AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಫಾಲ್​ನಲ್ಲಿ ಮೈತಿ ಮುಖ್ಯಸ್ಥರಿದ್ದ ವಾಹನದ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಇಂಫಾಲ್​ನ ಲಾಂಗೋಲ್ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಮಣಿಪುರದ ಮೈತಿ ಮುಖ್ಯಸ್ಥರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಆರು ಗುಂಡುಗಳನ್ನು ವಾಹನದ ಮೇಲೆ ಹಾರಿಸಲಾಗಿದೆ, ಮೂಲಗಳ ಪ್ರಕಾರ ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಆಸ್ಪತ್ರೆಯೊಂದರ ಬಳಿ ಪ್ರಮೋತ್ ಸಿಂಗ್ ಅವರಿದ್ದ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಇಂಫಾಲ್​ನಲ್ಲಿ ಮೈತಿ ಮುಖ್ಯಸ್ಥರಿದ್ದ ವಾಹನದ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಪ್ರಮೋತ್​ ಸಿಂಗ್Image Credit source: Frontline. The Hindu
ನಯನಾ ರಾಜೀವ್
|

Updated on: Nov 03, 2023 | 12:40 PM

Share

ಇಂಫಾಲ್​ನ ಲಾಂಗೋಲ್ ಪ್ರದೇಶದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ಮಣಿಪುರದ ಮೈತಿ(Meitei )ಮುಖ್ಯಸ್ಥರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಆರು ಗುಂಡುಗಳನ್ನು ವಾಹನದ ಮೇಲೆ ಹಾರಿಸಲಾಗಿದೆ, ಮೂಲಗಳ ಪ್ರಕಾರ ಶುಕ್ರವಾರ ಬೆಳಗ್ಗೆ 7.10ರ ಸುಮಾರಿಗೆ ಆಸ್ಪತ್ರೆಯೊಂದರ ಬಳಿ ಪ್ರಮೋತ್ ಸಿಂಗ್ ಅವರಿದ್ದ ವಾಹನವನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ.

ಸಿಂಗ್ ಈ ಕುರಿತು ಮಾಹಿತಿ ನೀಡಿದ್ದು, ನನಗೆ ಯಾವುದೇ ಹಾನಿಯಾಗಿಲ್ಲ ನಾನು ಆರೋಗ್ಯವಾಗಿದ್ದೇನೆ, ಸಿಂಗ್ ಇದ್ದ ಕಾರಿನ ಚಾಲಕ ಇನ್ನೇನು ಕಾರನ್ನು ನಿಲ್ಲಿಸಬೇಕೆನ್ನುವಷ್ಟರಲ್ಲಿ ಗುಂಡಿನ ದಾಳಿ ನಡೆದಿದೆ. ಪ್ರಮೋತ್​ ಸಿಂಗ್ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಹೆಚ್ಚಿಸುವ ಪಿತೂರಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು.

ಮೇ3 ರಿಂದ ಮೈತಿ ಹಾಗೂ ಬುಡಕಟ್ಟು ಸಮುದಾಯ ಕುಕಿ ನಡುವೆ ಹಿಂಸಾಚಾರ ನಡೆಯುತ್ತಿದೆ. ಈ ಹಿಂಸಾಚಾರದಲ್ಲಿ ಕನಿಷ್ಠ 175 ಮಂದಿ ಮೃತಪಟ್ಟಿದ್ದಾರೆ. 50 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರಿಸಲಾಗಿದೆ. ಕುಕಿ ಗುಂಪುಗಳು ಮಣಿಪುರದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿವೆ ಎಂದು ಮೈತಿ ಸಮುದಾಯ ಆರೋಪಿಸಿದೆ.

ಮತ್ತಷ್ಟು ಓದಿ: ಮಣಿಪುರ: ಇಬ್ಬರು ಮೈತಿ ವಿದ್ಯಾರ್ಥಿಗಳನ್ನು ಅಪಹರಿಸಿ, ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿ ಬಂಧನ

ಜೂನ್ 7 ರಂದು ದಿ ವೈರ್‌ನ ಪತ್ರಕರ್ತರೊಂದಿಗಿನ ಸಂದರ್ಶನದ ನಂತರ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂದರ್ಶನದಲ್ಲಿ ಅವರು ಕುಕಿಗಳನ್ನು ಹೊರಗಿನವರು ಮತ್ತು ಮಣಿಪುರದ ಸ್ಥಳೀಯರಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ