Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೀಶ್ ಸಿಸೋಡಿಯಾ ನಿರ್ವಹಿಸಿದ್ದ 18 ಇಲಾಖೆಗಳ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಹಂಚಿದ ಕೇಜ್ರಿವಾಲ್

Manish Sisodia ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ 10 ತಿಂಗಳಿನಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಖಾತೆ ಸೇರಿದಂತೆ 18 ಸಚಿವಾಲಯಗಳ ಉಸ್ತುವಾರಿ ವಹಿಸಿದ್ದರು.

ಮನೀಶ್ ಸಿಸೋಡಿಯಾ ನಿರ್ವಹಿಸಿದ್ದ 18 ಇಲಾಖೆಗಳ ಜವಾಬ್ದಾರಿಯನ್ನು ಇಬ್ಬರು ಸಚಿವರಿಗೆ ಹಂಚಿದ ಕೇಜ್ರಿವಾಲ್
ಮನೀಶ್ ಸಿಸೋಡಿಯಾ
Follow us
ರಶ್ಮಿ ಕಲ್ಲಕಟ್ಟ
|

Updated on:Feb 28, 2023 | 7:42 PM

ದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ (Delhi liquor policy case) ಭ್ರಷ್ಟಾಚಾರದ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳದಿಂದ ಬಂಧಿತರಾಗಿರುವ ಮನೀಶ್ ಸಿಸೋಡಿಯಾ (Manish Sisodia)ಅವರು ಮಂಗಳವಾರ ಅರವಿಂದ ಕೇಜ್ರಿವಾಲ್(Arvind Kejriwal) ನೇತೃತ್ವದ ದೆಹಲಿ ಸರ್ಕಾರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿತ್ತು. ಬಂಧಿತ ಆಮ್ ಆದ್ಮಿ ಪಕ್ಷದ (ಎಎಪಿ) ಸಚಿವರಾದ ಸತ್ಯೇಂದ್ರ ಜೈನ್ ಅವರು ಕೂಡಾ ಇಂದು ದೆಹಲಿ ಸಂಪುಟದಿಂದ ಹೊರಬಂದಿದ್ದಾರೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು ಖಾತೆಗಳನ್ನು ಮರು ನಿಯೋಜಿಸಿದ್ದಾರೆ.

ರಾಜೀನಾಮೆಗಳು ತಪ್ಪಿತಸ್ಥರು ಎಂದು ಅಂಗೀಕರಿಸಿದ್ದಲ್ಲ, ಎಎಪಿ ಇದನ್ನು “ಆಡಳಿತಾತ್ಮಕ ಹೆಜ್ಜೆ” ಎಂದು ವಿವರಿಸಿದೆ. ಯಾವುದೇ ಹೊಸ ಸಚಿವರು ಸಂಪುಟ ಸೇರುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಸೋಡಿಯಾ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ, ಎಂಟು ವರ್ಷಗಳ ಕಾಲ ಸಂಪೂರ್ಣ ಸಮರ್ಪಣಾಭಾವದಿಂದ ದೆಹಲಿಗೆ ಸೇವೆ ಸಲ್ಲಿಸಿರುವೆ. ನನ್ನ ವಿರುದ್ಧದ ಆರೋಪಗಳು ಸುಳ್ಳು. ನನ್ನ ವಿರುದ್ಧ ಇನ್ನೂ ಹೆಚ್ಚಿನ ಪ್ರಕರಣಗಳಿರುವ ಸಾಧ್ಯತೆಯಿದೆ… ಈ ಆರೋಪಗಳು ಸುಳ್ಳೆಂದು ದೇವರಿಗೆ ಗೊತ್ತು ಎಂದು ಹೇಳಿದ್ದಾರೆ. ಇನ್ನು ದೆಹಲಿ ಸಂಪುಟದಲ್ಲಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಐವರು ಸಚಿವರಿದ್ದಾರೆ.

ಮನೀಶ್ ಸಿಸೋಡಿಯಾ ಅವರ ಇಲಾಖೆಗಳನ್ನು ಕೈಲಾಶ್ ಗಹ್ಲೋಟ್ ಮತ್ತು ರಾಜ್ ಕುಮಾರ್ ಆನಂದ್ ಅವರಿಗೆ ವಹಿಸಲಾಗುವುದು. ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ 10 ತಿಂಗಳಿನಿಂದ ಜೈಲಿನಲ್ಲಿರುವ ಸತ್ಯೇಂದ್ರ ಜೈನ್ ಅವರ ಆರೋಗ್ಯ ಖಾತೆ ಸೇರಿದಂತೆ 18 ಸಚಿವಾಲಯಗಳ ಉಸ್ತುವಾರಿ ವಹಿಸಿದ್ದರು.

ದೆಹಲಿ ಕ್ಯಾಬಿನೆಟ್‌ನಲ್ಲಿ ಈಗ ಐವರು ಮಂತ್ರಿಗಳಿದ್ದಾರೆ. ಕೇಜ್ರಿವಾಲ್ ಅವರು ಯಾವುದೇ ಸಚಿವಾಲಯವನ್ನು ತೆಗೆದುಕೊಂಡಿಲ್ಲ, ಬದಲಿಗೆ ಎಎಪಿಯ ರಾಷ್ಟ್ರೀಯ ಯೋಜನೆಗಳನ್ನು ಮುಂದುವರಿಸಲು ಆದ್ಯತೆ ನೀಡುತ್ತಾರೆ.

ಶಿಕ್ಷಣ ಸಚಿವರಾಗಿ ದೆಹಲಿಯ ಶಾಲೆಗಳಲ್ಲಿ ಶಿಕ್ಷಣ ಕ್ರಾಂತಿ ಉಂಟು ಮಾಡಿದ ಸಿಸೋಡಿಯಾ ಅವರು ಸರ್ಕಾರದಲ್ಲಿ 18 ಇಲಾಖೆಗಳ ಉಸ್ತುವಾರಿ ವಹಿಸಿದ್ದರು. ಅತೀ ಹೆಚ್ಚು ಖಾತೆಗಳನ್ನು ಹೊಂದಿದ ಸಚಿವರಾಗಿದ್ದರು ಅವರು.

ಸಿಸೋಡಿಯಾ ಬಳಿ ಇದ್ದ ಖಾತೆಗಳಿವು

    • ಶಿಕ್ಷಣ
    • ಹಣಕಾಸು
    • ಯೋಜನೆ
    • ಭೂಮಿ ಮತ್ತು ಕಟ್ಟಡ
    • ವಿಜಿಲೆನ್ಸ್
    • ಸೇವೆಗಳು
    • ಪ್ರವಾಸೋದ್ಯಮ
    • ಕಲೆ, ಸಂಸ್ಕೃತಿ ಮತ್ತು ಭಾಷೆ
    • ಕಾರ್ಮಿಕ
    • ಉದ್ಯೋಗ
    • ಲೋಕೋಪಯೋಗಿ ಇಲಾಖೆ
    • ಆರೋಗ್ಯ
    • ಕೈಗಾರಿಕೆಗಳು
    • ವಿದ್ಯುತ್
    • ಗೃಹ
    • ನಗರಾಭಿವೃದ್ಧಿ
    • ನೀರಾವರಿ ಮತ್ತು ಪ್ರವಾಹ ನಿಯಂತ್ರಣ
    • ಜಲ

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Tue, 28 February 23

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ