Manish Sisodia Letter: ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ: ಮನೀಶ್​ ಸಿಸೋಡಿಯಾ ಪತ್ರ ವೈರಲ್

|

Updated on: Apr 07, 2023 | 11:51 AM

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಅವರ ಶಿಕ್ಷಣದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

Manish Sisodia Letter: ಪ್ರಧಾನಿ ನರೇಂದ್ರ ಮೋದಿಯ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ: ಮನೀಶ್​ ಸಿಸೋಡಿಯಾ ಪತ್ರ ವೈರಲ್
Manish Sisodia
Follow us on

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ(Manish Sisodia) ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು, ಅವರ ಶಿಕ್ಷಣದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ವಿದ್ಯಾರ್ಹತೆ ಕೊರತೆಯು ದೇಶಕ್ಕೆ ಅಪಾಯಕಾರಿ ಎಂದಿದ್ದಾರೆ. ಮೋದಿಯವರನ್ನು ತರಾಟೆಗೆ ತೆಗೆದುಕೊಂಡಿರುವ ಸಿಸೋಡಿಯಾ ದೇಶದ ಪ್ರಗತಿಗೆ ಪ್ರಧಾನಿ ಮೋದಿ ಶಿಕ್ಷಣ ಪಡೆಯುವುದು ಅಗತ್ಯ ಎಂದಿದ್ದಾರೆ.

ನಾವು ಇಂದು 21 ನೇ ಶತಮಾನದಲ್ಲಿ ವಾಸಿಸುತ್ತಿದ್ದೇವೆ, ಪ್ರಪಂಚದಾದ್ಯಂತ ವಿಜ್ಞಾನ, ತಂತ್ರಜ್ಞಾನದಲ್ಲಿ ಪ್ರತಿ ದಿನ ಹೊಸ ಪ್ರಗತಿಯನ್ನು ಸಾಧಿಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಐ ಬಗ್ಗೆ ಮಾತನಾಡುತ್ತಿದ್ದಾರೆ. ಭಾರತದ ಪ್ರಧಾನಿಗೆ ಶಿಕ್ಷಣ ಕಡಿಮೆ, ವಿಜ್ಞಾನದ ಪ್ರಾಥಮಿಕ ಜ್ಞಾನವೂ ಇಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಹಾಗೆ ಬೇರೆ ರಾಷ್ಟ್ರಗಳ ಅಧ್ಯಕ್ಷರು ಪ್ರಧಾನಿಯನ್ನು ಅಪ್ಪಿಕೊಂಡಾಗ ಎಷ್ಟು ಹಣ ಕೊಟ್ಟು ಒಪ್ಪಂದಗಳಿಗೆ ಸಹಿ ಹಾಕುತ್ತಾರೋ ಅದೂ ಕೂಡ ಗೊತ್ತಿಲ್ಲ. ಪ್ರಧಾನಿ ಅಜ್ಞಾನದಿಂದ ದೇಶಕ್ಕೆ ಸಮಸ್ಯೆಯಾಗುತ್ತಿದೆ.

ಮತ್ತಷ್ಟು ಓದಿ: Manish Sisodia: ಜಾಮೀನು ವಿಚಾರಣೆಗೆ ಮುನ್ನ ಮನೀಶ್ ಸಿಸೋಡಿಯಾ ಬಂಧಿಸಿದ ಜಾರಿ ನಿರ್ದೇಶನಾಲಯ

ಕಡಿಮೆ ಶಿಕ್ಷಣ ಪಡೆದ ಪ್ರಧಾನಿಗೆ ಇಂದಿನ ಯುವಕರ ಕನಸುಗಳನ್ನು ನನಸು ಮಾಡುವ ಸಾಮರ್ಥ್ಯವಿದೆಯೇ, ಇತ್ತೀಚಿನ ವರ್ಷಗಳಲ್ಲಿ ದೇಶದಾದ್ಯಂತ 60,000 ಸರ್ಕಾರಿ ಶಾಲೆಗಳನ್ನು ಮುಚ್ಚಲಾಯಿತು, ಏಕೆ?. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿದ್ದರೆ ಮಕ್ಕಳು ಬರುತ್ತಿದ್ದರು, ಈಗ ದೆಹಲಿಯಲ್ಲಿ ನಡೆಯುತ್ತಿರುವಂತೆ ಖಾಸಗಿ ಶಾಲೆಗಳಿಂದ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಪ್ರಾರಂಭಿಸಿದ್ದಾರೆ.

ಕಡಿಮೆ ವಿದ್ಯಾವಂತರೆಂದು ಹೆಮ್ಮೆಪಡುವ ದೇಶದ ಪ್ರಧಾನಿ ಸಾಮಾನ್ಯ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಎಂದಿಗೂ ಒದಗಿಸುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ 60000 ಸರ್ಕಾರಿ ಶಾಲೆಗಳನ್ನು ಮುಚ್ಚಿರುವುದು ಇದಕ್ಕೆ ಜೀವಂತ ಸಾಕ್ಷಿ ಎಂದು ಬರೆದಿದ್ದಾರೆ.