AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬಂಧಿತ 4 ಆರೋಪಿಗಳಿಗೆ 11 ದಿನಗಳ ಪೊಲೀಸ್ ಕಸ್ಟಡಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ನಂತರ ಪರೇಡ್ ಮಾಡಿ ಹಲ್ಲೆ ನಡೆಸಿದ ಗುಂಪಿನ ಭಾಗವಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ.

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಬಂಧಿತ 4 ಆರೋಪಿಗಳಿಗೆ 11 ದಿನಗಳ ಪೊಲೀಸ್ ಕಸ್ಟಡಿ
ಮಣಿಪುರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 21, 2023 | 6:47 PM

Share

ಇಂಫಾಲ್ ಜುಲೈ 21: ಮಣಿಪುರದಲ್ಲಿ (Manipur) ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈನಲ್ಲಿ  ಮೇ 4 ರಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ನಂತರ ಪರೇಡ್ ಮಾಡಿ ಹಲ್ಲೆ ನಡೆಸಿದ ಗುಂಪಿನ ಭಾಗವಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಶುಕ್ರವಾರ 11 ದಿನಗಳ ಪೊಲೀಸ್ ಕಸ್ಟಡಿಗೆ(Police Custody) ನೀಡಲಾಗಿದೆ ಎಂದು ಮಣಿಪುರ ಪೊಲೀಸರನ್ನು (Manipur Police) ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದರು.

ವೈರಲ್ ವಿಡಿಯೊ ಪ್ರಕರಣದಲ್ಲಿ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ  ಪೊಲೀಸ್ ಠಾಣೆ  ಅಡಿಯಲ್ಲಿ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರದ ಘೋರ ಅಪರಾಧದಲ್ಲಿ ಮೂರು ಪ್ರಮುಖ ಆರೋಪಿಗಳನ್ನು ಇಂದು ಬಂಧಿಸಲಾಗಿದೆ.  ಒಟ್ಟು 04 ನಾಲ್ಕುವ್ಯಕ್ತಿಗಳನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ ಎಂದು ಮಣಿಪುರ ಪೊಲೀಸರು ಗುರುವಾರ ಟ್ವೀಟ್ ಮಾಡಿದ್ದಾರೆ.

ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅದೇ ವಿಡಿಯೊ ವೈರಲ್ ಆದ ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿ ಸೇರಿದಂತೆ 4 ಜನರನ್ನು ಬಂಧಿಸಿದ್ದಾರೆ. ಪೊಲೀಸರು ಗುರುವಾರ ರಾತ್ರಿ ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೌಬಲ್ ಜಿಲ್ಲೆಯ ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಬಹುಸಂಖ್ಯಾತ ಸಮುದಾಯವನ್ನು ಒಳಗೊಂಡ ಗುಂಪು ಬಿಡುಗಡೆ ಮಾಡುವ ಮೊದಲು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಯನ್ನು ಖಂಡಿಸಿದ್ದು ಘಟನೆಯು “ಯಾವುದೇ ನಾಗರಿಕ ಸಮಾಜಕ್ಕೆ ನಾಚಿಕೆಗೇಡು” ಎಂದು ಹೇಳಿದರು.ಯಾವುದೇ ಆರೋಪಿಗಳನ್ನು ಸುಮ್ಮನೆ ಬಿಡಲಾಗುವುದಿಲ್ಲ, ಇದರ ಹಿಂದೆ ಇರುವವರನ್ನು ನಾವು ಎಂದಿಗೂ ಕ್ಷಮಿಸುವುದಿಲ್ಲ ಎಂದಿದ್ದಾರೆ ಅವರು.

ಇದನ್ನೂ ಓದಿ: ಮಣಿಪುರ ಸ್ಥಿತಿ ಬಗ್ಗೆ ಚರ್ಚೆಗೆ ಸರ್ಕಾರ ಸಿದ್ಧ, ವಿಪಕ್ಷ ಪ್ರತಿಭಟನೆ ಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಮೇ 3 ರಂದು ಮಣಿಪುರದ ಆಲ್ ಟ್ರೈಬಲ್ ಸ್ಟೂಡೆಂಟ್ಸ್ ಯೂನಿಯನ್ (ATSUM) ಮೇ 3 ರಂದು ಮೇಟಿ ಸಮುದಾಯಕ್ಕೆ ಸೇರಿದ ಜನರನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸುವುದನ್ನು ಪ್ರತಿಭಟಿಸಿದ ನಂತರ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:26 pm, Fri, 21 July 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್