Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಮಣಿಪುರ ಹಿಂಸಾಚಾರ(Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿವೆ

Manipur Violence: ಮಣಿಪುರ ಹಿಂಸಾಚಾರ ವಿಚಾರ:  ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ಪ್ರತಿಪಕ್ಷಗಳು

Updated on: Jul 26, 2023 | 12:57 PM

ಮಣಿಪುರ ಹಿಂಸಾಚಾರ(Manipur Violence) ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿವೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಕುರಿತು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದಲೂ ಸಂಸತ್ತಿನ  ಉಭಯ ಸದನಗಳಲ್ಲಿ ನಿರಂತರವಾಗಿ ಗದ್ದಲ ನಡೆಯುತ್ತಲೇ ಇತ್ತು.

ಕೇವಲ ಇಂಡಿಯಾ ಒಕ್ಕೂಟ ಮಾತ್ರವಲ್ಲದೆ ಬಿಆರ್​ಎಸ್​ ಪಕ್ಷ ಕೂಡ ಪ್ರತ್ಯೇಕ ಅವಿಶ್ವಾಸ ನಿರ್ಣಯ ಸಲ್ಲಿಸಿದೆ. ಪ್ರಧಾನಿ ಮೋದಿಯವರು ಈ ಕುರಿತು ಮೌನ ಮುರಿಯಬೇಕು ಆಗ ಮಾತ್ರ ದೇಶದ ಜನರಲ್ಲಿ ಶಾಂತಿ ನೆಲೆಸುತ್ತದೆ ಆದ್ದರಿಂದ ಈ ಪ್ರಯತ್ನ ಮಾಡುತ್ತಿದ್ದೇವೆ ಎಂದು ಬಿಆರ್​ಎಸ್ ಸಂಸದ ನಾಮ ನಾಗೇಶ್ವರ ತಿಳಿಸಿದ್ದಾರೆ.

ಅಧಿವೇಶನ ಆರಂಭವಾದಾಗಿನಿಂದ ಎಲ್ಲಾ ಪ್ರತಿಪಕ್ಷಗಳ ನಾಯಕರು ಮಣಿಪುರ ವಿಷಯದ ಬಗ್ಗೆಯೇ ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆಯಲ್ಲಿ 543 ಸದಸ್ಯರಿದ್ದು, ಆಡಳಿತಾರೂಢ ಎನ್‍ಡಿಎ ಪ್ರಸ್ತುತ 331 ಬಲವನ್ನು ಹೊಂದಿದೆ. ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಸದನದಲ್ಲಿ 144 ಸದಸ್ಯ ಬಲ ಹೊಂದಿದೆ.

ವಿರೋಧ ಪಕ್ಷಗಳು ನೆಲ ಪರೀಕ್ಷೆಯಲ್ಲಿ ಗೆಲ್ಲುವ ಸಂಖ್ಯಾಬಲವನ್ನು ಹೊಂದಿಲ್ಲದಿದ್ದರೂ, ಚರ್ಚೆಯ ಸಮಯದಲ್ಲಿ ಮಣಿಪುರ ವಿಷಯದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಹೇಳಿಕೆ ಪಡೆದುಕೊಳ್ಳುವ ಮೂಲಕ ಸರ್ಕಾರಕ್ಕೆ ಮುಜುಗರ ಉಂಟು ಮಾಡುವ ಉದ್ದೇಶದಿಂದ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದೆ.

ಮತ್ತಷ್ಟು ಓದಿ: No-Confidence Motion: ಇಂದು ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಪ್ರತಿಪಕ್ಷಗಳ ನಿರ್ಧಾರ

ಸಂಸತ್ತಿನ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಎರಡೂ ಸದನಗಳನ್ನು ಮುಂದೂಡುವಂತೆ ಒತ್ತಾಯಿಸಿ ವಿರೋಧ ಪಕ್ಷದ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಭಟನೆ ಮತ್ತು ಘೋಷಣೆಗಳನ್ನು ನಡೆಸುತ್ತಿದ್ದಾರೆ.

ಮಣಿಪುರದ ಪರಿಸ್ಥಿತಿ ಕುರಿತು ಕೇಂದ್ರ ಸಚಿವ ಅಮಿತ್ ಶಾ ಉತ್ತರ ನೀಡುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದ್ದರೂ, ರ್ಣಾಯಕ ವಿಷಯದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಮಾತನಾಡುವಂತೆ ಮಾಡುವುದು ಒಂದು ತಂತ್ರವಾಗಿದೆ ಎಂದು ಅವರು ವಾದಿಸುತ್ತಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:54 pm, Wed, 26 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us