AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಹಿಳೆಯ ಗುಂಡಿಕ್ಕಿ ಹತ್ಯೆ

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ.

Manipur: ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮಹಿಳೆಯ ಗುಂಡಿಕ್ಕಿ ಹತ್ಯೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 16, 2023 | 12:32 PM

Share

ಇಂಫಾಲ: ಮಣಿಪುರದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಪೂರ್ವ ಇಂಫಾಲ್​​ನಲ್ಲಿ (Imphal) ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಜಿಲ್ಲೆಯ ಸಾವೊಂಬಂಗ್ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಷ್ಕರ್ಮಿಗಳು 50 ವರ್ಷ ವಯಸ್ಸಿನ ಮಾರಿಂಗ್ ಎಂಬ ಮಹಿಳೆಯ ಮನೆಗೆ ನುಗ್ಗಿ ಅವರ ಮುಖದ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ದಾಳಿಕೋರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದರ ಜತೆಗೆ, ಘಟನಾ ಸ್ಥಳದಿಂದ ಪಲಾಯನ ಮಾಡುವ ಮೊದಲು ಆಕೆಯ ಮುಖವನ್ನು ವಿರೂಪಗೊಳಿಸಿದ್ದಾರೆ ಎನ್ನಲಾಗಿದೆ.

ಮಣಿಪುರ ಪೊಲೀಸರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆದ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಸಮೀಪದ ಪ್ರದೇಶಗಳಲ್ಲಿನ ಮನೆಗಳಲ್ಲೂ ಶೋಧ ನಡೆಸಲಾಗುತ್ತಿದೆ. ಘಟನೆ ಸಂಬಂಧ ಪೊಲೀಸರು ಈಗಾಗಲೇ ಸುತ್ತಮುತ್ತಲಿನ ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ಮೃತ ಮಹಿಳೆ ನಾಗಾ ಸಮುದಾಯಕ್ಕೆ ಸೇರಿದವರಾಗಿದ್ದು, ಕೆಲವು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವಿದೇದಿಂದ ಬಂದ ಕೂಡಲೇ ದೆಹಲಿ ಲೆಫ್ಟಿನೆಂಟ್ ಗವರ್ನರ್ ಜತೆ ಪ್ರಧಾನಿ ಮೋದಿ ಮಾತುಕತೆ; ಪ್ರವಾಹ ನಿಯಂತ್ರಣ ಕುರಿತು ಚರ್ಚೆ

ಹಿಂಸಾಚಾರದಿಂದಾಗಿ ಸುದೀರ್ಘ ಅವಧಿಗೆ ಮುಚ್ಚಲ್ಪಟ್ಟಿದ್ದ ಶಿಕ್ಷಣ ಸಂಸ್ಥೆಗಳು ಶುಕ್ರವಾರವಷ್ಟೇ ಮರಳಿ ಕಾರ್ಯಾರಂಭ ಮಾಡಿದ್ದವು. ಇದಾದ ನಂತರ ಒಂದು ದಿನದ ಅವಧಿಯಲ್ಲಿ ಪಶ್ಚಿಮ ಇಂಫಾಲ್ ಜಿಲ್ಲೆಯ ಶಾಲೆಯೊಂದರ ಹೊರಗೆ ಮಹಿಳೆಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೇ ತಿಂಗಳಲ್ಲಿ ಹಿಂಸಾಚಾರ ಆರಂಭಗೊಂಡಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್