AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur violence: ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಜನರಿಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಭಾರತದ ಸುಪ್ರೀಂಕೋರ್ಟ್‌ ಆಗಿರುವ ನಾವು ರಾಜಕೀಯ ಕಾರ್ಯಕಾರಿಣಿ ಈ ಪರಿಸ್ಥಿತಿಯನ್ನು ಕಡೆಗಣಿಸದಂತೆ ನೋಡಿಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠ ಹೇಳಿದೆ.

Manipur violence: ಮಣಿಪುರದಲ್ಲಿ ಹಿಂಸಾಚಾರ ಪೀಡಿತ ಜನರಿಗೆ ಕೈಗೊಂಡಿರುವ ಭದ್ರತಾ ಕ್ರಮಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಮಣಿಪುರ ಹಿಂಸಾಚಾರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: May 17, 2023 | 1:34 PM

Share

ದೆಹಲಿ:ಮಣಿಪುರದ (Manipur) ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಕಡೆಗಣಿಸಬಾರದು ಸುಪ್ರೀಂಕೋರ್ಟ್ (Supreme Court) ಬುಧವಾರ ಹೇಳಿದೆ. ಅದೇ ವೇಳೆ ಹಿಂಸಾಚಾರ ಪೀಡಿತ ಜನರ ಭದ್ರತೆ ,ಪರಿಹಾರ ಮತ್ತು ಪುನರ್ವಸತಿಗಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಹೊಸ ಸ್ಥಿತಿ ವರದಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠವು ಮಣಿಪುರ ಹೈಕೋರ್ಟ್ ತೀರ್ಪಿನಿಂದ ಉಂಟಾಗುವ ಕಾನೂನು ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ಹೇಳಿದೆ, ಏಕೆಂದರೆ ಈ ಆದೇಶವನ್ನು ಪ್ರಶ್ನಿಸುವ ಅರ್ಜಿಗಳು ಅಲ್ಲಿನ ದೊಡ್ಡ ವಿಭಾಗೀಯ ಪೀಠದಲ್ಲಿ ಬಾಕಿ ಉಳಿದಿವೆ. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿದೆ. ಭಾರತದ ಸುಪ್ರೀಂಕೋರ್ಟ್‌ ಆಗಿರುವ ನಾವು ರಾಜಕೀಯ ಕಾರ್ಯಕಾರಿಣಿ ಈ ಪರಿಸ್ಥಿತಿಯನ್ನು ಕಡೆಗಣಿಸದಂತೆ ನೋಡಿಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಮತ್ತು ಜೆ ಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠ ಹೇಳಿದೆ.

ಏತನ್ಮಧ್ಯೆ, ಸುಪ್ರೀಂಕೋರ್ಟ್ ವಿಚಾರಣೆಯನ್ನು ಜುಲೈ ಮೊದಲ ವಾರಕ್ಕೆ ಮುಂದೂಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಹಿಂದೆ ಸುಪ್ರೀಂಕೋರ್ಟ್‌ಗೆ ಸ್ಥಿತಿ ವರದಿ ಸಲ್ಲಿಸಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ತಿಳಿಸಿತ್ತು. ರಾಜ್ಯದ ಗಡಿಯಲ್ಲಿ ಕೆಲವು ಸಮಸ್ಯೆಗಳಿದ್ದು, ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವುದು ಮುಖ್ಯವಾಗಿದೆ.

ಮಣಿಪುರ ಹಿಂಸಾಚಾರದ ವಿಚಾರಣೆಯ ಸಂದರ್ಭದಲ್ಲಿ, ಸಿಜೆಐ ಡಿವೈ ಚಂದ್ರಚೂಡ್ ಅವರು ಮಣಿಪುರ ಹೈಕೋರ್ಟ್‌ನ ಆದೇಶಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಬೇಕಾಗುತ್ತದೆ ಎಂದು ಹೇಳಿದರು. ಅಲ್ಲಿ ಮಣಿಪುರ ಸರ್ಕಾರವು ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಪರಿಗಣಿಸುವಂತೆ ಮಣಿಪುರ ಸರ್ಕಾರಕ್ಕೆ ಸೂಚಿಸಿದೆ.

ಕೇಂದ್ರದ ಪರವಾಗಿ ವಾದ ಮಾಡಿದ ಸಾಲಿಸಿಟರ್ ಜನರಲ್, ನೆಲದ ಮೇಲಿನ ಸ್ಥಾನವನ್ನು ಪರಿಗಣಿಸಿ, ಸರ್ಕಾರವು ತಡೆ ಬೇಡಲು ಮತ್ತು ವಿಸ್ತರಣೆಯನ್ನು ಮಾತ್ರ ಬಯಸಲು ನಿರ್ಧರಿಸಿದೆ, ಏಕೆಂದರೆ ಇದು ನೆಲದ ಪರಿಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ರಾಜ್ಯದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಉದ್ದೇಶವಿದೆ ಎಂದು ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದರು. ಜಿಲ್ಲಾ ಪೊಲೀಸ್ ಮತ್ತು ಸಿಎಪಿಎಫ್‌ನಿಂದ ಒಟ್ಟು 315 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ. ಪರಿಹಾರ ಕ್ರಮಗಳಿಗಾಗಿ ರಾಜ್ಯ ಸರ್ಕಾರ 3 ಕೋಟಿ ರೂಪಾಯಿಗಳ ಆಕಸ್ಮಿಕ ನಿಧಿಯನ್ನು ಮಂಜೂರು ಮಾಡಿದೆ. ಇಲ್ಲಿಯವರೆಗೆ ಸುಮಾರು 46,000 ಜನರು ಸಹಾಯವನ್ನು ಪಡೆದಿದ್ದಾರೆ ಎಂದು ಎಸ್‌ಜಿ ಮೆಹ್ತಾ ಹೇಳಿದ್ದಾರೆ.

ಇದನ್ನೂ ಓದಿ: Video Viral: ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿದ ವ್ಯಕ್ತಿಯ ಪತ್ತೆಗೆ ಪ್ರಯಾಣಿಕರ ಸಹಾಯ ಕೇಳಿದ ಪೊಲೀಸರು

ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರದಲ್ಲಿ ವ್ಯಾಪಕ ಹಿಂಸಾಚಾರದ ಕಾರಣಗಳನ್ನು ಪತ್ತೆಹಚ್ಚಲು ಮತ್ತು ಅದರ ವ್ಯಾಪ್ತಿಯನ್ನು ಮೌಲ್ಯಮಾಪನ ಮಾಡಲು ಮೂವರು ಸದಸ್ಯರ ಸತ್ಯಶೋಧನಾ ತಂಡವನ್ನು ರಚಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದ ಪರಿಸ್ಥಿತಿಯ ಬಗ್ಗೆ ಕಳವಳದ ನಡುವೆ, ರಾಜ್ಯದಲ್ಲಿನ ನೆಲದ ವಾಸ್ತವತೆಯನ್ನು ತಿಳಿಯಲು ವೀಕ್ಷಕರನ್ನು ಕಳುಹಿಸಲು ಕಾಂಗ್ರೆಸ್ ನಿರ್ಧರಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ