AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

Commando Operation In Manipur: ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದೆ. ಮೇ 27-28ರ ಮಧ್ಯರಾತ್ರಿಯಲ್ಲಿ ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್
ಮಣಿಪುರ ಹಿಂಸಾಚಾರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 5:45 PM

Share

ನವದೆಹಲಿ: ಮಣಿಪುರದಲ್ಲಿ ಎಗ್ಗಿಲ್ಲದೇ ಮುಂದುವರಿಯುತ್ತಿರುವ ಹಿಂಸಾಚಾರಗಳನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಮೇ 28, ಇಂದು ಬೆಳಗ್ಗೆಯಿಂದ ಮಣಿಪುರದ ವಿವಿಧೆಡೆ ಕಮಾಂಡೋಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಲಫಲರಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ 40 ಉಗ್ರರು ಹತರಾಗಿದ್ದಾರೆ.

ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ ಪಡೆಗಳ ಸಹಾಯದಿಂದ ಈ ಉಗ್ರರ ಮೇಲೆ ಕಠಿಣ ಕ್ರಮ ಜರುಗಿಸುತ್ತಿದ್ದೇವೆ. 40 ಮಂದಿ ಉಗ್ರರನ್ನು ಸಂಹರಿಸಲಾಗಿರುವ ಬಗ್ಗೆ ನಮಗೆ ವರದಿಗಳು ಬಂದಿವೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿWrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ಮಣಿಪುರದ ಇಂಫಾಲ್ ಕಣಿವೆ ಪ್ರದೇಶದ ಸುತ್ತಲಿನ ಸೆಕ್ಮಾಯ್, ಸುಗ್ನು, ಕುಂಬಿ, ಫಯೆಂಗ್ ಮತ್ತು ಸೆರೌ ಈ ಐದು ಪ್ರದೇಶಗಳ ಮೇಲೆ ಬಂಡುಕೋರರು ರಾತ್ರಿ 2ರ ವೇಳೆಯಲ್ಲಿ ಏಕಕಾಲದಲ್ಲಿ ದಾಳಿ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈಗಲೂ ಕೂಡ ಇಲ್ಲಿ ಗುಂಡಿನ ಕಾಳಗ ಮುಂದುವರಿದಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಕೆಲವರ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಬಿಶೇನ್​ಪುರ್​ನ ಚಂದನ್​ಪೋಕಪಿ ಎಂಬಲ್ಲಿ 27 ವರ್ಷದ ರೈತರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

‘ಉಗ್ರಗಾಮಿಗಳು ನಿಶ್ಶಸ್ತ್ರಧಾರಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಮಣಿಪುರದ ಪತನಕ್ಕೆ ಪ್ರಯತ್ನಿಸುತ್ತಿರುವ ಸಶಸ್ತ್ರಧಾರಿ ಉಗ್ರರು ಹಾಗೂ ಕೇಂದ್ರದಿಂದ ಬೆಂಬಲಿತವಾದ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಯುದ್ಧ,’ ಎಂದು ಮಣಿಪುರ ಸಿಎಂ ಬಣ್ಣಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ