AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರದಲ್ಲಿ ಶಾಲೆ ಎದುರು ಮಹಿಳೆಗೆ ಗುಂಡಿಕ್ಕಿ ಹತ್ಯೆ

ಎರಡು ತಿಂಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಇಂಫಾಲ್​ ಪಶ್ಚಿಮ ಜಿಲ್ಲೆಯ ಶಾಲೆಯೊಂದರ ಎದುರು ದುಷ್ಕರ್ಮಿಗಳು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ

Manipur Violence: ಮಣಿಪುರದಲ್ಲಿ ಶಾಲೆ ಎದುರು ಮಹಿಳೆಗೆ ಗುಂಡಿಕ್ಕಿ ಹತ್ಯೆ
ಗುಂಡಿನ ದಾಳಿImage Credit source: Times Of India
ನಯನಾ ರಾಜೀವ್
|

Updated on:Jul 06, 2023 | 2:14 PM

Share

ಎರಡು ತಿಂಗಳಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಘರ್ಷಣೆಗಳ ಮಧ್ಯೆ ಇಂಫಾಲ್​ ಪಶ್ಚಿಮ ಜಿಲ್ಲೆಯ ಶಾಲೆಯೊಂದರ ಎದುರು ದುಷ್ಕರ್ಮಿಗಳು ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಒಂದು ದಿನದ ಹಿಂದೆ ಶಾಲೆಗಳು ಪುನರಾರಂಭಗೊಂಡಗೊಂಡಿದ್ದು, ಈ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಮೃತ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಾಪಾವೊ ಮತ್ತು ಅವಾಂಗ್ ಸೆಕ್ಮೈ ಪ್ರದೇಶದಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ಘರ್ಷಣೆ ನಡೆಯುತ್ತಿತ್ತು. ಭದ್ರತಾ ಪಡೆಗಳು ಘರ್ಷಣೆಗೆ ಅಡ್ಡಿಪಡಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರತ್ಯೇಕ ಘಟನೆಯಲ್ಲಿ, ಪೊಲೀಸ್ ಶಸ್ತ್ರಾಗಾರದಿಂದ ಗಲಭೆಕೋರರು ಬಂದೂಕುಗಳನ್ನು ಲೂಟಿ ಮಾಡುವುದನ್ನು ತಡೆಯುವಲ್ಲಿ ಯಶಸ್ವಿಯಾದ ಪ್ರಯತ್ನಗಳ ನಂತರ, ತೌಬಲ್ ಜಿಲ್ಲೆಯಲ್ಲಿ ಭಾರತೀಯ ರಿಸರ್ವ್ ಬೆಟಾಲಿಯನ್ (IRB) ಸಿಬ್ಬಂದಿಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ನಡೆದಿತ್ತು.

ಮತ್ತಷ್ಟು ಓದಿ: ಮಣಿಪುರ ಗಲಭೆ: ಕೇಂದ್ರ ಸಚಿವ ಆರ್​ಕೆ ರಂಜನ್ ಸಿಂಗ್​ ನಿವಾಸಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಘರ್ಷಣೆಯಲ್ಲಿ ಹೆಚ್ಚುವರಿ 10 ಜನರು ಗಾಯಗೊಂಡಿದ್ದಾರೆ, 6 ಮಂದಿ ಸ್ಥಿತಿ ಗಂಭೀರವಾಗಿದ್ದು, ಇಂಫಾಲ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮೊದಲು ಮಣಿಪುರ ಸರ್ಕಾರವು ಜುಲೈ 10ರವರೆಗೂ ರಾಜ್ಯಾದ್ಯಂತ ಇಂಟರ್​ನೆಟ್ ಸಂಪರ್ಕ ಕಡಿತಗೊಳಿಸಿತ್ತು. ಇದೀಗ ಆ ಅವಧಿಯನ್ನು 5 ದಿನಗಳ ಕಾಲ ವಿಸ್ತರಿಸಿದೆ.

ಮೇ 3ರಂದು ಮೊದಲು ಇಂಟರ್​ನೆಟ್ ಸ್ಥಗಿತಗೊಳಿಸಲಾಗಿತ್ತು. ಸಂಘರ್ಷದಲ್ಲಿ ಇಲ್ಲಿಯವರೆಗೂ 100ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:13 pm, Thu, 6 July 23

Follow Us
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!