AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಹಿಂಸಾಚಾರ: ಪೊಲೀಸ್ ತನಿಖೆಯ ಮೇಲ್ವಿಚಾರಣೆಗೆ ಮಹಾರಾಷ್ಟ್ರದ ಮಾಜಿ ಡಿಜಿಪಿಯನ್ನು ನೇಮಕ ಮಾಡಿದ ಸುಪ್ರೀಂಕೋರ್ಟ್

ಕಳೆದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ನಿಂದ ಸಮನ್ಸ್ ಪಡೆದಿದ್ದ ರಾಜ್ಯ ಡಿಜಿಪಿ ರಾಜೀವ್ ಸಿಂಗ್, ಜನಾಂಗೀಯ ಹಿಂಸಾಚಾರದ ಬಗ್ಗೆ  ಆಡಳಿತವು ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಏತನ್ಮಧ್ಯೆ ಪರಿಣಾಮಕಾರಿ ತನಿಖೆಯ ಉದ್ದೇಶಗಳಿಂದ ಪ್ರಕರಣಗಳನ್ನು ಪ್ರತ್ಯೇಕಿಸಲಾಗಿದೆ.

ಮಣಿಪುರ ಹಿಂಸಾಚಾರ: ಪೊಲೀಸ್ ತನಿಖೆಯ ಮೇಲ್ವಿಚಾರಣೆಗೆ ಮಹಾರಾಷ್ಟ್ರದ ಮಾಜಿ ಡಿಜಿಪಿಯನ್ನು ನೇಮಕ ಮಾಡಿದ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on:Aug 07, 2023 | 7:13 PM

Share

ದೆಹಲಿ ಆಗಸ್ಟ್ 07: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರಕ್ಕೆ (Manipur Violence) ಸಂಬಂಧಿಸಿದ ಪ್ರಕರಣಗಳ ಪೊಲೀಸ್ ತನಿಖೆಯ ಮೇಲ್ವಿಚಾರಣೆಗೆ ಮಹಾರಾಷ್ಟ್ರದ ಮಾಜಿ ಡಿಜಿಪಿ ದತ್ತಾತ್ರೇ ಪಡಸಾಲ್ಗಿಕರ್ (Dattatrey Padsalgikar) ಅವರನ್ನು ಸುಪ್ರೀಂಕೋರ್ಟ್ (Supreme Court) ಸೋಮವಾರ ನೇಮಕ ಮಾಡಿದೆ. ಕಾನೂನಿನಲ್ಲಿ ವಿಶ್ವಾಸ ಮತ್ತು ನಂಬಿಕೆಯನ್ನು ಪುನಃಸ್ಥಾಪಿಸುವುದು ನಮ್ಮ ಪ್ರಯತ್ನವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಪರೇಡ್ ಮಾಡುವುದು ಸೇರಿದಂತೆ 11 ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆಗಾಗಿ ಸಿಬಿಐ ತನಿಖಾ ತಂಡಕ್ಕೆ ವಿವಿಧ ರಾಜ್ಯಗಳ ಐದು ಅಥವಾ ಆರು ಡೆಪ್ಯುಟಿ ಎಸ್ಪಿ ಶ್ರೇಣಿಯ ಅಧಿಕಾರಿಗಳನ್ನು ಸೇರಿಸಲು ಕರಡು ಸಿದ್ಧಪಡಿಸಲು ನ್ಯಾಯಾಲಯ ಹೇಳಿದೆ.

ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠವು ಪರಿಹಾರ, ಪುನರ್ವಸತಿ, ಮನೆ ಮತ್ತು ಪೂಜಾ ಸ್ಥಳಗಳ ಮರುನಿರ್ಮಾಣಕ್ಕಾಗಿ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ಸಮಿತಿಯನ್ನು ರಚಿಸುವುದಾಗಿ ಹೇಳಿದೆ. ಪ್ರಸ್ತಾವಿತ ತ್ರಿಸದಸ್ಯ ಸಮಿತಿಯು ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್​​ನ ಮಾಜಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರ ನೇತೃತ್ವದಲ್ಲಿರುತ್ತದೆ. ಮಾಜಿ ನ್ಯಾಯಾಧೀಶರಾದ ಶಾಲಿನಿ ಪಿ ಜೋಶಿ ಮತ್ತು ಆಶಾ ಮೆನನ್ ಈ ಸಮಿತಿಯಲ್ಲಿರಲಿದ್ದಾರೆ.

ಕಳೆದ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂಕೋರ್ಟ್‌ನಿಂದ ಸಮನ್ಸ್ ಪಡೆದಿದ್ದ ರಾಜ್ಯ ಡಿಜಿಪಿ ರಾಜೀವ್ ಸಿಂಗ್, ಜನಾಂಗೀಯ ಹಿಂಸಾಚಾರದ ಬಗ್ಗೆ  ಆಡಳಿತವು ಇಲ್ಲಿಯವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಏತನ್ಮಧ್ಯೆ ಪರಿಣಾಮಕಾರಿ ತನಿಖೆಯ ಉದ್ದೇಶಗಳಿಂದ ಪ್ರಕರಣಗಳನ್ನು ಪ್ರತ್ಯೇಕಿಸಲಾಗಿದೆ.

ಈ ಹಿಂದೆ ಮಣಿಪುರ ಸರ್ಕಾರವು ಹಿಂಸಾಚಾರ ಪ್ರಕರಣಗಳ ತನಿಖೆಗಾಗಿ 6 ಜಿಲ್ಲೆಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ 6 ಪ್ರತ್ಯೇಕ ಎಸ್‌ಐಟಿಗಳನ್ನು ರಚಿಸುವುದಾಗಿಯೂ ಮಹಿಳೆಯರ ಮೇಲಿನ ಅಪರಾಧಗಳಿಗಾಗಿ ಮಹಿಳಾ ಪೊಲೀಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸುವುದಾಗಿ ಸುಪ್ರೀಂಕೋರ್ಟ್‌ಗೆ ತಿಳಿಸಿತ್ತು.

ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಮತ್ತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಎಸ್​​ಪಿ ನೇತೃತ್ವದ ಎಸ್‌ಐಟಿಗಳು ಜನಾಂಗೀಯ ಘರ್ಷಣೆಗಳು,ಅಪರಾಧಗಳ ಬಗ್ಗೆ ಪರಿಶೀಲಿಸುತ್ತಾರೆ. ಈ ಬಗ್ಗೆ ರಾಜ್ಯ ಡಿಜಿಪಿ ಮತ್ತು ಡಿಐಜಿ ಈ ತನಿಖೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ. ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ವಿವರಗಳನ್ನು ನೀಡಿದ ಅವರು ರಾಜ್ಯದಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿದೆ. ಯಾವುದೇ ಬಾಹ್ಯ ನಿರ್ದೇಶನದ ತನಿಖೆಯು ಆತ್ಮವಿಶ್ವಾಸವನ್ನು ಉಂಟುಮಾಡುವುದಿಲ್ಲ ಎಂದು ಹೇಳಿದ್ದಾರೆ.

ಆಗಸ್ಟ್ 1 ರಂದು ಸುಪ್ರೀಂಕೋರ್ಟ್ ಮಣಿಪುರ ಪೊಲೀಸರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಜನಾಂಗೀಯ ಹಿಂಸಾಚಾರದ ಘಟನೆಗಳ, ವಿಶೇಷವಾಗಿ ಮಹಿಳೆಯರನ್ನು ಗುರಿಯಾಗಿಸುವ ಘಟನೆಗಳ ಬಗ್ಗೆ ತಡವಾದ ತನಿಖೆಗಾಗಿ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಆಗಸ್ಟ್ 7 ರಂದು ತನ್ನ ಪ್ರಶ್ನೆಗಳಿಗೆ ಉತ್ತರಿಸಲು ಡಿಜಿಪಿಗೆ ಸಮನ್ಸ್ ನೀಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:39 pm, Mon, 7 August 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ