬಹುಸಂಖ್ಯಾತ ಕುಕಿಗಳ ನಡುವೆ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು.

ಮತ್ತಷ್ಟು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 3 ಜನ ಸಾವು

ಕಳೆದ ವರ್ಷ ಮಣಿಪುರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಲಹ ಪೀಡಿತ ರಾಜ್ಯದಲ್ಲಿ ಭದ್ರತೆಯನ್ನು ಕಾಪಾಡಿಕೊಳ್ಳಲು ಹಲವಾರು ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದು ಹೇಳಿದ್ದರು. ಮಣಿಪುರದಲ್ಲಿ 180 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ಆಂತರಿಕವಾಗಿ ಸ್ಥಳಾಂತರಗೊಂಡಿದ್ದಾರೆ. ಮೊರೆಯಲ್ಲಿ ಪೊಲೀಸ್ ಅಧಿಕಾರಿಯನ್ನು ಕೊಂದ ಇಬ್ಬರು ಶಂಕಿತರನ್ನು ಬಂಧಿಸಿದ ಎರಡು ದಿನಗಳ ನಂತರ ಹಿಂಸಾಚಾರ ನಡೆದಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:36 am, Wed, 17 January 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us