AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

Commando Operation In Manipur: ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದೆ. ಮೇ 27-28ರ ಮಧ್ಯರಾತ್ರಿಯಲ್ಲಿ ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್
ಮಣಿಪುರ ಹಿಂಸಾಚಾರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 5:45 PM

ನವದೆಹಲಿ: ಮಣಿಪುರದಲ್ಲಿ ಎಗ್ಗಿಲ್ಲದೇ ಮುಂದುವರಿಯುತ್ತಿರುವ ಹಿಂಸಾಚಾರಗಳನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಮೇ 28, ಇಂದು ಬೆಳಗ್ಗೆಯಿಂದ ಮಣಿಪುರದ ವಿವಿಧೆಡೆ ಕಮಾಂಡೋಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಲಫಲರಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ 40 ಉಗ್ರರು ಹತರಾಗಿದ್ದಾರೆ.

ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ ಪಡೆಗಳ ಸಹಾಯದಿಂದ ಈ ಉಗ್ರರ ಮೇಲೆ ಕಠಿಣ ಕ್ರಮ ಜರುಗಿಸುತ್ತಿದ್ದೇವೆ. 40 ಮಂದಿ ಉಗ್ರರನ್ನು ಸಂಹರಿಸಲಾಗಿರುವ ಬಗ್ಗೆ ನಮಗೆ ವರದಿಗಳು ಬಂದಿವೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿWrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ಮಣಿಪುರದ ಇಂಫಾಲ್ ಕಣಿವೆ ಪ್ರದೇಶದ ಸುತ್ತಲಿನ ಸೆಕ್ಮಾಯ್, ಸುಗ್ನು, ಕುಂಬಿ, ಫಯೆಂಗ್ ಮತ್ತು ಸೆರೌ ಈ ಐದು ಪ್ರದೇಶಗಳ ಮೇಲೆ ಬಂಡುಕೋರರು ರಾತ್ರಿ 2ರ ವೇಳೆಯಲ್ಲಿ ಏಕಕಾಲದಲ್ಲಿ ದಾಳಿ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈಗಲೂ ಕೂಡ ಇಲ್ಲಿ ಗುಂಡಿನ ಕಾಳಗ ಮುಂದುವರಿದಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಕೆಲವರ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಬಿಶೇನ್​ಪುರ್​ನ ಚಂದನ್​ಪೋಕಪಿ ಎಂಬಲ್ಲಿ 27 ವರ್ಷದ ರೈತರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

‘ಉಗ್ರಗಾಮಿಗಳು ನಿಶ್ಶಸ್ತ್ರಧಾರಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಮಣಿಪುರದ ಪತನಕ್ಕೆ ಪ್ರಯತ್ನಿಸುತ್ತಿರುವ ಸಶಸ್ತ್ರಧಾರಿ ಉಗ್ರರು ಹಾಗೂ ಕೇಂದ್ರದಿಂದ ಬೆಂಬಲಿತವಾದ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಯುದ್ಧ,’ ಎಂದು ಮಣಿಪುರ ಸಿಎಂ ಬಣ್ಣಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO