AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK Letter to Narendra Modi: ಮನೀಶ್ ಸಿಸೋಡಿಯಾ ಬಂಧನ ಕುರಿತು ಕಾಂಗ್ರೆಸ್​ಗಿಂತ ಭಿನ್ನ ನಿಲುವು ತಳೆದ ಡಿಎಂಕೆ

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ.

DMK Letter to Narendra Modi: ಮನೀಶ್ ಸಿಸೋಡಿಯಾ ಬಂಧನ ಕುರಿತು ಕಾಂಗ್ರೆಸ್​ಗಿಂತ ಭಿನ್ನ ನಿಲುವು ತಳೆದ ಡಿಎಂಕೆ
ಎಂಕೆ ಸ್ಟಾಲಿನ್Image Credit source: Social News
Follow us
ನಯನಾ ರಾಜೀವ್
|

Updated on: Mar 08, 2023 | 10:14 AM

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬೇಷರತ್ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷದ ನಾಯಕನನ್ನು ಸಿಬಿಐ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ವಿಚಾರಣೆ ನಡೆಸಿತು.

ವೈಯಕ್ತಿಕ ಲಾಭಕ್ಕಾಗಿ ಕೇಂದ್ರ ಸರ್ಕಾರ ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ. ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಿದ ಅವರು, 9 ವರ್ಷಗಳ ಕಾಲ ಅಧಿಕಾರದಲ್ಲಿರುವ ಬಿಜೆಪಿ ವಿರೋಧ ಪಕ್ಷಗಳ ರಾಜಕೀಯ ನಾಯಕರಿಗೆ ಕಿರುಕುಳ ನೀಡಲು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ.

ಮತ್ತಷ್ಟು ಓದಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ: ಕಾಂಗ್ರೆಸ್ ಬಿಟ್ಟು 8 ಪ್ರತಿಪಕ್ಷಗಳಿಂದ ಪ್ರಧಾನಿ ಮೋದಿಗೆ ಪತ್ರ

ಮದ್ಯದ ಹಗರಣದ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಆಮ್ ಆದ್ಮಿ ಪಕ್ಷವನ್ನು ಗುರಿಯಾಗಿಸುತ್ತಿದೆ. ಈ ವೇಳೆ ಆ ಇತರೆ ವಿರೋಧ ಪಕ್ಷಗಳೂ ಪ್ರತ್ಯೇಕವಾಗಿ ತಮ್ಮ ನಿಲುವು ಸ್ಪಷ್ಟಪಡಿಸಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಸ್ಟಾಲಿನ್, ನನ್ನ ಅಭಿಪ್ರಾಯವನ್ನು ನೀವು ಒಪ್ಪುತ್ತೀರಿ ಎಂಬ ಸಂಪೂರ್ಣ ವಿಶ್ವಾಸವಿದೆ. ವಿಭಿನ್ನ ಸಿದ್ಧಾಂತಗಳು ಮತ್ತು ರಾಜಕೀಯ ಪಕ್ಷಗಳು ಭಾರತೀಯ ಪ್ರಜಾಪ್ರಭುತ್ವದಲ್ಲಿ ಎರಡು ಪ್ರಮುಖ ಅಂಶಗಳಾಗಿವೆ.

ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಆರೋಪದಲ್ಲಿ ಬಂಧಿಸಲಾಗಿದೆ ಎಂದು ತಿಳಿದಾಗಿನಿಂದ ನಾನು ನಿರಾಶೆಗೊಂಡಿದ್ದೇನೆ. ಈ ವೇಳೆ ವಿನಾಕಾರಣ ಚಿತ್ರಹಿಂಸೆ ನೀಡಲಾಗುತ್ತಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಿರಂತರವಾಗಿ ಎಎಪಿಯನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ