AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur violence: ಬೇಟಿ ಬಚಾವೋ ಈಗ ‘ಬೇಟಿ ಜಲಾವೋ’ ಆಗಿದೆ; ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ

ಎಂಜಿಎನ್‌ಆರ್‌ಇಜಿಎ ಮತ್ತು ಇತರ ಯೋಜನೆಗಳ ಅಡಿಯಲ್ಲಿ ಬಂಗಾಳದ ಹಣವನ್ನು ತಡೆಯುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಗಾಂಧಿ ಜಯಂತಿಯಂದು (ಅಕ್ಟೋಬರ್ 2) ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ನಡೆಸಲಿದೆ ಎಂದು ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

Manipur violence: ಬೇಟಿ ಬಚಾವೋ ಈಗ ‘ಬೇಟಿ ಜಲಾವೋ’ ಆಗಿದೆ; ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ
ಮಮತಾ ಬ್ಯಾನರ್ಜಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jul 21, 2023 | 4:11 PM

Share

ಇಂಫಾಲ್ ಜುಲೈ 21: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ (Manipur Violence), ಬಿಲ್ಕಿಸ್ ಬಾನೋ ಪ್ರಕರಣ ಮತ್ತು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣಗಳ ಬಗ್ಗೆ ಶುಕ್ರವಾರ ಬಿಜೆಪಿಯನ್ನು (BJP) ಟೀಕಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) , ಬಿಜೆಪಿಯ ‘ಬೇಟಿ ಬಚಾವೋ’ ಘೋಷಣೆ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ ಎಂದು ಹೇಳಿದ್ದಾರೆ.“ನೀವು (ಬಿಜೆಪಿ) ‘ಬೇಟಿ ಬಚಾವೋ’ ಘೋಷಣೆಯನ್ನು ನೀಡಿದ್ದೀರಿ, ಈಗ ನಿಮ್ಮ ಘೋಷಣೆ ಎಲ್ಲಿದೆ? ಮಣಿಪುರದ ಜನರೊಂದಿಗೆ ನಾವು ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸುತ್ತೇವೆ. ಇಂದು ಮಣಿಪುರ ಹೊತ್ತಿ ಉರಿಯುತ್ತಿದೆ, ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ (ಬ್ರಿಜ್ ಭೂಷಣ್ ಸಿಂಗ್)ಗೂ ಜಾಮೀನು ಮಂಜೂರಾಗಿದೆ. ಮುಂಬರುವ ಚುನಾವಣೆಯಲ್ಲಿ ದೇಶದ ಮಹಿಳೆಯರು ನಿಮ್ಮನ್ನು ದೇಶದ ರಾಜಕೀಯದಿಂದ ಹೊರಹಾಕಲಿದ್ದಾರೆ.ಬಿಜೆಪಿಯ ‘ಬೇಟಿ ಬಚಾವೋ’ ಈಗ ‘ಬೇಟಿ ಜಲಾವೋ’ ಆಗಿ ಬದಲಾಗಿದೆ.

ತೃಣಮೂಲ ಕಾಂಗ್ರೆಸ್‌ಗೆ ಯಾವುದೇ ಕುರ್ಚಿ ಬೇಕಾಗಿಲ್ಲ, ಆದರೆ ಈ ಬಿಜೆಪಿ ಆಡಳಿತ ಹೋಗಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ ಮಮತಾ. ನಾವು ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಮೈತ್ರಿ I.N.D.I.A. ಬ್ಯಾನರ್ ಅಡಿಯಲ್ಲಿ ಎಲ್ಲಾ ಪ್ರತಿಭಟನೆಗಳನ್ನು ಆಯೋಜಿಸುತ್ತೇವೆ ಎಂದು ಬಂಗಾಳ ಮುಖ್ಯಮಂತ್ರಿ ಸಭೆಗೆ ತಿಳಿಸಿದರು.

ಅಕ್ಟೋಬರ್ 2 ರಂದು ದೆಹಲಿಯಲ್ಲಿ ಟಿಎಂಸಿ ಪ್ರತಿಭಟನೆ: ಅಭಿಷೇಕ್ ಬ್ಯಾನರ್ಜಿ

ಎಂಜಿಎನ್‌ಆರ್‌ಇಜಿಎ ಮತ್ತು ಇತರ ಯೋಜನೆಗಳ ಅಡಿಯಲ್ಲಿ ಬಂಗಾಳದ ಹಣವನ್ನು ತಡೆಯುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಗಾಂಧಿ ಜಯಂತಿಯಂದು (ಅಕ್ಟೋಬರ್ 2) ದೆಹಲಿಯಲ್ಲಿ ತೃಣಮೂಲ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ನಡೆಸಲಿದೆ ಎಂದು  ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಬಿಜೆಪಿಯನ್ನು ಕಿತ್ತೊಗೆಯಲಾಗುವುದು. ಹೊಸದಾಗಿ ರೂಪುಗೊಂಡ ವಿರೋಧ ಪಕ್ಷದ ಮೈತ್ರಿ I.N.D.I.A – 2024 ರಲ್ಲಿ ಮುಂದಿನ ಸರ್ಕಾರವನ್ನು ರಚಿಸಲಿದೆ ಎಂಬ ಘೋಷಣೆಯೊಂದಿಗೆ ಇಡೀ ದೇಶವು ಪ್ರತಿಧ್ವನಿಸುತ್ತಿದೆ ಎಂದು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬ್ಯಾನರ್ಜಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಸೇಡಿನ ರಾಜಕೀಯದಿಂದಾಗಿ ಬಂಗಾಳಕ್ಕೆ ಹಣವನ್ನು ನಿಲ್ಲಿಸಿದೆ. ನಾನು ಮೊದಲೇ ಹೇಳಿದಂತೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಎಂಜಿಎನ್‌ಆರ್‌ಇಜಿಎ ಅಡಿಯಲ್ಲಿ ಬಂಗಾಳದ ಹಣವನ್ನು ತಡೆಹಿಡಿಯುವುದರ ವಿರುದ್ಧ ನಾವು ದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸುತ್ತೇವೆ. ಅಕ್ಟೋಬರ್ 2 ರಂದು ನಾವು ಕೃಷಿ ಭವನದ ಹೊರಗೆ ಪ್ರತಿಭಟನೆಯನ್ನು ಆಯೋಜಿಸುತ್ತೇವೆ ಎಂದು ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಅಭಿಷೇಕ್ ಹೇಳಿದ್ದು ಈ ಕರೆಯನ್ನು ಮಮತಾ ಬ್ಯಾನರ್ಜಿ ಕೂಡ ಬೆಂಬಲಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ