AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಫಾಲ್​ನಲ್ಲಿ ಮೈತಿ ಮುಖ್ಯಸ್ಥರಿದ್ದ ವಾಹನದ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಇಂಫಾಲ್​ನ ಲಾಂಗೋಲ್ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಮಣಿಪುರದ ಮೈತಿ ಮುಖ್ಯಸ್ಥರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಆರು ಗುಂಡುಗಳನ್ನು ವಾಹನದ ಮೇಲೆ ಹಾರಿಸಲಾಗಿದೆ, ಮೂಲಗಳ ಪ್ರಕಾರ ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಆಸ್ಪತ್ರೆಯೊಂದರ ಬಳಿ ಪ್ರಮೋತ್ ಸಿಂಗ್ ಅವರಿದ್ದ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಇಂಫಾಲ್​ನಲ್ಲಿ ಮೈತಿ ಮುಖ್ಯಸ್ಥರಿದ್ದ ವಾಹನದ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಪ್ರಮೋತ್​ ಸಿಂಗ್Image Credit source: Frontline. The Hindu
Follow us
ನಯನಾ ರಾಜೀವ್
|

Updated on: Nov 03, 2023 | 12:40 PM

ಇಂಫಾಲ್​ನ ಲಾಂಗೋಲ್ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಮಣಿಪುರದ ಮೈತಿ(Meitei )ಮುಖ್ಯಸ್ಥರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಆರು ಗುಂಡುಗಳನ್ನು ವಾಹನದ ಮೇಲೆ ಹಾರಿಸಲಾಗಿದೆ, ಮೂಲಗಳ ಪ್ರಕಾರ ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಆಸ್ಪತ್ರೆಯೊಂದರ ಬಳಿ ಪ್ರಮೋತ್ ಸಿಂಗ್ ಅವರಿದ್ದ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ನನಗೆ ಯಾವುದೇ ಹಾನಿಯಾಗಿಲ್ಲ ನಾನು ಆರೋಗ್ಯವಾಗಿದ್ದೇನೆ, ಸಿಂಗ್ ಇದ್ದ ಕಾರಿನ ಚಾಲಕ ಇನ್ನೇನು ಕಾರನ್ನು ನಿಲ್ಲಿಸಬೇಕೆನ್ನುವಷ್ಟರಲ್ಲಿ ಗುಂಡಿನ ದಾಳಿ ನಡೆದಿದೆ. ಪ್ರಮೋತ್​ ಸಿಂಗ್ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಹೆಚ್ಚಿಸುವ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಮೇ3 ರಿಂದ ಮೈತಿ ಹಾಗೂ ಬುಡಕಟ್ಟು ಸಮುದಾಯ ಕುಕಿ ನಡುವೆ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ ಕನಿಷ್ಠ 175 ಮಂದಿ ಮೃತಪಟ್ಟಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಕುಕಿ ಗುಂಪುಗಳು ಮಣಿಪುರದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿವೆ ಎಂದು ಮೈತಿ ಸಮುದಾಯ ಆರೋಪಿಸಿದೆ.

ಮತ್ತಷ್ಟು ಓದಿ: ಮಣಿಪುರ: ಇಬ್ಬರು ಮೈತಿ ವಿದ್ಯಾರ್ಥಿಗಳನ್ನು ಅಪಹರಿಸಿ, ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿ ಬಂಧನ

ಜೂನ್ 7 ರಂದು ದಿ ವೈರ್‌ನ ಪತ್ರಕರ್ತರೊಂದಿಗಿನ ಸಂದರ್ಶನದ ನಂತರ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂದರ್ಶನದಲ್ಲಿ ಅವರು ಕುಕಿಗಳನ್ನು ಹೊರಗಿನವರು ಮತ್ತು ಮಣಿಪುರದ ಸ್ಥಳೀಯರಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ