AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​​ಗೆ ಡೆಂಗ್ಯೂ; ಏಮ್ಸ್​ ವೈದ್ಯರಿಂದ ಮಾಹಿತಿ

ಮಾಜಿ ಪ್ರಧಾನಮಂತ್ರಿ ಮನಮೋಹನ್ ​ಸಿಂಗ್​ ಏಪ್ರಿಲ್​​ನಲ್ಲಿ ಕೊರೊನಾಕ್ಕೆ ಒಳಗಾಗಿದ್ದರು. ಆಗಲೂ ಸಹ ಏಮ್ಸ್​ಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​​​ಗೆ ಡೆಂಗ್ಯೂ; ಏಮ್ಸ್​ ವೈದ್ಯರಿಂದ ಮಾಹಿತಿ
ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್​
TV9 Web
| Updated By: Lakshmi Hegde|

Updated on: Oct 16, 2021 | 3:45 PM

Share

ಅನಾರೋಗ್ಯದಿಂದ ದೆಹಲಿಯ ಏಮ್ಸ್​ (AIIMS)ಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​​(Manmohan Singh )ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ. ಅಪಾಯವಿಲ್ಲ, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಇಂದು ಏಮ್ಸ್​ ವೈದ್ಯರು ತಿಳಿಸಿದ್ದಾರೆ. ಮನಮೋಹನ್​ ಸಿಂಗ್​ ಅವರಲ್ಲಿ ಪ್ಲೇಟ್​ಲೆಟ್​ ಪ್ರಮಾಣ ಕುಸಿದಿತ್ತು. ಇದೀಗ ಅದರಲ್ಲಿ ಏರಿಕೆಯಾಗುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ. 

ಮಾಜಿ ಪ್ರಧಾನಮಂತ್ರಿ, ಕಾಂಗ್ರೆಸ್​ ಹಿರಿಯ ನಾಯಕ ಮನಮೋಹನ್​ ಸಿಂಗ್​ ಅವರಲ್ಲಿ ಬುಧವಾರ ರಾತ್ರಿ ಜ್ವರ, ಸುಸ್ತು ಕಾಣಿಸಿಕೊಂಡಿತ್ತು. ಅದಾದ ನಂತರ ಅವರನ್ನು ಏಮ್ಸ್​​ನ​​  ಕಾರ್ಡಿಯೋ-ನ್ಯೂರೋ ಸೆಂಟರ್​​ನಲ್ಲಿರುವ ಖಾಸಗಿ ವಾರ್ಡ್​​​ಗೆ ದಾಖಲಿಸಲಾಗಿತ್ತು.ಹೃದ್ರೋಗ ತಜ್ಞರು ನಿಗಾವಹಿಸಿದ್ದರು.  ಇದೀಗ ಅವರಲ್ಲಿ ಡೆಂಗ್ಯೂ ಇರುವುದು ಗೊತ್ತಾಗಿದ್ದು, ವೈದ್ಯ ನಿತೀಶ್​ ನಾಯಕ್​ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮನಮೋಹನ್​ ಸಿಂಗ್​ ಶೀಘ್ರವೇ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಏಮ್ಸ್​ಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವರದಿ ಪಡೆದಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿಯವರೂ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮನಮೋಹನ್ ​ಸಿಂಗ್​ ಏಪ್ರಿಲ್​​ನಲ್ಲಿ ಕೊರೊನಾಕ್ಕೆ ಒಳಗಾಗಿದ್ದರು. ಆಗಲೂ ಸಹ ಏಮ್ಸ್​ಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು.

ಇದನ್ನೂ ಓದಿ: ಮೋದಿ ವಿರುದ್ಧ ಮಾತಾಡಿದ್ರೆ ದೇಶದ್ರೋಹಿಯಂತೆ, ಯಾವನ್ರಿ ಇವನು ಪ್ರಧಾನ ಮಂತ್ರಿ? -ಸಿದ್ದರಾಮಯ್ಯ ಗುಡುಗು

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily Devotional: ಹುತ್ತವಿರುವ ನಿವೇಶನ ಖರೀದಿಸಿದರೆ ಲಾಭವೋ ನಷ್ಟವೋ?
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
Daily horoscope: ಈ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ವಾಹನ ಖರೀದಿ ಯೋಗ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಶಿಥಿಲಾವಸ್ಥೆಗೆ ತಲುಪಿದ 1937ರಲ್ಲಿ ನಿರ್ಮಾಣವಾದ ಸರ್ಕಾರಿ ಶಾಲೆ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ