AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಪೊಲೀಸರು ಸೇರಿ 5 ಮಂದಿ ಸಾವು, 12 ಮಂದಿಗೆ ಗಾಯ

ಮಣಿಪುರ(Manipur)ದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್​ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ.

Manipur Violence: ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಪೊಲೀಸರು ಸೇರಿ 5 ಮಂದಿ ಸಾವು, 12 ಮಂದಿಗೆ ಗಾಯ
ಮಣಿಪುರ ಹಿಂಸಾಚಾರImage Credit source: The Indian Express
ನಯನಾ ರಾಜೀವ್
|

Updated on: May 29, 2023 | 8:35 AM

Share

ಮಣಿಪುರ(Manipur)ದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್​ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಇದು ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಾಂತ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶನಿವಾರ ಮಣಿಪುರಕ್ಕೆ ತೆರಳಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದರು.

ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸರ್ಕಾರವು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಿದೆ. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಮಂದಿ ಬಂಡುಕೋರರನ್ನು ಹತ್ಯೆಮಾಡಲಾಗಿದೆ.

ಮತ್ತಷ್ಟು ಓದಿ: Manipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ಗಳು ಮತ್ತು ಸ್ನೈಪರ್ ಗನ್‌ಗಳನ್ನು ಬಳಸುತ್ತಿದ್ದಾರೆ. ಜನರ ಮನೆಗಳನ್ನು ಸುಟ್ಟುಹಾಕಲು ಹಳ್ಳಿಗಳಿಗೆ ನುಗ್ಗಿದ್ದರು. ನಾವು ಸೇನೆ ಮತ್ತು ಇತರ ಭದ್ರತಾ ಪಡೆಗಳ ಸಹಾಯದಿಂದ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ. ಸುಮಾರು 40 ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿರುವ ವರದಿಗಳು ನಮಗೆ ಸಿಕ್ಕಿವೆ” ಎಂದು ತಿಳಿಸಿದರು.

ಈ ಬೆಳವಣಿಗೆಯು ರಾಜ್ಯದಲ್ಲಿ ಮೈತಿ ಸಮುದಾಯ ಮತ್ತು ಗುಡ್ಡಗಾಡು ಬುಡಕಟ್ಟುಗಳ ನಡುವಿನ ಹಳೆಯ ಜನಾಂಗೀಯ ದ್ವೇಷವನ್ನು ಮತ್ತೆ ಕೆಣಕಿದಂತಾಗಿದೆ. ಹೆಚ್ಚಿನ ರಕ್ಷಣೆಗಾಗಿ ತಮ್ಮನ್ನು ಎಸ್​ಟಿ ಪಟ್ಟಿಗೆ ಸೇರಿಸಬೇಕೆಂದು ಮೈತಿಗಳು ಬಹುಕಾಲದಿಂದ ಬೇಡಿಕೆಯಿಟ್ಟಿದ್ದರೆ, ರಾಜ್ಯದ ಬುಡಕಟ್ಟು ಜನಾಂಗದವರು, ವಿಶೇಷವಾಗಿ ನಾಗಾಗಳು ಮತ್ತು ಕುಕಿಗಳು – ಇದನ್ನು ಬಲವಾಗಿ ವಿರೋಧಿಸಿದ್ದಾರೆ. ಮೈತಿಗಳನ್ನು ಎಸ್​ಟಿ ಪಟ್ಟಿಗೆ ಸೇರಿಸಿದರೆ ಇದು ನಮ್ಮ ಭೂಮಿಯನ್ನು ಕಸಿದುಕೊಳ್ಳುತ್ತದೆ ಎಂದು ಬುಡಕಟ್ಟು ಜನಾಂಗದವರು ಹೇಳುತ್ತಾರೆ.

ಹಿಂಸಾಚಾರಕ್ಕೆ ತಕ್ಷಣದ ಪ್ರಚೋದನೆಯು ರಾಜ್ಯದ ಮೈತಿ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದನ್ನು ಪ್ರತಿಭಟಿಸಿ ನಡೆಸಿದ ಬುಡಕಟ್ಟು ಜನಾಂಗದ ಮೆರವಣಿಗೆಯಿಂದ ಹುಟ್ಟಿಕೊಂಡಿದೆಯಾದರೂ, ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕುಕಿ ಬುಡಕಟ್ಟು ಗುಂಪುಗಳು ಈ ಮೊದಲೇ ಅಸಮಾಧಾನ ಹೊಂದಿದ್ದವರು.

ಪೂರ್ವಜರ ಅರಣ್ಯ ಭೂಮಿ, ಚರ್ಚ್ ಧ್ವಂಸಗಳು, ಕುಕಿ ಬುಡಕಟ್ಟು ಜನರಲ್ಲಿ ನೆರೆಯ ಮ್ಯಾನ್ಮಾರ್‌ನ ಅಕ್ರಮ ವಲಸಿಗರು ಸೇರಿದ್ದಾರೆ ಎಂದು ಸರ್ಕಾರ ನಡೆಸಿದ ತೆರವು ಕಾರ್ಯಾಚರಣೆಗಳ ಬಗ್ಗೆ ಅತೃಪ್ತಿ ಹೊಂದಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು