AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

Commando Operation In Manipur: ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿಯುತ್ತಿದೆ. ಮೇ 27-28ರ ಮಧ್ಯರಾತ್ರಿಯಲ್ಲಿ ಹಲವು ಪ್ರದೇಶಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ ಉಗ್ರರ ವಿರುದ್ಧ ಕಮಾಂಡೋಗಳು ಪ್ರತಿದಾಳಿ ನಡೆಸಿ 40 ಮಂದಿಯನ್ನು ಹತ್ಯೆಗೈದಿದ್ದಾರೆ.

Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್
ಮಣಿಪುರ ಹಿಂಸಾಚಾರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 5:45 PM

Share

ನವದೆಹಲಿ: ಮಣಿಪುರದಲ್ಲಿ ಎಗ್ಗಿಲ್ಲದೇ ಮುಂದುವರಿಯುತ್ತಿರುವ ಹಿಂಸಾಚಾರಗಳನ್ನು ನಿಗ್ರಹಿಸಲು ಅಲ್ಲಿನ ಪೊಲೀಸ್ ಪಡೆಯ ಕಮಾಂಡೋಗಳು ಉಗ್ರ ಕಾರ್ಯಾಚರಣೆ ನಡೆಸಿದ್ದಾರೆ. ಮೇ 28, ಇಂದು ಬೆಳಗ್ಗೆಯಿಂದ ಮಣಿಪುರದ ವಿವಿಧೆಡೆ ಕಮಾಂಡೋಗಳು ಸಾಕಷ್ಟು ದಂಗೆಕೋರರನ್ನು ಹತ್ಯೆಗೈಯುವಲ್ಲಿ ಸಲಫಲರಾಗಿದ್ದಾರೆ. ಅಲ್ಲಿನ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೀಡಿರುವ ಮಾಹಿತಿ ಪ್ರಕಾರ 40 ಉಗ್ರರು ಹತರಾಗಿದ್ದಾರೆ.

ಈ ಉಗ್ರರು ಎಂ-16 ಮತ್ತು ಎಕೆ-47 ರೈಫಲ್​ಗಳು ಮತ್ತು ಸ್ನೈಪರ್ ಗನ್​ಗಳನ್ನು ಜನಸಾಮಾನ್ಯರ ಮೇಲೆ ಉಪಯೋಗಿಸುತ್ತಿದ್ದಾರೆ. ಹಳ್ಳಿಗಳಿಗೆ ಹೋಗಿ ಮನೆಗಳನ್ನು ಸುಟ್ಟುಹಾಕುತ್ತಿದ್ದಾರೆ. ನಮ್ಮ ಸೇನೆ ಮತ್ತು ಭದ್ರತಾ ಪಡೆಗಳ ಸಹಾಯದಿಂದ ಈ ಉಗ್ರರ ಮೇಲೆ ಕಠಿಣ ಕ್ರಮ ಜರುಗಿಸುತ್ತಿದ್ದೇವೆ. 40 ಮಂದಿ ಉಗ್ರರನ್ನು ಸಂಹರಿಸಲಾಗಿರುವ ಬಗ್ಗೆ ನಮಗೆ ವರದಿಗಳು ಬಂದಿವೆ ಎಂದು ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿWrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

ಮಣಿಪುರದ ಇಂಫಾಲ್ ಕಣಿವೆ ಪ್ರದೇಶದ ಸುತ್ತಲಿನ ಸೆಕ್ಮಾಯ್, ಸುಗ್ನು, ಕುಂಬಿ, ಫಯೆಂಗ್ ಮತ್ತು ಸೆರೌ ಈ ಐದು ಪ್ರದೇಶಗಳ ಮೇಲೆ ಬಂಡುಕೋರರು ರಾತ್ರಿ 2ರ ವೇಳೆಯಲ್ಲಿ ಏಕಕಾಲದಲ್ಲಿ ದಾಳಿ ಆರಂಭಿಸಿದ್ದರು. ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ್ದಾರೆ. ಈಗಲೂ ಕೂಡ ಇಲ್ಲಿ ಗುಂಡಿನ ಕಾಳಗ ಮುಂದುವರಿದಿದೆ. ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಕೆಲವರ ಶವದ ಗುರುತು ಇನ್ನೂ ಪತ್ತೆಯಾಗಿಲ್ಲ. ಬಿಶೇನ್​ಪುರ್​ನ ಚಂದನ್​ಪೋಕಪಿ ಎಂಬಲ್ಲಿ 27 ವರ್ಷದ ರೈತರೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ.

‘ಉಗ್ರಗಾಮಿಗಳು ನಿಶ್ಶಸ್ತ್ರಧಾರಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಮಣಿಪುರದ ಪತನಕ್ಕೆ ಪ್ರಯತ್ನಿಸುತ್ತಿರುವ ಸಶಸ್ತ್ರಧಾರಿ ಉಗ್ರರು ಹಾಗೂ ಕೇಂದ್ರದಿಂದ ಬೆಂಬಲಿತವಾದ ರಾಜ್ಯ ಸರ್ಕಾರದ ಮಧ್ಯೆ ನಡೆಯುತ್ತಿರುವ ಯುದ್ಧ,’ ಎಂದು ಮಣಿಪುರ ಸಿಎಂ ಬಣ್ಣಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್