AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಳ್ಳಲು ಕಾರಣ ಇಲ್ಲಿದೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ, ಕಲಹಗಳಿಗೆ ಮ್ಯಾನ್ಮಾರ್​ನಿಂದ ಬಂದ ಉಗ್ರಗಾಮಿ ಗುಂಪುಗಳೇ ಮೂಲ ಕಾರಣ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ. ಮ್ಯಾನ್ಮಾರ್​ನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಯುದ್ಧಕ್ಕೆ ಪ್ರಚೋದನೆ ನೀಡಿದ್ದರು. ಈಗ ಮಣಿಪುರದಲ್ಲಿ ಕುಕಿ ಹಾಗೂ ಮೈತಿ ಸಮುದಾಯ ಹಾಗೂ ಕ್ರಿಶ್ಚಿಯನ್ ನಡುವೆ ಹಿಂಸಾಚಾರ ಹುಟ್ಟಿಗೂ ಕಾರಣರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಣಿಪುರದಲ್ಲಿ ಹಿಂಸಾಚಾರ ಉಲ್ಬಣಗೊಳ್ಳಲು ಕಾರಣ ಇಲ್ಲಿದೆ
ಮಣಿಪುರ ಹಿಂಸಾಚಾರ
ನಯನಾ ರಾಜೀವ್
|

Updated on:Dec 20, 2024 | 12:06 PM

Share

ಮ್ಯಾನ್ಮಾರ್​ನಲ್ಲಿ ಆಶ್ರಯ ಪಡೆದಿದ್ದ ಹಾಗೂ ಅದರ ಅಂತರ್ಯುದ್ಧದಲ್ಲಿ ಪಾಲ್ಗೊಂಡಿದ್ದ ಭಾರತದ ಉಗ್ರಗಾಮಿ ಗುಂಪು ಈ ವರ್ಷ ಮಣಿಪುರಕ್ಕೆ ಒಂದೊಂದಾಗಿ ಹಿಂದಿರುಗುತ್ತಿವೆ. ಹೀಗಾಗಿ ಮಣಿಪುರದ ಪರಿಸ್ಥಿತಿ ಹದಗೆಡುತ್ತಿದೆ. ಮ್ಯಾನ್ಮಾರ್​ನಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಯುದ್ಧಕ್ಕೆ ಪ್ರಚೋದನೆ ನೀಡಿದ್ದರು. ಈಗ ಮಣಿಪುರದಲ್ಲಿ ಕುಕಿ ಹಾಗೂ ಮೈತಿ ಸಮುದಾಯ ಹಾಗೂ ಕ್ರಿಶ್ಚಿಯನ್ ನಡುವೆ ಹಿಂಸಾಚಾರ ಹುಟ್ಟಿಗೂ ಕಾರಣರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 2023ರಿಂದ ಸುಮಾರು 260 ಮಂದಿ ಸಾವನ್ನಪ್ಪಿದ್ದಾರೆ, 60 ಸಾವಿರಕ್ಕೂ ಹೆಚ್ಚು ಮಂದಿ ಸ್ಥಳಾಂತರಗೊಂಡಿದ್ದಾರೆ. ಭಾರತೀಯ ಮಿಲಿಟರಿ ಅಧಿಕಾರಿಗಳು ಹಾಗೂ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಉಗ್ರಗಾಮಿಗಳು ಗಡಿಯನ್ನು ದಾಟಿ ಮಣಿಪುರಕ್ಕೆ ಬರುತ್ತಿದ್ದಂತೆ ಹೊಸ ಸಂಘರ್ಷಗಳು ತೆರೆದುಕೊಳ್ಳುತ್ತಿವೆ.

ಫೈಟರ್‌ಗಳು ರಾಕೆಟ್ ಲಾಂಚರ್‌ಗಳು ಸೇರಿದಂತೆ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ನವೆಂಬರ್‌ನಲ್ಲಿ ಮಾತ್ರ 20 ಜನರು ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ. ಫೆಡರಲ್ ಸರ್ಕಾರವು ಮಣಿಪುರದಲ್ಲಿ 10,000 ಹೆಚ್ಚು ಸೈನಿಕರನ್ನು ನಿಯೋಜಿಸುವುದಾಗಿ ಘೋಷಿಸಿತು.

10 ವರ್ಷಗಳ ಹಿಂದೆ ನಾವು ನಿಯಂತ್ರಿಸಿದ್ದ ದಂಗೆಕೋರರು ಮತ್ತೆ ಮುನ್ನಲೆಗೆ ಬಂದಿದ್ದಾರೆ ಎಂದು ಮಣಿಪುರದ ಪೊಲೀಸ್ ಮಾಜಿ ಮುಖ್ಯಸ್ಥ ಯುಮ್ನಮ್ ಹೇಳಿದ್ದಾರೆ. ಕೆಲವರು ಮ್ಯಾನ್ಮಾರ್​ನಿಂದ ಹಿಂದಿರುಗುತ್ತಿದ್ದಾರೆ, ಕೆಲವರು ಈಗಾಗಲೇ ಬಂದಿದ್ದಾರೆ. ಮಣಿಪುರವು ಭಾರತದ ಈಶಾನ್ಯದಲ್ಲಿ 3.2 ಮಿಲಿಯನ್ ಜನರಿರುವ ಗುಡ್ಡಗಾಡು, ಅರಣ್ಯ ಪ್ರದೇಶವಾಗಿದ್ದು, ಮ್ಯಾನ್ಮಾರ್‌ನ ಗಡಿಯಲ್ಲಿದೆ.

ಮತ್ತಷ್ಟು ಓದಿ: ರಾಕೆಟ್ ದಾಳಿಯ ನಂತರ ಮಣಿಪುರದ ಜಿರಿಬಾಮ್​​ನಲ್ಲಿ ಹಿಂಸಾಚಾರ, 4 ಸಾವು

ರಾಜ್ಯದ ಸಮೃದ್ಧ ಇಂಫಾಲ್ ಕಣಿವೆ ಪ್ರದೇಶದಲ್ಲಿ ವಾಸಿಸುವ ಮೈತಿ, ಹೆಚ್ಚು ಬಡತನದ ಬೆಟ್ಟಗಳಲ್ಲಿ ವಾಸಿಸುವ ಐತಿಹಾಸಿಕವಾಗಿ ಹಿಂದುಳಿದ ಕುಕಿಗಳಿಗೆ ನೀಡಿದ ಸರ್ಕಾರಿ ಪ್ರಯೋಜನಗಳನ್ನು ನೀಡುವ ನ್ಯಾಯಾಲಯದ ಆದೇಶದಿಂದ ಕಳೆದ ವರ್ಷ ಅಲ್ಲಿ ಹೋರಾಟವು ಕಿಡಿ ಹೊತ್ತಿಸಿತ್ತು.

ಹಿಂಸಾಚಾರವನ್ನು ಕಡಿಮೆ ಮಾಡಲು ಭದ್ರತಾ ಪಡೆಗಳು ಎರಡು ಗುಂಪುಗಳ ನಡುವೆ ಬಫರ್ ವಲಯನ್ನು ನಿರ್ಮಿಸಲಾಗಿದೆ. ಕುಕಿಗಳು, ಕಚಿನ್ ಬಂಡುಕೋರರ ಬೆಂಬಲವನ್ನು ಹೊಂದಿದ್ದಾರೆ.ಮಣಿಪುರಕ್ಕೆ ಮರಳಿದ ಉಗ್ರರ ಸಂಖ್ಯೆ ಇಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ.

ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಅಧಿಕಾರಿಗಳು ತಡೆದ ಕೆಲವರು ಸೇರಿದಂತೆ 100 ಕ್ಕೂ ಹೆಚ್ಚು ಮೈಟಿ ಬಂಡುಕೋರರನ್ನು ಕಳೆದ ವರ್ಷ ಮಣಿಪುರದಲ್ಲಿ ಮತ್ತು 200 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಅದೇ ಅವಧಿಯಲ್ಲಿ ಸುಮಾರು 50 ಕುಕಿ ದಂಗೆಕೋರರನ್ನು ಬಂಧಿಸಲಾಗಿದೆ ಎಂದು ಡೇಟಾ ತೋರಿಸುತ್ತದೆ.

ಮಣಿಪುರದಲ್ಲಿ ಬಳಸಲಾಗುತ್ತಿರುವ ಹಲವು ಶಸ್ತ್ರಾಸ್ತ್ರಗಳನ್ನು ಸಂಘರ್ಷದ ಆರಂಭಿಕ ತಿಂಗಳುಗಳಲ್ಲಿ ರಾಜ್ಯದ ಶಸ್ತ್ರಾಸ್ತ್ರಗಳಿಂದ ಲೂಟಿ ಮಾಡಲಾಗಿತ್ತು. ಈ ವರ್ಷ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಮ್ಯಾನ್ಮಾರ್‌ನಿಂದ ತರಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:03 pm, Fri, 20 December 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್