AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಮಣಿಪುರ ಹಿಂಸಾಚಾರ: ಚುರಾಚಂದ್​ಪುರದಲ್ಲಿ 3 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ

ಹಿಂಸಾಚಾರ(Violence) ಪೀಡಿತ ಮಣಿಪುರ(Manipur)ದ ಚುರಾಚಂದ್‌ಪುರದಲ್ಲಿ ಇಂದು ಕೆಲವು ಗಂಟೆಗಳ ಕಾಲ ಕರ್ಫ್ಯೂವನ್ನು ಭಾಗಶಃ ಸಡಿಲಿಸಲಾಗಿದೆ.

Manipur Violence: ಮಣಿಪುರ ಹಿಂಸಾಚಾರ: ಚುರಾಚಂದ್​ಪುರದಲ್ಲಿ 3 ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ
ಮಣಿಪುರ ಹಿಂಸಾಚಾರ
ನಯನಾ ರಾಜೀವ್
|

Updated on: May 07, 2023 | 9:45 AM

Share

ಹಿಂಸಾಚಾರ(Violence) ಪೀಡಿತ ಮಣಿಪುರ(Manipur)ದ ಚುರಾಚಂದ್‌ಪುರದಲ್ಲಿ ಇಂದು ಕೆಲವು ಗಂಟೆಗಳ ಕಾಲ ಕರ್ಫ್ಯೂವನ್ನು ಭಾಗಶಃ ಸಡಿಲಿಸಲಾಗಿದೆ. ಭಾನುವಾರ ಬೆಳಗ್ಗೆ 7 ರಿಂದ 10 ರವರೆಗೆ ಕರ್ಫ್ಯೂ ಭಾಗಶಃ ಸಡಿಲಿಸಲಾಗಿದ್ದು, ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಚುರಾಚಂದ್‌ಪುರ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ 3 ರಂದು ಮಣಿಪುರದ ಹಿಂಸಾಚಾರ ಪೀಡಿತ ಚುರಾಚಂದ್‌ಪುರದಲ್ಲಿ ಜಿಲ್ಲಾಡಳಿತ ಸಂಪೂರ್ಣ ಕರ್ಫ್ಯೂ ವಿಧಿಸಿದೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ, ರಾಜ್ಯ ಗವರ್ನರ್ ಅನುಸೂಯಾ ಉಯ್ಕೆ ಅವರು ಶನಿವಾರದಂದು ರಾಜ್ಯದ ಜನತೆಗೆ ಸಹೋದರತ್ವವನ್ನು ಕಾಪಾಡಿಕೊಳ್ಳಲು ಮತ್ತು ಭಯ ಮತ್ತು ಅಭದ್ರತೆಯ ಭಾವನೆಯನ್ನು ಹೋಗಲಾಡಿಸಲು ಮನವಿ ಮಾಡಿದ್ದಾರೆ.

ಮತ್ತಷ್ಟು ಓದಿ: ಮಣಿಪುರ ಹಿಂಸಾಚಾರ; ಕಲಬುರಗಿ ಚುನಾವಣಾ ಪ್ರಚಾರ ರದ್ದು, ದೆಹಲಿಗೆ ತೆರಳಿದ ಅಮಿತ್ ಶಾ

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ಪರಸ್ಪರ ಸಹೋದರತ್ವ ಮತ್ತು ಶಾಂತಿಯನ್ನು ಕದಡಿದೆ. ಈ ಅಹಿತಕರ ಘಟನೆಗಳಲ್ಲಿ ರಾಜ್ಯದ ಜನರು ಸಾವನ್ನಪ್ಪಿದ್ದಾರೆ.

ಸಹೋದರತ್ವವನ್ನು ಕಾಪಾಡಿಕೊಳ್ಳಲು, ಭಯ ಮತ್ತು ಅಭದ್ರತೆಯ ಭಾವನೆಯನ್ನು ಹೋಗಲಾಡಿಸಲು ಮತ್ತು ನಿಮ್ಮ ಸುತ್ತಮುತ್ತಲಿನ ಜನರೊಂದಿಗೆ ಸಹಕರಿಸಲು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದಿದ್ದಾರೆ. ಈ ಘಟನೆಗಳು ರಾಜ್ಯದ ನಾಗರಿಕರಲ್ಲಿ ಅಭದ್ರತೆ, ಅಪನಂಬಿಕೆ ಮತ್ತು ಭಯದ ವಾತಾವರಣವನ್ನು ಸೃಷ್ಟಿಸಿವೆ ಎಂದು ಹೇಳಲಾಗಿದೆ.

ನಿಮ್ಮ ಸುತ್ತಮುತ್ತಲಿನ ಯಾವುದೇ ಘಟನೆಯು ಅಶಾಂತಿ ಅಥವಾ ಭಯವನ್ನು ಹರಡಿದರೆ, ಆಸ್ತಿಪಾಸ್ತಿಗೆ ಹಾನಿ ಅಥವಾ ಜೀವಹಾನಿಯನ್ನು ಉಂಟುಮಾಡಿದರೆ, ತಕ್ಷಣವೇ ಸೇನೆಯ 24 ಗಂಟೆಗಳ ನಿಯಂತ್ರಣ ಕೊಠಡಿ ಸಂಖ್ಯೆ 9233637014 ಗೆ ಕರೆ ಮಾಡಿ ಅಥವಾ ದಯವಿಟ್ಟು ಪೊಲೀಸರಿಗೆ ಮಾಹಿತಿ ನೀಡಿ ಎಂದು ರಾಜ್ಯಪಾಲರು ಹೇಳಿದರು.

ಇದಕ್ಕೂ ಮೊದಲು, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಮಣಿಪುರ ಏಕೀಕರಣದ ಸಮನ್ವಯ ಸಮಿತಿ (COCOMI)’ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಕಾಂಗ್ರೆಸ್, ಎನ್‌ಪಿಎಫ್, ಎನ್‌ಪಿಪಿ, ಸಿಪಿಐ (ಎಂ), ಆಮ್ ಆದ್ಮಿ ಪಕ್ಷ ಮತ್ತು ಶಿವಸೇನೆ ಸೇರಿದಂತೆ ರಾಜಕೀಯ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.

ಮತ್ತೊಂದೆಡೆ, ಭದ್ರತಾ ಪಡೆಗಳ ಮಧ್ಯಪ್ರವೇಶದ ನಂತರ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪಿ ಡೊಂಗಲ್ ಹೇಳಿದ್ದಾರೆ. ಮಣಿಪುರದಲ್ಲಿ ಆರ್‌ಎಎಫ್, ಬಿಎಸ್‌ಎಫ್ ಮತ್ತು ಸಿಆರ್‌ಪಿಎಫ್ ಸೇರಿದಂತೆ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮುಖ್ಯಸ್ಥ ಕುಲದೀಪ್ ಸಿಂಗ್ ಅವರನ್ನು ಭದ್ರತಾ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ಅವರು ಹೇಳಿದರು.

ಮಣಿಪುರದ ಪರಿಸ್ಥಿತಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಅಶುತೋಷ್ ಸಿನ್ಹಾ ಅವರನ್ನು ಒಟ್ಟಾರೆ ಕಾರ್ಯಾಚರಣಾ ಕಮಾಂಡರ್ ಆಗಿ ನೇಮಿಸಿದೆ ಎಂದು ರಾಜ್ಯ ಡಿಜಿಪಿ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರಕ್ಕೆ ಕಾರಣವೇನು? ಮೈತಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯನ್ನು ಪ್ರತಿಭಟಿಸಲು ವಿದ್ಯಾರ್ಥಿಗಳ ಸಂಘಟನೆಯು ಕರೆ ನೀಡಿದ್ದ ‘ಬುಡಕಟ್ಟು ಏಕತಾ ಮೆರವಣಿಗೆ’ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್